ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಮುಂದುವರಿದಿದ್ದು, ಕುದುರೆಮುಖ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ತುಂಗಾ ಮೂಲದ ಬಳಿ ಗುಡ್ಡದ ಮಣ್ಣು ಕುಸಿದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು ಕಳಸ- ಮಂಗಳೂರುಸಂಪರ್ಕ ಬಂದ್ ಆಗಿದೆ.
ಸಂಚಾರ ಬಂದ್ ಆಗಿರುವುದರಿಂದ ವಾಹನಗಳು ಸಾಲು ಗಟ್ಟಿ ನಿಂತಿವೆ. ಪ್ರಯಾಣಿಕರು, ವಾಹನ ಸವಾರರು ಮಾರ್ಗ ಮಧ್ಯೆ ಸಿಲುಕಿಕೊಂಡು ಪರದಾಡುವಂತಾಗಿದೆ.