<p><strong>ಮಂಗಳೂರು</strong>: ಇಲ್ಲಿನ ಕಂಕನಾಡಿಯ ಬ್ರಹ್ಮಬೈದರ್ಕಳ ಗರಡಿ ಕ್ಷೇತ್ರದ 150ನೇ ವರ್ಷಾಚರಣೆಯು ನಾಗಬ್ರಹ್ಮ ಮಂಡಲೋತ್ಸವದೊಂದಿಗೆ ಬುಧವಾರ ಬೆಳಿಗ್ಗೆ ಸಂಪನ್ನಗೊಂಡಿತು.</p>.<p>ಕಂಕನಾಡಿ ಕ್ಷೇತ್ರದಲ್ಲಿ ಫಲಪುಷ್ಪಗಳಿಂದ ಅಲಂಕೃತವಾಗಿದ್ದ ಭವ್ಯವೇದಿಕೆಯಲ್ಲಿ ಮನೋಜ್ ಶಾಂತಿ ಮತ್ತು ಬಳಗದವರು ನಾಗಬ್ರಹ್ಮ ಮಂಡಲೋತ್ಸವವನ್ನು ಅಚ್ಚುಕಟ್ಟಾಗಿ ನಡೆಸಿಕೊಟ್ಟರು. ಇದಕ್ಕೂ ಮುನ್ನ ಕ್ಷೇತ್ರದಲ್ಲಿ ಹಾಲಿಟ್ಟು ಸೇವೆ ನಡೆಯಿತು.</p>.<p>ಕರಾವಳಿಯಾದ್ಯಂತ ನಡೆಯುವ ನಾಗಮಂಡಲೋತ್ಸವವನ್ನು ಬ್ರಾಹ್ಮಣ ಸಮುದಾಯವರೇ ಹೆಚ್ಚಾಗಿ ನೆರವೇರಿಸುತ್ತಾರೆ. ಕಂಕನಾಡಿ ಕ್ಷೇತ್ರದ ನಾಗಬ್ರಹ್ಮ ಮಂಡಲೋತ್ಸವವನ್ನು ಬಿಲ್ಲವ ಸಮುದಾಯದ ನಾಗಪಾತ್ರಿ ಮನೋಜ್ ಶಾಂತಿ ಮತ್ತು ಬಳಗದವರು ನಿರ್ವಹಿಸಿದರು.</p>.<p>ಕ್ಷೇತ್ರಕ್ಕೆ 150 ವರ್ಷ ತುಂಬಿದ ಸಲುವಾಗಿ ಮಾ.3ರಿಂದ ಸಹಸ್ರ ನಾರಿಕೇಳ ಗಣಯಾಗ, ಬ್ರಹ್ಮ ಬೈದರ್ಕಳರಿಗೆ ಸಹಸ್ರ ಕುಂಭಾಭಿಷೇಕ, ಆಶ್ಲೇಷ ಬಲಿ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆದವು. ಈ ಕಾರ್ಯಕ್ರಮಗಳಲ್ಲಿ ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು ಎಂದು ಗರಡಿಯ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಇಲ್ಲಿನ ಕಂಕನಾಡಿಯ ಬ್ರಹ್ಮಬೈದರ್ಕಳ ಗರಡಿ ಕ್ಷೇತ್ರದ 150ನೇ ವರ್ಷಾಚರಣೆಯು ನಾಗಬ್ರಹ್ಮ ಮಂಡಲೋತ್ಸವದೊಂದಿಗೆ ಬುಧವಾರ ಬೆಳಿಗ್ಗೆ ಸಂಪನ್ನಗೊಂಡಿತು.</p>.<p>ಕಂಕನಾಡಿ ಕ್ಷೇತ್ರದಲ್ಲಿ ಫಲಪುಷ್ಪಗಳಿಂದ ಅಲಂಕೃತವಾಗಿದ್ದ ಭವ್ಯವೇದಿಕೆಯಲ್ಲಿ ಮನೋಜ್ ಶಾಂತಿ ಮತ್ತು ಬಳಗದವರು ನಾಗಬ್ರಹ್ಮ ಮಂಡಲೋತ್ಸವವನ್ನು ಅಚ್ಚುಕಟ್ಟಾಗಿ ನಡೆಸಿಕೊಟ್ಟರು. ಇದಕ್ಕೂ ಮುನ್ನ ಕ್ಷೇತ್ರದಲ್ಲಿ ಹಾಲಿಟ್ಟು ಸೇವೆ ನಡೆಯಿತು.</p>.<p>ಕರಾವಳಿಯಾದ್ಯಂತ ನಡೆಯುವ ನಾಗಮಂಡಲೋತ್ಸವವನ್ನು ಬ್ರಾಹ್ಮಣ ಸಮುದಾಯವರೇ ಹೆಚ್ಚಾಗಿ ನೆರವೇರಿಸುತ್ತಾರೆ. ಕಂಕನಾಡಿ ಕ್ಷೇತ್ರದ ನಾಗಬ್ರಹ್ಮ ಮಂಡಲೋತ್ಸವವನ್ನು ಬಿಲ್ಲವ ಸಮುದಾಯದ ನಾಗಪಾತ್ರಿ ಮನೋಜ್ ಶಾಂತಿ ಮತ್ತು ಬಳಗದವರು ನಿರ್ವಹಿಸಿದರು.</p>.<p>ಕ್ಷೇತ್ರಕ್ಕೆ 150 ವರ್ಷ ತುಂಬಿದ ಸಲುವಾಗಿ ಮಾ.3ರಿಂದ ಸಹಸ್ರ ನಾರಿಕೇಳ ಗಣಯಾಗ, ಬ್ರಹ್ಮ ಬೈದರ್ಕಳರಿಗೆ ಸಹಸ್ರ ಕುಂಭಾಭಿಷೇಕ, ಆಶ್ಲೇಷ ಬಲಿ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆದವು. ಈ ಕಾರ್ಯಕ್ರಮಗಳಲ್ಲಿ ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು ಎಂದು ಗರಡಿಯ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>