<p>ಕಲಬುರಗಿ: ಕಲಬುರಗಿ, ಬೀದರ್, ಯಾದಗಿರಿ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಇಬ್ಬರು ನಿರ್ದೇಶಕರ ಆಯ್ಕೆಯನ್ನು ರದ್ದುಪಡಿಸಿದ್ದ ಕೆಎಟಿ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಕಲಬುರಗಿ ಹೈಕೋರ್ಟ್ ಪೀಠ ವಜಾಗೊಳಿಸಿ, ಕೆಎಟಿ ಆದೇಶವನ್ನು ಎತ್ತಿ ಹಿಡಿದೆ.</p>.<p>‘ಚಿಂಚೋಳಿ ತಾಲ್ಲೂಕಿನ ಅಶೋಕ ಅನ್ನಾರಾವ್ ಮತ್ತು ವಿಠಲ ರೆಡ್ಡಿ ಕೃಷ್ಣರೆಡ್ಡಿ ಅವರು ಜಂಟಿ ನಿಬಂಧಕರ ಆದೇಶಕ್ಕೆ ಕೆಎಟಿಯಿಂದ ತಡೆಯಾಜ್ಞೆ ತಂದಿದ್ದರು. ಈ ಆಯ್ಕೆಯನ್ನು ರದ್ದುಪಡಿಸಿ ಕಲಬುರಗಿ ಪ್ರಾಂತದ ಸಹಕಾರ ಸಂಘಗಳ ಜಂಟಿ ನಿಬಂಧಕರ ಆದೇಶವನ್ನು ಕೆಎಟಿ ಎತ್ತಿ ಹಿಡಿದು ಕಳೆದ ಜ. 14 ರಂದು ತಡೆಯಾಜ್ಞೆ ತೆರವುಗೊಳಿಸಿತ್ತು. ಇದನ್ನು ಪ್ರಶ್ನಿಸಿ ಈ ಇಬ್ಬರೂ ಕಲಬುರಗಿ ಹೈಕೋರ್ಟ್ ಪೀಠದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ವಿಶ್ವಜೀತ್ ಶೆಟ್ಟಿ ಅವರಿದ್ದ ಪೀಠವು, ಮಾರ್ಚ್ 23 ರಂದು ರಿಟ್ ಅರ್ಜಿಯನ್ನು ವಜಾಗೊಳಿಸಿ, ಕೆಎಟಿ ಆದೇಶವನ್ನು ಎತ್ತಿ ಹಿಡಿದಿದೆ’ ಎಂದು ದೂರುದಾರ ದಿವಾಕರರಾವ್ ಜಹಾಗೀರದಾರ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-34-1812163829</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ಕಲಬುರಗಿ, ಬೀದರ್, ಯಾದಗಿರಿ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಇಬ್ಬರು ನಿರ್ದೇಶಕರ ಆಯ್ಕೆಯನ್ನು ರದ್ದುಪಡಿಸಿದ್ದ ಕೆಎಟಿ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಕಲಬುರಗಿ ಹೈಕೋರ್ಟ್ ಪೀಠ ವಜಾಗೊಳಿಸಿ, ಕೆಎಟಿ ಆದೇಶವನ್ನು ಎತ್ತಿ ಹಿಡಿದೆ.</p>.<p>‘ಚಿಂಚೋಳಿ ತಾಲ್ಲೂಕಿನ ಅಶೋಕ ಅನ್ನಾರಾವ್ ಮತ್ತು ವಿಠಲ ರೆಡ್ಡಿ ಕೃಷ್ಣರೆಡ್ಡಿ ಅವರು ಜಂಟಿ ನಿಬಂಧಕರ ಆದೇಶಕ್ಕೆ ಕೆಎಟಿಯಿಂದ ತಡೆಯಾಜ್ಞೆ ತಂದಿದ್ದರು. ಈ ಆಯ್ಕೆಯನ್ನು ರದ್ದುಪಡಿಸಿ ಕಲಬುರಗಿ ಪ್ರಾಂತದ ಸಹಕಾರ ಸಂಘಗಳ ಜಂಟಿ ನಿಬಂಧಕರ ಆದೇಶವನ್ನು ಕೆಎಟಿ ಎತ್ತಿ ಹಿಡಿದು ಕಳೆದ ಜ. 14 ರಂದು ತಡೆಯಾಜ್ಞೆ ತೆರವುಗೊಳಿಸಿತ್ತು. ಇದನ್ನು ಪ್ರಶ್ನಿಸಿ ಈ ಇಬ್ಬರೂ ಕಲಬುರಗಿ ಹೈಕೋರ್ಟ್ ಪೀಠದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ವಿಶ್ವಜೀತ್ ಶೆಟ್ಟಿ ಅವರಿದ್ದ ಪೀಠವು, ಮಾರ್ಚ್ 23 ರಂದು ರಿಟ್ ಅರ್ಜಿಯನ್ನು ವಜಾಗೊಳಿಸಿ, ಕೆಎಟಿ ಆದೇಶವನ್ನು ಎತ್ತಿ ಹಿಡಿದಿದೆ’ ಎಂದು ದೂರುದಾರ ದಿವಾಕರರಾವ್ ಜಹಾಗೀರದಾರ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-34-1812163829</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>