<p><strong>ಕಲಬುರಗಿ:</strong> ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ಯಾದಗಿರಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಸತತ ಮೂರನೇ ದಿನವೂ ಮಳೆ ಮುಂದುವರಿದಿದೆ.</p>.<p>ಕಲಬುರಗಿ ನಗರ, ಜಿಲ್ಲೆಯ ಕಾಳಗಿ, ಜೇವರ್ಗಿ, ಚಿತ್ತಾಪುರ ತಾಲ್ಲೂಕಿನ ಹಲವೆಡೆ ಅರ್ಧ ಗಂಟೆಗೂ ಹೆಚ್ಚು ಕಾಲ ಬಿರುಸಿನ ಮಳೆ ಸುರಿಯಿತು. ಹವಾಮಾನ ಇಲಾಖೆ ಜಿಲ್ಲೆಗೆ ಶನಿವಾರ ಆರೆಂಜ್ ಅಲರ್ಟ್ ಘೋಷಿಸಿದೆ.</p>.<p>ಬೀದರ್ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಮಧ್ಯಾಹ್ನದವರೆಗೆ ವರ್ಷಧಾರೆಯಾಗಿದೆ. ಬೀದರ್, ಹುಲಸೂರ, ಭಾಲ್ಕಿ, ಹುಮನಾಬಾದ್ ಹಾಗೂ ಚಿಟಗುಪ್ಪ ತಾಲ್ಲೂಕು ವ್ಯಾಪ್ತಿಯಲ್ಲೂ ಮಳೆ ಬಿದ್ದಿದೆ.</p>.<p>ಯಾದಗಿರಿ, ಶಹಾಪುರ, ಸುರಪುರ, ಕೆಂಭಾವಿ, ವಡಗೇರಾ, ಗುರುಮಠಕಲ್, ಹುಣಸಗಿ ಹಾಗೂ ಕೊಪ್ಪಳ, ರಾಯಚೂರು ಜಿಲ್ಲೆಯ ದೇವದುರ್ಗ, ಮಾನ್ವಿ ಹಾಗೂ ಸಿರವಾರದಲ್ಲಿ ವರ್ಷಧಾರೆಯಾಗಿದೆ.</p>.<p><strong>ಧಾರವಾಡ, ಬೆಳಗಾವಿ ಜಿಲ್ಲೆಯಲ್ಲೂ ಮಳೆ:</strong></p>.<p>ಹುಬ್ಬಳ್ಳಿ ನಗರ, ಗ್ರಾಮೀಣ ಪ್ರದೇಶ ಸೇರಿದಂತೆ ಧಾರವಾಡ ಹಾಗೂ ಸುತ್ತಮುತ್ತ ಶುಕ್ರವಾರ ಧಾರಾಕಾರ ಮಳೆಯಾಗಿದೆ. ಕೆಎಂಸಿ–ಆರ್ಐ ಆಸ್ಪತ್ರೆಯ ಬಿಆರ್ಟಿಎಸ್ ಬಸ್ ನಿಲ್ದಾಣದ ಕಾರಿಡಾರ್ ಜಲಾವೃತಗೊಂಡಿತ್ತು. ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ಜನರು ತುಸು ನಿರಾಳರಾದರು.</p>.<p>ಬೆಳಗಾವಿ ನಗರ ಹಾಗೂ ತಾಲ್ಲೂಕಿನ ವಿವಿಧೆಡೆಯೂ ಸಾಧಾರಣ ಮಳೆ ಸುರಿಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ಯಾದಗಿರಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಸತತ ಮೂರನೇ ದಿನವೂ ಮಳೆ ಮುಂದುವರಿದಿದೆ.</p>.<p>ಕಲಬುರಗಿ ನಗರ, ಜಿಲ್ಲೆಯ ಕಾಳಗಿ, ಜೇವರ್ಗಿ, ಚಿತ್ತಾಪುರ ತಾಲ್ಲೂಕಿನ ಹಲವೆಡೆ ಅರ್ಧ ಗಂಟೆಗೂ ಹೆಚ್ಚು ಕಾಲ ಬಿರುಸಿನ ಮಳೆ ಸುರಿಯಿತು. ಹವಾಮಾನ ಇಲಾಖೆ ಜಿಲ್ಲೆಗೆ ಶನಿವಾರ ಆರೆಂಜ್ ಅಲರ್ಟ್ ಘೋಷಿಸಿದೆ.</p>.<p>ಬೀದರ್ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಮಧ್ಯಾಹ್ನದವರೆಗೆ ವರ್ಷಧಾರೆಯಾಗಿದೆ. ಬೀದರ್, ಹುಲಸೂರ, ಭಾಲ್ಕಿ, ಹುಮನಾಬಾದ್ ಹಾಗೂ ಚಿಟಗುಪ್ಪ ತಾಲ್ಲೂಕು ವ್ಯಾಪ್ತಿಯಲ್ಲೂ ಮಳೆ ಬಿದ್ದಿದೆ.</p>.<p>ಯಾದಗಿರಿ, ಶಹಾಪುರ, ಸುರಪುರ, ಕೆಂಭಾವಿ, ವಡಗೇರಾ, ಗುರುಮಠಕಲ್, ಹುಣಸಗಿ ಹಾಗೂ ಕೊಪ್ಪಳ, ರಾಯಚೂರು ಜಿಲ್ಲೆಯ ದೇವದುರ್ಗ, ಮಾನ್ವಿ ಹಾಗೂ ಸಿರವಾರದಲ್ಲಿ ವರ್ಷಧಾರೆಯಾಗಿದೆ.</p>.<p><strong>ಧಾರವಾಡ, ಬೆಳಗಾವಿ ಜಿಲ್ಲೆಯಲ್ಲೂ ಮಳೆ:</strong></p>.<p>ಹುಬ್ಬಳ್ಳಿ ನಗರ, ಗ್ರಾಮೀಣ ಪ್ರದೇಶ ಸೇರಿದಂತೆ ಧಾರವಾಡ ಹಾಗೂ ಸುತ್ತಮುತ್ತ ಶುಕ್ರವಾರ ಧಾರಾಕಾರ ಮಳೆಯಾಗಿದೆ. ಕೆಎಂಸಿ–ಆರ್ಐ ಆಸ್ಪತ್ರೆಯ ಬಿಆರ್ಟಿಎಸ್ ಬಸ್ ನಿಲ್ದಾಣದ ಕಾರಿಡಾರ್ ಜಲಾವೃತಗೊಂಡಿತ್ತು. ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ಜನರು ತುಸು ನಿರಾಳರಾದರು.</p>.<p>ಬೆಳಗಾವಿ ನಗರ ಹಾಗೂ ತಾಲ್ಲೂಕಿನ ವಿವಿಧೆಡೆಯೂ ಸಾಧಾರಣ ಮಳೆ ಸುರಿಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>