<p><strong>ನವದೆಹಲಿ:</strong> ‘ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಆನೆಗಳ ಹಾವಳಿ ವ್ಯಾಪಕವಾಗಿದೆ. ಬನ್ನೇರುಘಟ್ಟ, ಸಾತನೂರು ಮತ್ತಿತರ ಕಡೆಗಳಲ್ಲಿ ಆನೆ ದಾಳಿಗಳಿಂದ ಮನುಷ್ಯರು ಮೃತಪಟ್ಟಿದ್ದಾರೆ. ಕೃಷಿ ನಷ್ಟ ಅಪಾರವಾಗಿದೆ. ಬ್ಯಾರಿಕೇಡ್ ಅಳವಡಿಕೆಗೆ ಕಾಂಪಾ ನಿಧಿಯಿಂದ ವಿಶೇಷ ಅನುದಾನ ನೀಡಬೇಕು’ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಾ.ಸಿ.ಎನ್.ಮಂಜುನಾಥ್ ಆಗ್ರಹಿಸಿದರು.</p>.<p>ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಅವರು, ಕಾಡು ಪ್ರಾಣಿಗಳ ದಾಳಿಯಿಂದ ಅರಣ್ಯ ಇಲಾಖೆಯವರು ಮೃತಪಟ್ಟರೆ ₹25 ಲಕ್ಷ ಪರಿಹಾರ ನೀಡಲಾಗುತ್ತದೆ. ರೈತರಿಗೆ ₹15 ಲಕ್ಷವಷ್ಟೇ ಪರಿಹಾರ ಒದಗಿಸಲಾಗುತ್ತದೆ. ಈ ತಾರತಮ್ಯ ಸರಿಯಲ್ಲ. ಪರಿಹಾರವನ್ನು ₹25 ಲಕ್ಷಕ್ಕೆ ಏರಿಸಬೇಕು’ ಎಂದು ಅವರು ಒತ್ತಾಯಿಸಿದರು.</p>.<p>ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ಅರಣ್ಯ ಸಚಿವ ಭೂಪೇಂದರ್ ಯಾದವ್ ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಆನೆಗಳ ಹಾವಳಿ ವ್ಯಾಪಕವಾಗಿದೆ. ಬನ್ನೇರುಘಟ್ಟ, ಸಾತನೂರು ಮತ್ತಿತರ ಕಡೆಗಳಲ್ಲಿ ಆನೆ ದಾಳಿಗಳಿಂದ ಮನುಷ್ಯರು ಮೃತಪಟ್ಟಿದ್ದಾರೆ. ಕೃಷಿ ನಷ್ಟ ಅಪಾರವಾಗಿದೆ. ಬ್ಯಾರಿಕೇಡ್ ಅಳವಡಿಕೆಗೆ ಕಾಂಪಾ ನಿಧಿಯಿಂದ ವಿಶೇಷ ಅನುದಾನ ನೀಡಬೇಕು’ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಾ.ಸಿ.ಎನ್.ಮಂಜುನಾಥ್ ಆಗ್ರಹಿಸಿದರು.</p>.<p>ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಅವರು, ಕಾಡು ಪ್ರಾಣಿಗಳ ದಾಳಿಯಿಂದ ಅರಣ್ಯ ಇಲಾಖೆಯವರು ಮೃತಪಟ್ಟರೆ ₹25 ಲಕ್ಷ ಪರಿಹಾರ ನೀಡಲಾಗುತ್ತದೆ. ರೈತರಿಗೆ ₹15 ಲಕ್ಷವಷ್ಟೇ ಪರಿಹಾರ ಒದಗಿಸಲಾಗುತ್ತದೆ. ಈ ತಾರತಮ್ಯ ಸರಿಯಲ್ಲ. ಪರಿಹಾರವನ್ನು ₹25 ಲಕ್ಷಕ್ಕೆ ಏರಿಸಬೇಕು’ ಎಂದು ಅವರು ಒತ್ತಾಯಿಸಿದರು.</p>.<p>ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ಅರಣ್ಯ ಸಚಿವ ಭೂಪೇಂದರ್ ಯಾದವ್ ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>