<p>ಕಲಬುರಗಿ: ಕಲ್ಯಾಣ ಕರ್ನಾಟಕದ ಕಲಬುರಗಿ ಮಾರ್ಗವಾಗಿ ಮುಂಬೈ–ಬೆಂಗಳೂರು ಮಧ್ಯೆ ನೂತನ ವಂದೇ ಭಾರತ್ ಸ್ಲೀಪರ್ ರೈಲು ಓಡಿಸಲು ರೈಲ್ವೆ ಸಚಿವರು ಒಪ್ಪಿಗೆ ನೀಡಿರುವ ಕುರಿತು ಸಚಿವ ಪ್ರಲ್ಹಾದ ಜೋಶಿ ಅವರ ಹೇಳಿಕೆಯನ್ನು ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (ಕೆಕೆಸಿಸಿಐ) ಸ್ವಾಗತಿಸಿದೆ.</p>.<p>ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಕೆಕೆಸಿಸಿಐ ಅಧ್ಯಕ್ಷ ಶರಣಬಸಪ್ಪ ಪಪ್ಪಾ, ‘ಕಲಬುರಗಿ–ಬೆಂಗಳೂರು ನಡುವೆ ಉತ್ತಮ ಹಾಗೂ ವೇಗವಾದ ರೈಲು ಸಂಪರ್ಕ ಕಲ್ಪಿಸಬೇಕು ಎಂಬುದು ಈ ಭಾಗದ ಜನತೆ ಹಾಗೂ ಕೈಗಾರಿಕೆಗಳ ದೀರ್ಘಕಾಲದ ಬೇಡಿಕೆಯಾಗಿದ್ದು, ಈ ಕುರಿತು ನಿರಂತರವಾಗಿ ಕೇಂದ್ರ ರೈಲ್ವೆ ಸಚಿವಾಲಯದ ಗಮನ ಸೆಳೆಯುತ್ತ ಬಂದಿದ್ದೇವೆ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಆಹಾರ ಮತ್ತು ನಾಗರಿಕ ಪೂರೈಕೆ, ನವೀಕರಿಸಬಹುದಾದ ಇಂಧನ ಮೂಲಗಳ ಸಚಿವ ಪ್ರಲ್ಹಾದ ಜೋಶಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೆವು. ಇದಕ್ಕೆ ಸ್ಪಂದಿಸಿದ ಸಚಿವರು ಈ ರೈಲನ್ನು ಮಧ್ಯ ಕರ್ನಾಟಕದ ಬದಲು ಕಲ್ಯಾಣ ಕರ್ನಾಟಕ ಮಾರ್ಗವಾಗಿ ಓಡಿಸಲು ಮುಂದಾಗಿದ್ದಾರೆ. ಈ ಕುರಿತು ಸಚಿವ ಜೋಶಿ ಅವರೇ ಕರೆ ಮಾಡಿ ತಿಳಿಸಿದ್ದಾರೆ’ ಎಂದು ಹೇಳಿದ್ದಾರೆ.</p>.<p>ಈ ರೈಲಿನಿಂದಾಗಿ ಮುಂಬೈ–ಕಲಬುರಗಿ –ಬೆಂಗಳೂರು ಸಂಪರ್ಕ ಹೆಚ್ಚು ಬಲವಾಗುತ್ತದೆ. ವ್ಯಾಪಾರ, ಕೈಗಾರಿಕೆ ಹಾಗೂ ಉದ್ಯಮಗಳಿಗೆ ಉತ್ತೇ ಜನ ಸಿಗುತ್ತದೆ. ಪ್ರಯಾಣಿಕರಿಗೆ ಸುಗಮ ಹಾಗೂ ವೇಗವಾದ ಸಂಚಾರ ಸಾಧ್ಯವಾಗುತ್ತದೆ. ಕಲ್ಯಾಣ ಕರ್ನಾಟಕ ಪ್ರದೇಶದ ಆರ್ಥಿಕ ಅಭಿವೃದ್ಧಿಗೆ ದೊಡ್ಡ ಉತ್ತೇಜನ ದೊರೆಯುತ್ತದೆ’ ಎಂದು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260416-34-597450519</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ಕಲ್ಯಾಣ ಕರ್ನಾಟಕದ ಕಲಬುರಗಿ ಮಾರ್ಗವಾಗಿ ಮುಂಬೈ–ಬೆಂಗಳೂರು ಮಧ್ಯೆ ನೂತನ ವಂದೇ ಭಾರತ್ ಸ್ಲೀಪರ್ ರೈಲು ಓಡಿಸಲು ರೈಲ್ವೆ ಸಚಿವರು ಒಪ್ಪಿಗೆ ನೀಡಿರುವ ಕುರಿತು ಸಚಿವ ಪ್ರಲ್ಹಾದ ಜೋಶಿ ಅವರ ಹೇಳಿಕೆಯನ್ನು ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (ಕೆಕೆಸಿಸಿಐ) ಸ್ವಾಗತಿಸಿದೆ.</p>.<p>ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಕೆಕೆಸಿಸಿಐ ಅಧ್ಯಕ್ಷ ಶರಣಬಸಪ್ಪ ಪಪ್ಪಾ, ‘ಕಲಬುರಗಿ–ಬೆಂಗಳೂರು ನಡುವೆ ಉತ್ತಮ ಹಾಗೂ ವೇಗವಾದ ರೈಲು ಸಂಪರ್ಕ ಕಲ್ಪಿಸಬೇಕು ಎಂಬುದು ಈ ಭಾಗದ ಜನತೆ ಹಾಗೂ ಕೈಗಾರಿಕೆಗಳ ದೀರ್ಘಕಾಲದ ಬೇಡಿಕೆಯಾಗಿದ್ದು, ಈ ಕುರಿತು ನಿರಂತರವಾಗಿ ಕೇಂದ್ರ ರೈಲ್ವೆ ಸಚಿವಾಲಯದ ಗಮನ ಸೆಳೆಯುತ್ತ ಬಂದಿದ್ದೇವೆ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಆಹಾರ ಮತ್ತು ನಾಗರಿಕ ಪೂರೈಕೆ, ನವೀಕರಿಸಬಹುದಾದ ಇಂಧನ ಮೂಲಗಳ ಸಚಿವ ಪ್ರಲ್ಹಾದ ಜೋಶಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೆವು. ಇದಕ್ಕೆ ಸ್ಪಂದಿಸಿದ ಸಚಿವರು ಈ ರೈಲನ್ನು ಮಧ್ಯ ಕರ್ನಾಟಕದ ಬದಲು ಕಲ್ಯಾಣ ಕರ್ನಾಟಕ ಮಾರ್ಗವಾಗಿ ಓಡಿಸಲು ಮುಂದಾಗಿದ್ದಾರೆ. ಈ ಕುರಿತು ಸಚಿವ ಜೋಶಿ ಅವರೇ ಕರೆ ಮಾಡಿ ತಿಳಿಸಿದ್ದಾರೆ’ ಎಂದು ಹೇಳಿದ್ದಾರೆ.</p>.<p>ಈ ರೈಲಿನಿಂದಾಗಿ ಮುಂಬೈ–ಕಲಬುರಗಿ –ಬೆಂಗಳೂರು ಸಂಪರ್ಕ ಹೆಚ್ಚು ಬಲವಾಗುತ್ತದೆ. ವ್ಯಾಪಾರ, ಕೈಗಾರಿಕೆ ಹಾಗೂ ಉದ್ಯಮಗಳಿಗೆ ಉತ್ತೇ ಜನ ಸಿಗುತ್ತದೆ. ಪ್ರಯಾಣಿಕರಿಗೆ ಸುಗಮ ಹಾಗೂ ವೇಗವಾದ ಸಂಚಾರ ಸಾಧ್ಯವಾಗುತ್ತದೆ. ಕಲ್ಯಾಣ ಕರ್ನಾಟಕ ಪ್ರದೇಶದ ಆರ್ಥಿಕ ಅಭಿವೃದ್ಧಿಗೆ ದೊಡ್ಡ ಉತ್ತೇಜನ ದೊರೆಯುತ್ತದೆ’ ಎಂದು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260416-34-597450519</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>