<p><strong>ಮಂಗಳೂರು:</strong> ಶುಕ್ರವಾರ ನಿಧನರಾಗಿದ್ದ ಅಂತರರಾಷ್ಟ್ರೀಯ ಖ್ಯಾತಿಯ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಾಲನಾಥ್ ಅವರ ಅಂತ್ಯಕ್ರಿಯೆ ಹುಟ್ಟೂರು ಬಂಟ್ವಾಳ ತಾಲ್ಲೂಕಿನ ಸಜಿಪಮೂಡ ಮಿತ್ತಕೆರೆಯಲ್ಲಿ ಸೋಮವಾರ ಸಂಜೆ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.</p>.<p>ಮಧ್ಯಾಹ್ನ 3 ಗಂಟೆಗೆ ಗೋಪಾಲನಾಥ್ ಅವರ ಪಾರ್ಥಿವ ಶರೀರ ಮಿತ್ತಕೆರೆ ತಲುಪಿತು. ಬಳಿಕ ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಸರ್ಕಾರಿ ಗೌರವ ಸಲ್ಲಿಸಲಾಯಿತು. ಡಿವೈಎಸ್ಪಿ ದಿನಕರ ಶೆಟ್ಟಿ ನೇತೃತ್ವದಲ್ಲಿ ಸಶಸ್ತ್ರ ಮೀಸಲು ಪಡೆಯ ಪೊಲೀಸರು ಗೌರವಾರ್ಥ ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದರು.</p>.<p>ಕಲಾವಿದರಾದ ನರಸಿಂಹಲು ವಡವಾಟಿ, ರಾಜೇಂದ್ರ ನಾಕೋಡ್, ಕೆ.ಸೇಖರ್ ಸೇರಿದಂತೆ ನೂರಾರು ಮಂದಿ ಗೌರವ ಸಲ್ಲಿಸಿದರು. ಸಂಸದ ನಳಿನ್ಕುಮಾರ್ ಕಟೀಲ್, ಶಾಸಕ ರಾಜೇಶ್ ನಾಯ್ಕ್, ಮಾಜಿ ಸಚಿವ ಬಿ. ರಮಾನಾಥ ರೈ ನಮನ ಸಲ್ಲಿಸಿದರು.</p>.<p>ಜೋಗಿ ಸಮುದಾಯದ ಸಂಪ್ರದಾಯದಂತೆ ಗೋಪಾಲನಾಥ್ ಅವರ ಮಕ್ಕಳಾದ ಗುರುಪ್ರಸಾದ್, ಮಣಿಕಾಂತ್ ಕದ್ರಿ ಅಂತಿಮ ವಿಧಿ ವಿಧಾನ ನೆರವೇರಿಸಿದರು. ನಂತರ ಅವರ ಕುಟುಂಬದ ಜಮೀನಿನಲ್ಲಿ ಪಾರ್ಥಿವ ಶರೀರವನ್ನು ಸಮಾಧಿ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಶುಕ್ರವಾರ ನಿಧನರಾಗಿದ್ದ ಅಂತರರಾಷ್ಟ್ರೀಯ ಖ್ಯಾತಿಯ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಾಲನಾಥ್ ಅವರ ಅಂತ್ಯಕ್ರಿಯೆ ಹುಟ್ಟೂರು ಬಂಟ್ವಾಳ ತಾಲ್ಲೂಕಿನ ಸಜಿಪಮೂಡ ಮಿತ್ತಕೆರೆಯಲ್ಲಿ ಸೋಮವಾರ ಸಂಜೆ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.</p>.<p>ಮಧ್ಯಾಹ್ನ 3 ಗಂಟೆಗೆ ಗೋಪಾಲನಾಥ್ ಅವರ ಪಾರ್ಥಿವ ಶರೀರ ಮಿತ್ತಕೆರೆ ತಲುಪಿತು. ಬಳಿಕ ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಸರ್ಕಾರಿ ಗೌರವ ಸಲ್ಲಿಸಲಾಯಿತು. ಡಿವೈಎಸ್ಪಿ ದಿನಕರ ಶೆಟ್ಟಿ ನೇತೃತ್ವದಲ್ಲಿ ಸಶಸ್ತ್ರ ಮೀಸಲು ಪಡೆಯ ಪೊಲೀಸರು ಗೌರವಾರ್ಥ ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದರು.</p>.<p>ಕಲಾವಿದರಾದ ನರಸಿಂಹಲು ವಡವಾಟಿ, ರಾಜೇಂದ್ರ ನಾಕೋಡ್, ಕೆ.ಸೇಖರ್ ಸೇರಿದಂತೆ ನೂರಾರು ಮಂದಿ ಗೌರವ ಸಲ್ಲಿಸಿದರು. ಸಂಸದ ನಳಿನ್ಕುಮಾರ್ ಕಟೀಲ್, ಶಾಸಕ ರಾಜೇಶ್ ನಾಯ್ಕ್, ಮಾಜಿ ಸಚಿವ ಬಿ. ರಮಾನಾಥ ರೈ ನಮನ ಸಲ್ಲಿಸಿದರು.</p>.<p>ಜೋಗಿ ಸಮುದಾಯದ ಸಂಪ್ರದಾಯದಂತೆ ಗೋಪಾಲನಾಥ್ ಅವರ ಮಕ್ಕಳಾದ ಗುರುಪ್ರಸಾದ್, ಮಣಿಕಾಂತ್ ಕದ್ರಿ ಅಂತಿಮ ವಿಧಿ ವಿಧಾನ ನೆರವೇರಿಸಿದರು. ನಂತರ ಅವರ ಕುಟುಂಬದ ಜಮೀನಿನಲ್ಲಿ ಪಾರ್ಥಿವ ಶರೀರವನ್ನು ಸಮಾಧಿ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>