<p><strong>ಮಂಗಳೂರು: </strong>ಡಾ.ಕದ್ರಿ ಗೋಪಾಲನಾಥ್ ಅಕಾಡೆಮಿ ಫಾರ್ ಆರ್ಟ್ಸ್ ವತಿಯಿಂದ ನೀಡುವ ‘ಕದ್ರಿ ಸಂಗೀತ ಸೌರಭ– 2022’ ಜೀವಮಾನ ಶ್ರೇಷ್ಠ ರಾಷ್ಟ್ರ ಪ್ರಶಸ್ತಿಗೆ ಸಂಗೀತ ವಿದ್ವಾನ್ ಎಂ.ನಾರಾಯಣ ಅವರನ್ನು ಆಯ್ಕೆ ಮಾಡಲಾಗಿದೆ.</p>.<p>‘ನಗರದ ಉರ್ವ ಸ್ಟೋರ್ನಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಇದೇ 6 ರಂದು ಏರ್ಪಡಿಸಿರುವ ಕದ್ರಿ ಗೋಪಾಲನಾಥ್ ಅವರ 73 ನೇ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.ಪ್ರಶಸ್ತಿಯು ₹ 50,000 ನಗದು ಹಾಗೂ ಬೆಳ್ಳಿಯ ಫಲಕ ಹೊಂದಿದೆ’ ಎಂದು ಅಕಾಡೆಮಿಯಪ್ರಧಾನ ಕಾರ್ಯದರ್ಶಿ ಕದ್ರಿ ಮಣಿಕಾಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ</p>.<p>ಮೂಡುಬಿದಿರೆಯಲ್ಲಿ ಹುಟ್ಟಿದ ಎಂ.ನಾರಾಯಣ 25 ವರ್ಷಗಳಿಂದ ಸಂಗೀತ ಪ್ರಾಧ್ಯಾಪಕರಾಗಿ ಸಾವಿರಾರು ವಿದ್ಯಾರ್ಥಿಗಳಿಗೆ ಸಂಗೀತ ಕಲಿಸಿದ್ದಾರೆ. ಸಂಗೀತ ರಚನಕಾರರಾಗಿರುವ ಇವರು ನಾರಾಯಣದಾಸ ನಾಮಾಂಕಿತದಲ್ಲಿ ಈವರೆಗೆ ವಿವಿಧ ರಾಗ ತಾಳಗಳಲ್ಲಿ 25 ಜತಿ ಸ್ವರಗಳು, 75 ತಾಣ ವರ್ಣಗಳು, 4 ಸ್ವರ ಜತಿಗಳು, 200 ಕೃತಿಗಳು ಹಾಗು 15 ತಿಲ್ಲಾನಗಳನ್ನು ಕನ್ನಡ, ತೆಲುಗು ಹಾಗೂ ಸಂಸ್ಕೃತ ಭಾಷೆಗಳಲ್ಲಿ ರಚಿಸಿದ್ದಾರೆ. 72 ಮೇಳಕರ್ತ ರಾಗಗಳಲ್ಲೂ ಕೃತಿ ರಚಿಸಿರುವ ರಾಜ್ಯದ ಕೆಲವೇ ಕೆಲವು ರಚನಕಾರರಲ್ಲಿ ಇವರು ಒಬ್ಬರು. ಮಹಾಗಣಪತಿಯ ಕುರಿತಾಗಿಯೇ 47 ಕೃತಿಗಳನ್ನು ರಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>ಡಾ.ಕದ್ರಿ ಗೋಪಾಲನಾಥ್ ಅಕಾಡೆಮಿ ಫಾರ್ ಆರ್ಟ್ಸ್ ವತಿಯಿಂದ ನೀಡುವ ‘ಕದ್ರಿ ಸಂಗೀತ ಸೌರಭ– 2022’ ಜೀವಮಾನ ಶ್ರೇಷ್ಠ ರಾಷ್ಟ್ರ ಪ್ರಶಸ್ತಿಗೆ ಸಂಗೀತ ವಿದ್ವಾನ್ ಎಂ.ನಾರಾಯಣ ಅವರನ್ನು ಆಯ್ಕೆ ಮಾಡಲಾಗಿದೆ.</p>.<p>‘ನಗರದ ಉರ್ವ ಸ್ಟೋರ್ನಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಇದೇ 6 ರಂದು ಏರ್ಪಡಿಸಿರುವ ಕದ್ರಿ ಗೋಪಾಲನಾಥ್ ಅವರ 73 ನೇ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.ಪ್ರಶಸ್ತಿಯು ₹ 50,000 ನಗದು ಹಾಗೂ ಬೆಳ್ಳಿಯ ಫಲಕ ಹೊಂದಿದೆ’ ಎಂದು ಅಕಾಡೆಮಿಯಪ್ರಧಾನ ಕಾರ್ಯದರ್ಶಿ ಕದ್ರಿ ಮಣಿಕಾಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ</p>.<p>ಮೂಡುಬಿದಿರೆಯಲ್ಲಿ ಹುಟ್ಟಿದ ಎಂ.ನಾರಾಯಣ 25 ವರ್ಷಗಳಿಂದ ಸಂಗೀತ ಪ್ರಾಧ್ಯಾಪಕರಾಗಿ ಸಾವಿರಾರು ವಿದ್ಯಾರ್ಥಿಗಳಿಗೆ ಸಂಗೀತ ಕಲಿಸಿದ್ದಾರೆ. ಸಂಗೀತ ರಚನಕಾರರಾಗಿರುವ ಇವರು ನಾರಾಯಣದಾಸ ನಾಮಾಂಕಿತದಲ್ಲಿ ಈವರೆಗೆ ವಿವಿಧ ರಾಗ ತಾಳಗಳಲ್ಲಿ 25 ಜತಿ ಸ್ವರಗಳು, 75 ತಾಣ ವರ್ಣಗಳು, 4 ಸ್ವರ ಜತಿಗಳು, 200 ಕೃತಿಗಳು ಹಾಗು 15 ತಿಲ್ಲಾನಗಳನ್ನು ಕನ್ನಡ, ತೆಲುಗು ಹಾಗೂ ಸಂಸ್ಕೃತ ಭಾಷೆಗಳಲ್ಲಿ ರಚಿಸಿದ್ದಾರೆ. 72 ಮೇಳಕರ್ತ ರಾಗಗಳಲ್ಲೂ ಕೃತಿ ರಚಿಸಿರುವ ರಾಜ್ಯದ ಕೆಲವೇ ಕೆಲವು ರಚನಕಾರರಲ್ಲಿ ಇವರು ಒಬ್ಬರು. ಮಹಾಗಣಪತಿಯ ಕುರಿತಾಗಿಯೇ 47 ಕೃತಿಗಳನ್ನು ರಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>