‘ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾದ ಬಳಿಕ ಪ್ರಿಯಾಂಕ್ ಖರ್ಗೆ ಅವರು ಆನೆ ಬಲ ಬಂದಂತೆ ಆಡುತ್ತಿದ್ದಾರೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಅವರನ್ನು ಮನೆಗೆ ಕಳುಹಿಸುತ್ತೇವೆ. ರಾಜಕೀಯ ಒತ್ತಡ ತಂದು, ನನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಿ, ನನ್ನ ವಿರುದ್ಧ ಗಡಿಪಾರು ಆದೇಶ ಹೊರಡುವಂತೆ ಮಾಡಿದರು. ಆದರೆ, ನನಗೆ ಗಡಿಪಾರು ಆದೇಶ ಬಂದಾಗ ನೀವೇ (ಪ್ರಿಯಾಂಕ್ ಖರ್ಗೆ) ಗಡಿಪಾರು ಆಗಿದ್ದೀರಾ’ ಎಂದು ವ್ಯಂಗ್ಯವಾಡಿದರು.