<p>ಕಂಪ್ಲಿ: ‘ರಾಜ್ಯದ ಗ್ಯಾರಂಟಿಗಳು ಜನರನ್ನು ಸೋಮಾರಿಗಳನ್ನಾಗಿಸಿವೆ ಎಂದು ಆರೋಪಿಸುತ್ತಿದ್ದ ಬಿಜೆಪಿಯವರು ಈಚೆಗೆ ನಡೆದ ಇತರೆ ರಾಜ್ಯಗಳ ಚುನಾವಣೆಯಲ್ಲಿ ಅವುಗಳನ್ನು ನಕಲು ಮಾಡಿ ಗೆಲುವು ಸಾಧಿಸಿದ್ದು, ಅವರಿಗೆ ಮಾನ ಮಾರ್ಯಾದೆ, ನೈತಿಕತೆ ಇದೆಯೇ’ ಎಂದು ಶಾಸಕ ಜೆ.ಎನ್. ಗಣೇಶ್ ಪ್ರಶ್ನಿಸಿದರು.</p>.<p>ಪಟ್ಟಣದ 17ನೇ ವಾರ್ಡ್ ವೀರತ್ ಪೇಟೆಯಲ್ಲಿ ಕೆ.ಕೆ.ಆರ್.ಡಿ.ಬಿ ಅನುದಾನ ₹ 35ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಂಗಳವಾರ ಭೂಮಿ ಪೂಜೆ ನೆರವೇರಿಸಿ, ಕಾಂಗ್ರೆಸ್ ಪಕ್ಷದ ಆಡಳಿತ ರೀತಿ ನೀತಿ, ಗ್ಯಾರಂಟಿಗಳಿಂದ ರಾಜ್ಯದಲ್ಲಿ ಪಕ್ಷದ ಇಬ್ಬರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.</p>.<p>ಮುಖ್ಯಮಂತ್ರಿ ಬದಲಾವಣೆ ವಿಚಾರ ಹೈಕಮಾಂಡ್ಗೆ ಬಿಟ್ಟಿದ್ದು, ಈ ವಿಷಯದಲ್ಲಿ ಯಾವುದೇ ಗೊಂದಲ ಇಲ್ಲ. ಸದ್ಯ ಸಚಿವ ಸಂಪುಟದಲ್ಲಿ ಎರಡು ಸಚಿವ ಸ್ಥಾನ ಖಾಲಿ ಇದ್ದು, ವಿಸ್ತರಣೆಯಾದಲ್ಲಿ ನನಗೆ ಸಚಿವ ಸ್ಥಾನ ದೊರೆಯುವ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>ಇದಕ್ಕೂ ಮುನ್ನ ತಾಲ್ಲೂಕಿನ ಎಮ್ಮಿಗನೂರು ಗ್ರಾಮದಲ್ಲಿ ₹ 71.50 ಲಕ್ಷ ವೆಚ್ಚದ ಸಂತೆ ಮಾರುಕಟ್ಟೆ ಬೈಪಾಸ್ ರಸ್ತೆ, ಶ್ರೀರಾಮರಂಗಾಪುರದಲ್ಲಿ ₹ 2.40 ಕೋಟಿ ವೆಚ್ಚದ ನೀರಿನ ಮೇಲ್ತೊಟ್ಟಿ ನಿರ್ಮಾಣ ಕಾಮಗಾರಿಗೆ ಶಾಸಕರು ಚಾಲನೆ ನೀಡಿದರು.</p>.<p>ಮುಖಂಡರಾದ ಕೆ.ಶ್ರೀನಿವಾಸ ರಾವ್, ಭಟ್ಟ ಪ್ರಸಾದ್, ಸಿ.ಆರ್.ಹನುಮಂತ, ಕೆ.ಮಸ್ತಾನ್ಸಾಬ್, ಮಾಗನೂರು ಬಸವರಾಜ, ಬಿ.ಸಿದ್ದಪ್ಪ, ಬಿ.ನಾರಾಯಣಪ್ಪ, ಡಿ.ಪ್ರಶಾಂತ್, ಜಾಫರ್, ಕೆ.ವೀರೇಶ್, ಎಸ್.ಅನಿಲ್, ಎಮ್ಮಿಗನೂರಿನಲ್ಲಿ ಬಿ.ಸದಾಶಿವಪ್ಪ, ಕನಕಪ್ಪ ಸುಣಗಾರ, ಎಳ್ಳಾರ್ಥಿ ರಾಘವೇಂದ್ರ, ರಾಮಾಂಜಿನಿ, ರಾಜಾಸಾಬ್ ಇತರರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-25-1489817767</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಂಪ್ಲಿ: ‘ರಾಜ್ಯದ ಗ್ಯಾರಂಟಿಗಳು ಜನರನ್ನು ಸೋಮಾರಿಗಳನ್ನಾಗಿಸಿವೆ ಎಂದು ಆರೋಪಿಸುತ್ತಿದ್ದ ಬಿಜೆಪಿಯವರು ಈಚೆಗೆ ನಡೆದ ಇತರೆ ರಾಜ್ಯಗಳ ಚುನಾವಣೆಯಲ್ಲಿ ಅವುಗಳನ್ನು ನಕಲು ಮಾಡಿ ಗೆಲುವು ಸಾಧಿಸಿದ್ದು, ಅವರಿಗೆ ಮಾನ ಮಾರ್ಯಾದೆ, ನೈತಿಕತೆ ಇದೆಯೇ’ ಎಂದು ಶಾಸಕ ಜೆ.ಎನ್. ಗಣೇಶ್ ಪ್ರಶ್ನಿಸಿದರು.</p>.<p>ಪಟ್ಟಣದ 17ನೇ ವಾರ್ಡ್ ವೀರತ್ ಪೇಟೆಯಲ್ಲಿ ಕೆ.ಕೆ.ಆರ್.ಡಿ.ಬಿ ಅನುದಾನ ₹ 35ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಂಗಳವಾರ ಭೂಮಿ ಪೂಜೆ ನೆರವೇರಿಸಿ, ಕಾಂಗ್ರೆಸ್ ಪಕ್ಷದ ಆಡಳಿತ ರೀತಿ ನೀತಿ, ಗ್ಯಾರಂಟಿಗಳಿಂದ ರಾಜ್ಯದಲ್ಲಿ ಪಕ್ಷದ ಇಬ್ಬರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.</p>.<p>ಮುಖ್ಯಮಂತ್ರಿ ಬದಲಾವಣೆ ವಿಚಾರ ಹೈಕಮಾಂಡ್ಗೆ ಬಿಟ್ಟಿದ್ದು, ಈ ವಿಷಯದಲ್ಲಿ ಯಾವುದೇ ಗೊಂದಲ ಇಲ್ಲ. ಸದ್ಯ ಸಚಿವ ಸಂಪುಟದಲ್ಲಿ ಎರಡು ಸಚಿವ ಸ್ಥಾನ ಖಾಲಿ ಇದ್ದು, ವಿಸ್ತರಣೆಯಾದಲ್ಲಿ ನನಗೆ ಸಚಿವ ಸ್ಥಾನ ದೊರೆಯುವ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>ಇದಕ್ಕೂ ಮುನ್ನ ತಾಲ್ಲೂಕಿನ ಎಮ್ಮಿಗನೂರು ಗ್ರಾಮದಲ್ಲಿ ₹ 71.50 ಲಕ್ಷ ವೆಚ್ಚದ ಸಂತೆ ಮಾರುಕಟ್ಟೆ ಬೈಪಾಸ್ ರಸ್ತೆ, ಶ್ರೀರಾಮರಂಗಾಪುರದಲ್ಲಿ ₹ 2.40 ಕೋಟಿ ವೆಚ್ಚದ ನೀರಿನ ಮೇಲ್ತೊಟ್ಟಿ ನಿರ್ಮಾಣ ಕಾಮಗಾರಿಗೆ ಶಾಸಕರು ಚಾಲನೆ ನೀಡಿದರು.</p>.<p>ಮುಖಂಡರಾದ ಕೆ.ಶ್ರೀನಿವಾಸ ರಾವ್, ಭಟ್ಟ ಪ್ರಸಾದ್, ಸಿ.ಆರ್.ಹನುಮಂತ, ಕೆ.ಮಸ್ತಾನ್ಸಾಬ್, ಮಾಗನೂರು ಬಸವರಾಜ, ಬಿ.ಸಿದ್ದಪ್ಪ, ಬಿ.ನಾರಾಯಣಪ್ಪ, ಡಿ.ಪ್ರಶಾಂತ್, ಜಾಫರ್, ಕೆ.ವೀರೇಶ್, ಎಸ್.ಅನಿಲ್, ಎಮ್ಮಿಗನೂರಿನಲ್ಲಿ ಬಿ.ಸದಾಶಿವಪ್ಪ, ಕನಕಪ್ಪ ಸುಣಗಾರ, ಎಳ್ಳಾರ್ಥಿ ರಾಘವೇಂದ್ರ, ರಾಮಾಂಜಿನಿ, ರಾಜಾಸಾಬ್ ಇತರರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-25-1489817767</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>