ಬೆಂಗಳೂರು: ‘ನಾಡೋಜ ಕಮಲಾ ಹಂಪನಾ ಸಾಹಿತ್ಯ ಪುರಸ್ಕಾರ ವೇದಿಕೆ’ ನೀಡುವ 2021ನೇ ಸಾಲಿನ ಪುರಸ್ಕಾರಕ್ಕೆ ಸಪ್ನ ಬುಕ್ ಹೌಸ್ನ ವ್ಯವಸ್ಥಾಪಕ ನಿರ್ದೇಶಕನಿತಿನ್ ಶಾ, ಲೇಖಕಿ ವಿಜಯಾ ಸುಬ್ಬರಾಜ್ ಸೇರಿದಂತೆ ಆರು ಮಂದಿ ಆಯ್ಕೆಯಾಗಿದ್ದಾರೆ.
ಸಾಹಿತಿ ಹರಿಹರಪ್ರಿಯ, ಲೇಖಕರಾದ ಕೆ. ರಾಜಕುಮಾರ್, ಅಜಿತ ಮುರಗುಂದಿ ಹಾಗೂ ಪ್ರಾಕೃತ ವಿದ್ವಾಂಸ ಶಾಂತಿನಾಥ ಶಿರಹಟ್ಟಿ ಅವರೂಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ತಲಾ ₹ 10 ಸಾವಿರ ನಗದು ಒಳಗೊಂಡಿದೆ.
ಇದೇ 31ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಗಾಂಧಿ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ.ಸಿ. ಸೋಮಶೇಖರ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.