ಕಳೆದ ವರ್ಷ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಶಾಲಾ ವಿದ್ಯಾರ್ಥಿನಿ ಆಶಿಕಾ ಕಾಲು ಸಂಕ ದಾಟುವಸಂದರ್ಭ ನೀರು ಪಾಲಾಗಿ ಮೃತಪಟ್ಟ ಸುದ್ದಿಯನ್ನು ಗಮನಿಸಿ ಮುಖ್ಯಮಂತ್ರಿ ಕುಮಾರಸ್ವಾಮಿ ಶಾಲಾ ಸಂಪರ್ಕಸೇತು ಯೋಜನೆ ಜಾರಿ ಮಾಡಿದರು. ನದಿ, ಹಳ್ಳ, ತೊರೆಯನ್ನು ದಾಟಲು ಅನುಕೂಲವಾಗುವಂತೆ ನಿರ್ಮಿಸಲಾಗಿದ್ದ ಕಾಲು ಸಂಕಗಳನ್ನು ಬದಲಾಯಿಸಿ ಶಾಶ್ವತವಾದ ಕಿರು
ಸೇತುವೆಗಳನ್ನು ನಿರ್ಮಿಸುವಂತೆ ಸೂಚಿಸಿ ಆಯವ್ಯಯದಲ್ಲಿ ಅನುದಾನಮೀಸಲಿಟ್ಟಿದ್ದರು.