<p>ಕಲಬುರಗಿ: ‘ರಾಜ್ಯ ಸರ್ಕಾರವು ಶಾಲಾ ವಿದ್ಯಾರ್ಥಿಗಳ ತೃತೀಯ ಭಾಷೆಯ ಕಲಿಕೆಯನ್ನು ಬೋಧನೆಗೆ ಮಾತ್ರ ಸೀಮಿತಗೊಳಿಸಿ ಅಂಕಗಳನ್ನು ಪರಿಗಣಿಸದೇ ಕೇವಲ ಗ್ರೇಡ್ ನೀಡುವ ನಿರ್ಧಾರ ತೆಗೆದುಕೊಂಡಿರುವುದು ಖಂಡನೀಯ’ ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ.ನಮೋಶಿ ಹೇಳಿದರು.</p>.<p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾನೊಬ್ಬ ಕನ್ನಡಿಗನಾಗಿದ್ದು, ಕನ್ನಡ ಭಾಷೆಯ ಬಗ್ಗೆ ಅಭಿಮಾನ ಹೊಂದಿದ್ದೇನೆ. ತೃತೀಯ ಭಾಷೆ ಎಂದರೆ ಕೇವಲ ಹಿಂದಿ ಅಲ್ಲ. ಗಡಿ ಭಾಗಗಳಲ್ಲಿ ತೃತೀಯ ಭಾಷೆಗಳಾಗಿ ಕನ್ನಡ, ಸಂಸ್ಕೃತ, ಮರಾಠಿ, ತೆಲುಗು, ಉರ್ದು ಭಾಷೆಗಳನ್ನು ಬೋಧಿಸಲಾಗುತ್ತದೆ. ಈ ವಿಷಯಗಳಿಗೆ ಮಹತ್ವ ಇಲ್ಲದಂತೆ ಮಾಡಿ ಎಸ್ಎಸ್ಎಲ್ಸಿ ಪರೀಕ್ಷೆಯ ಅಂಕಗಳನ್ನು 525ಕ್ಕೆ ಸೀಮಿತಗೊಳಿಸಿರುವುದು ಸರಿಯಲ್ಲ’ ಎಂದರು.</p>.<p>‘ತೃತೀಯ ಭಾಷೆ ರದ್ದುಗೊಳಿಸುವುದರಿಂದ ಉದ್ಯೋಗದ ಅವಕಾಶಗಳೂ ಇಲ್ಲದಂತಾಗುತ್ತವೆ. ಈ ಭಾಷೆಗಳನ್ನು ಬೋಧಿಸುವ ಶಿಕ್ಷಕರ ಭವಿಷ್ಯವೇನು? ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುತ್ತಿರುವ ಸಂದರ್ಭದಲ್ಲೇ ಏಕಾಏಕಿ ಈ ನಿರ್ಧಾರ ತೆಗೆದುಕೊಂಡಿರುವುದು ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತದೆ. ಪೋಷಕರಲ್ಲಿ ಗೊಂದಲಕ್ಕೂ ಕಾರಣವಾಗಿದೆ’ ಎಂದರು.</p>.<p>‘ರಾಜ್ಯ ಸರ್ಕಾರವು ಉರ್ದು, ತೆಲುಗು, ಆಂಗ್ಲ ಮಾಧ್ಯಮದ ಶಾಲೆಗಳನ್ನು ನಡೆಸಲು ಅವಕಾಶ ನೀಡಿದೆ. ಆದರೆ ಈ ಶಾಲೆಗಳಲ್ಲಿ ಮಕ್ಕಳು ತೃತೀಯ ಭಾಷೆಯನ್ನಾಗಿ ನಮ್ಮ ರಾಜ್ಯದ ಮಾತೃಭಾಷೆಯಾದ ಕನ್ನಡವನ್ನು ಆಯ್ಕೆ ಮಾಡುತ್ತ ಬಂದಿದ್ದಾರೆ. ಇಂತಹ ಶಾಲೆಗಳಲ್ಲಿ ತೃತೀಯ ಭಾಷೆ ರದ್ದು ಮಾಡಲು ಹೊರಟಿರುವುದು, ಹಿಂದಿ ಭಾಷೆಯ ಮೇಲಿನ ಸಿಟ್ಟಿನಿಂದಾಗಿ ಕನ್ನಡ ಭಾಷೆಯನ್ನೇ ಕೊಲ್ಲಲು ಮುಂದಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಸರ್ಕಾರದ ನಿರ್ಧಾರದಿಂದ ವಿದ್ಯಾರ್ಥಿಗಳಲ್ಲಿ ಗಂಭೀರತೆ ಕಡಿಮೆಯಾಗುತ್ತದೆ. ಶಿಕ್ಷಕರ ವರ್ಷದ ಪರಿಶ್ರಮ ವ್ಯರ್ಥವಾಗುತ್ತದೆ. ಮೌಲ್ಯಮಾಪನ ವ್ಯವಸ್ಥೆಯೇ ಪ್ರಶ್ನಾರ್ಥಕವಾಗುತ್ತದೆ. ಆದ್ದರಿಂದ ಈ ನೀತಿಯನ್ನು ತಕ್ಷಣ ಹಿಂತೆಗೆದುಕೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-34-334076712</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ‘ರಾಜ್ಯ ಸರ್ಕಾರವು ಶಾಲಾ ವಿದ್ಯಾರ್ಥಿಗಳ ತೃತೀಯ ಭಾಷೆಯ ಕಲಿಕೆಯನ್ನು ಬೋಧನೆಗೆ ಮಾತ್ರ ಸೀಮಿತಗೊಳಿಸಿ ಅಂಕಗಳನ್ನು ಪರಿಗಣಿಸದೇ ಕೇವಲ ಗ್ರೇಡ್ ನೀಡುವ ನಿರ್ಧಾರ ತೆಗೆದುಕೊಂಡಿರುವುದು ಖಂಡನೀಯ’ ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ.ನಮೋಶಿ ಹೇಳಿದರು.</p>.<p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾನೊಬ್ಬ ಕನ್ನಡಿಗನಾಗಿದ್ದು, ಕನ್ನಡ ಭಾಷೆಯ ಬಗ್ಗೆ ಅಭಿಮಾನ ಹೊಂದಿದ್ದೇನೆ. ತೃತೀಯ ಭಾಷೆ ಎಂದರೆ ಕೇವಲ ಹಿಂದಿ ಅಲ್ಲ. ಗಡಿ ಭಾಗಗಳಲ್ಲಿ ತೃತೀಯ ಭಾಷೆಗಳಾಗಿ ಕನ್ನಡ, ಸಂಸ್ಕೃತ, ಮರಾಠಿ, ತೆಲುಗು, ಉರ್ದು ಭಾಷೆಗಳನ್ನು ಬೋಧಿಸಲಾಗುತ್ತದೆ. ಈ ವಿಷಯಗಳಿಗೆ ಮಹತ್ವ ಇಲ್ಲದಂತೆ ಮಾಡಿ ಎಸ್ಎಸ್ಎಲ್ಸಿ ಪರೀಕ್ಷೆಯ ಅಂಕಗಳನ್ನು 525ಕ್ಕೆ ಸೀಮಿತಗೊಳಿಸಿರುವುದು ಸರಿಯಲ್ಲ’ ಎಂದರು.</p>.<p>‘ತೃತೀಯ ಭಾಷೆ ರದ್ದುಗೊಳಿಸುವುದರಿಂದ ಉದ್ಯೋಗದ ಅವಕಾಶಗಳೂ ಇಲ್ಲದಂತಾಗುತ್ತವೆ. ಈ ಭಾಷೆಗಳನ್ನು ಬೋಧಿಸುವ ಶಿಕ್ಷಕರ ಭವಿಷ್ಯವೇನು? ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುತ್ತಿರುವ ಸಂದರ್ಭದಲ್ಲೇ ಏಕಾಏಕಿ ಈ ನಿರ್ಧಾರ ತೆಗೆದುಕೊಂಡಿರುವುದು ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತದೆ. ಪೋಷಕರಲ್ಲಿ ಗೊಂದಲಕ್ಕೂ ಕಾರಣವಾಗಿದೆ’ ಎಂದರು.</p>.<p>‘ರಾಜ್ಯ ಸರ್ಕಾರವು ಉರ್ದು, ತೆಲುಗು, ಆಂಗ್ಲ ಮಾಧ್ಯಮದ ಶಾಲೆಗಳನ್ನು ನಡೆಸಲು ಅವಕಾಶ ನೀಡಿದೆ. ಆದರೆ ಈ ಶಾಲೆಗಳಲ್ಲಿ ಮಕ್ಕಳು ತೃತೀಯ ಭಾಷೆಯನ್ನಾಗಿ ನಮ್ಮ ರಾಜ್ಯದ ಮಾತೃಭಾಷೆಯಾದ ಕನ್ನಡವನ್ನು ಆಯ್ಕೆ ಮಾಡುತ್ತ ಬಂದಿದ್ದಾರೆ. ಇಂತಹ ಶಾಲೆಗಳಲ್ಲಿ ತೃತೀಯ ಭಾಷೆ ರದ್ದು ಮಾಡಲು ಹೊರಟಿರುವುದು, ಹಿಂದಿ ಭಾಷೆಯ ಮೇಲಿನ ಸಿಟ್ಟಿನಿಂದಾಗಿ ಕನ್ನಡ ಭಾಷೆಯನ್ನೇ ಕೊಲ್ಲಲು ಮುಂದಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಸರ್ಕಾರದ ನಿರ್ಧಾರದಿಂದ ವಿದ್ಯಾರ್ಥಿಗಳಲ್ಲಿ ಗಂಭೀರತೆ ಕಡಿಮೆಯಾಗುತ್ತದೆ. ಶಿಕ್ಷಕರ ವರ್ಷದ ಪರಿಶ್ರಮ ವ್ಯರ್ಥವಾಗುತ್ತದೆ. ಮೌಲ್ಯಮಾಪನ ವ್ಯವಸ್ಥೆಯೇ ಪ್ರಶ್ನಾರ್ಥಕವಾಗುತ್ತದೆ. ಆದ್ದರಿಂದ ಈ ನೀತಿಯನ್ನು ತಕ್ಷಣ ಹಿಂತೆಗೆದುಕೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-34-334076712</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>