‘ಶ್ರೀಮಂತ ಪಾಟೀಲ ಅವರನ್ನು ಗೆಲ್ಲಿಸಲು ಬಹಳ ಶ್ರಮಿಸಿದೆವು. ಆದರೆ, ಅವರು ಸ್ವಾರ್ಥಕ್ಕಾಗಿ ಪಕ್ಷವನ್ನು ಬಲಿ ಕೊಟ್ಟು ಓಡಿ ಹೋದರು. ಅವರಿಗೆ ಈ ಚುನಾವಣೆಯಲ್ಲಿ ಪಾಠ ಕಲಿಸುತ್ತೇವೆ. ಆದರೆ, ಪಕ್ಷಕ್ಕಾಗಿ ದುಡಿದವರು ಹಾಗೂ ಸ್ಥಳೀಯರಿಗೆ ಟಿಕೆಟ್ ಕೊಡಬೇಕು. ಹೊರಗಿನವರಿಗೆ ಮಣೆ ಹಾಕಬಾರದು’ ಎಂದು ಕಾರ್ಯಕರ್ತರು ಒತ್ತಾಯಿಸಿದರು.