<p><strong>ಕಲಬುರ್ಗಿ: </strong>ಕೊರೊನಾ ವೈರಸ್ ಹಬ್ಬುತ್ತಿರುವುದರಿಂದ ನಗರದ ಎಲ್ಲ ಪೆಟ್ರೋಲ್ ಬಂಕ್ಗಳನ್ನು ಬುಧವಾರದಿಂದ (ಮಾ 18) ಬಂದ್ ಮಾಡಲಾಗುತ್ತಿದೆ ಎಂದು ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಮಂಗಳವಾರ ರಾತ್ರಿ ಸುಳ್ಳು ವದಂತಿ ಹಬ್ಬಿಸಿದ್ದಾರೆ.</p>.<p>ಇದರಿಂದಾಗಿ ಗಾಬರಿಗೊಂಡ ಬೈಕ್ ಸವಾರರು, ಕಾರಿನವರು ಒಮ್ಮೆಲೇ ಬಂಕ್ಗಳತ್ತ ಧಾವಿಸಿದರು. ಬೆಳ್ಳಂಬೆಳಿಗ್ಗೆಯೇ ಸ್ಟೇಶನ್ ರಸ್ತೆಯ ಎರಡು ಪ್ರಮುಖ ಪೆಟ್ರೋಲ್ ಬಂಕ್ಗಳ ಮುಂದೆ ವಾಹನಗಳು ನಿಂತಿದ್ದವು.</p>.<p>ಇದರಿಂದಾಗಿ ನಗರದ ಕೆಲ ಪೆಟ್ರೋಲ್ ಬಂಕ್ಗಳಲ್ಲಿ ದಟ್ಟಣಿ ಕಂಡು ಬಂತು. ‘ಬಂಕ್ ಬಂದ್ ಮಾಡಲು ಯಾರೂ ಹೇಳಿಲ್ಲ. ಹೀಗಾಗಿ, ಬಂಕ್ ತೆರೆದಿರುತ್ತದೆ’ ಎಂದು ಬಂಕ್ ಸಿಬ್ಬಂದಿ ಹೇಳುತ್ತಲೇ ಇದ್ದರು. ಇದರಿಂದ ನಿರಾಳಗೊಂಡ ಕೆಲವರು ನಿರಮ್ಮಳವಾಗಿ ತಮ್ಮ ಕೆಲಸಗಳಿಗೆ ತೆರಳಿದರು.</p>.<p>ಈ ಬಗ್ಗೆ ಹೇಳಿಕೆ ನೀಡಿರುವ ಜಿಲ್ಲಾಧಿಕಾರಿ ಶರತ್ ಬಿ. ಅವರು ಅತ್ಯವಶ್ಯ ಸೇವೆಗಳಾದ ಸಾರಿಗೆ, ಕಿರಾಣಿ ಅಂಗಡಿಗಳು, ಮೆಡಿಕಲ್ ಶಾಪ್, ಪೆಟ್ರೋಲ್ ಪಂಪ್, ಸಾರಿಗೆ, ಆಸ್ಪತ್ರೆ ಸೇವೆಗಳಂತಹ ಅತ್ಯವಶ್ಯ ಸೇವೆಗಳನ್ನು ಬಂದ್ ಮಾಡುವುದಿಲ್ಲ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>ಕೊರೊನಾ ವೈರಸ್ ಹಬ್ಬುತ್ತಿರುವುದರಿಂದ ನಗರದ ಎಲ್ಲ ಪೆಟ್ರೋಲ್ ಬಂಕ್ಗಳನ್ನು ಬುಧವಾರದಿಂದ (ಮಾ 18) ಬಂದ್ ಮಾಡಲಾಗುತ್ತಿದೆ ಎಂದು ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಮಂಗಳವಾರ ರಾತ್ರಿ ಸುಳ್ಳು ವದಂತಿ ಹಬ್ಬಿಸಿದ್ದಾರೆ.</p>.<p>ಇದರಿಂದಾಗಿ ಗಾಬರಿಗೊಂಡ ಬೈಕ್ ಸವಾರರು, ಕಾರಿನವರು ಒಮ್ಮೆಲೇ ಬಂಕ್ಗಳತ್ತ ಧಾವಿಸಿದರು. ಬೆಳ್ಳಂಬೆಳಿಗ್ಗೆಯೇ ಸ್ಟೇಶನ್ ರಸ್ತೆಯ ಎರಡು ಪ್ರಮುಖ ಪೆಟ್ರೋಲ್ ಬಂಕ್ಗಳ ಮುಂದೆ ವಾಹನಗಳು ನಿಂತಿದ್ದವು.</p>.<p>ಇದರಿಂದಾಗಿ ನಗರದ ಕೆಲ ಪೆಟ್ರೋಲ್ ಬಂಕ್ಗಳಲ್ಲಿ ದಟ್ಟಣಿ ಕಂಡು ಬಂತು. ‘ಬಂಕ್ ಬಂದ್ ಮಾಡಲು ಯಾರೂ ಹೇಳಿಲ್ಲ. ಹೀಗಾಗಿ, ಬಂಕ್ ತೆರೆದಿರುತ್ತದೆ’ ಎಂದು ಬಂಕ್ ಸಿಬ್ಬಂದಿ ಹೇಳುತ್ತಲೇ ಇದ್ದರು. ಇದರಿಂದ ನಿರಾಳಗೊಂಡ ಕೆಲವರು ನಿರಮ್ಮಳವಾಗಿ ತಮ್ಮ ಕೆಲಸಗಳಿಗೆ ತೆರಳಿದರು.</p>.<p>ಈ ಬಗ್ಗೆ ಹೇಳಿಕೆ ನೀಡಿರುವ ಜಿಲ್ಲಾಧಿಕಾರಿ ಶರತ್ ಬಿ. ಅವರು ಅತ್ಯವಶ್ಯ ಸೇವೆಗಳಾದ ಸಾರಿಗೆ, ಕಿರಾಣಿ ಅಂಗಡಿಗಳು, ಮೆಡಿಕಲ್ ಶಾಪ್, ಪೆಟ್ರೋಲ್ ಪಂಪ್, ಸಾರಿಗೆ, ಆಸ್ಪತ್ರೆ ಸೇವೆಗಳಂತಹ ಅತ್ಯವಶ್ಯ ಸೇವೆಗಳನ್ನು ಬಂದ್ ಮಾಡುವುದಿಲ್ಲ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>