ಪ್ರಿಯಾಂಕ್ ಖರ್ಗೆ ಮಾತನಾಡಿ, ‘ಸದ್ಯದ ಸ್ಥಿತಿಗತಿಯನ್ನು ಅಧ್ಯಕ್ಷರಿಗೆ ತಿಳಿಸಿದ್ದೇನೆ. ಜೆಡಿಎಸ್ ಜೊತೆಗೆ ಚರ್ಚೆ ನಡೆದಿದೆ. ಅವರು (ಜೆಡಿಎಸ್ನವರು) ಅವರ ಪಕ್ಷದ ಹಿತಾಸಕ್ತಿ ಬಗ್ಗೆ ಯೋಚನೆ ಮಾಡುತ್ತಿದ್ದಾರೆ. ನಾವು ನಮ್ಮ ಪಕ್ಷದ ಹಿತದ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. ಸದ್ಯಕ್ಕೆ ಅವರು ಅವರ ಬೇಡಿಕೆ ಇಟ್ಡಿದ್ದಾರೆ. ಸದಸ್ಯರ ಆಯ್ಕೆಯ ಗೆಜೆಟ್ ಅಧಿಸೂಚನೆಯನ್ನು ಸರ್ಕಾರ ಮೊದಲು ಹೊರಡಿಸಲಿ’ ಎಂದರು.