‘ತನಿಖೆಯಲ್ಲಿ ಯಾವುದೇ ಪ್ರಗತಿ ಸಾಧಿಸಿಯೇ ಇಲ್ಲ. ಇದುವರೆಗೆ ನೀವು ಏನು ಮಾಡಿದ್ದೀರಿ ಎಂಬುದನ್ನು ಅವಲೋಕಿಸಿದರೆ ಏನೂ ಇಲ್ಲ ಎಂಬ ಅಂಶ ಬೆಳಕಿಗೆ ಬಂದಿದೆ’ ಎಂದು ರಾಜ್ಯ ಸರ್ಕಾರದ ಪರ ವಕೀಲರನ್ನು ಪ್ರಶ್ನಿಸಿದ ನ್ಯಾಯಪೀಠ, ‘ತನಿಖೆ ಪೂರ್ಣಗೊಳ್ಳಲು ಇನ್ನೂ ಎಷ್ಟು ಕಾಲಾವಕಾಶ ಅಗತ್ಯವಿದೆ, ಪ್ರಕರಣದ ಕುರಿತು ಆದೇಶ ಹೊರಡಿಸಬೇಕೇ’ ಎಂದು ಪ್ರಶ್ನಿಸಿತು.