‘1984ರ ಸಿಖ್ ವಿರೋಧಿ ಗಲಭೆಗಳಲ್ಲಿ ಕಮಲ್ನಾಥ್ ಅವರ ಪಾತ್ರ ಇರುವ ವಿಚಾರ ವಿವರವಾಗಿ ದಾಖಲಾಗಿದೆ. ರಾಜಕೀಯ ಸಭೆಗಳಲ್ಲಿ, ಮಾಧ್ಯಮಗೋಷ್ಠಿಗಳಲ್ಲಿ ನೀವು ಕೋಮು ಸೌಹಾರ್ದದ ಬಗ್ಗೆ ಮಾತನಾಡಿದ್ದೀರಿ. ನಿಮ್ಮ ಮಾತಿಗೆ ನೀವು ಬದ್ಧರಾಗಿರುವಿರಾ? ಬಿಜೆಪಿ ಸರ್ಕಾರವನ್ನು ವಿರೋಧಿಸಿ ಮತ ಚಲಾಯಿಸಿದ ನಾವೆಲ್ಲರೂ ಈ ಪ್ರಶ್ನೆಯನ್ನು ನಿಮಗೆ ಕೇಳುತ್ತಿದ್ದೇವೆ. 2002ರ (ಗೋಧ್ರಾ) ಕೊಲೆಗಾರರನ್ನು ವಿರೋಧಿಸಿದ ನಾವು 1984 ಕೊಲೆಗಡುಕರನ್ನು ಒಪ್ಪಲು ಸಾಧ್ಯವಿಲ್ಲ. 1984ರ ಅಪರಾಧಿಗಳಿಗೆ ಶಿಕ್ಷೆ ಸಿಗುವಂತೆ ಮಾಡಿ. ಆಗ ಮಾತ್ರ ನೀವು 2002ರ ಕೊಲೆಗಡುಕರ ವಿರುದ್ಧ ಜಯಗಳಿಸಿದ್ದೇವೆ ಎಂದು ಹೇಳಿಕೊಳ್ಳಬಹುದು’ ಎಂದು ಆ ಪತ್ರ ರಾಹುಲ್ ಗಾಂಧಿಗೆ ಸವಾಲು ಹಾಕಿದೆ.