ಬಿಜೆಪಿ ಕುತಂತ್ರ; ಕಿಮ್ಮನೆ ಆರೋಪ: ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೇಲೆ ಒತ್ತಡ ತಂದು ಉಪ ಚುನಾವಣೆ ನಡೆಸುತ್ತಿದೆ. ಸಾರ್ವತ್ರಿಕ ಚುನಾವಣೆಯ ಹೊಸ್ತಿಲಲ್ಲಿ ಉಪ ಚುನಾವಣೆ ಅಗತ್ಯ ಇರಲಿಲ್ಲ. ಅವಧಿ ಕಡಿಮೆ ಇದೆ. ಈ ವಿಷಯ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೂ ಗೊತ್ತಿದೆ. ಆದರೂ ನಾಟಕ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.