ಮಾರ್ಚ್ ತಿಂಗಳಲ್ಲಿ ರೇಣುಕಾಚಾರ್ಯ ಜಯಂತಿ, ಯೋಗಿನಾರೇಯಣ ಯತೀಂದ್ರರ ಜಯಂತಿ (ಕೈವಾರ ತಾತಯ್ಯ), ಅಗ್ನಿಬನ್ನಿರಾಯ ಜಯಂತಿ, ಏಪ್ರಿಲ್ ತಿಂಗಳಲ್ಲಿ ದೇವರ ದಾಸಿಮಯ್ಯ ಜಯಂತಿ, ಭಗವಾನ್ ಮಹಾವೀರ ಜಯಂತಿ, ಅಕ್ಕಮಹಾದೇವಿ ಜಯಂತಿ, ಮೇ ತಿಂಗಳಲ್ಲಿ ಬಸವ ಜಯಂತಿ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ, ಶಂಕರಾಚಾರ್ಯ ಜಯಂತಿ, ಭಗೀರಥ ಜಯಂತಿ, ಜೂನ್ ತಿಂಗಳಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ, ಕೆಂಪೇಗೌಡ ಜಯಂತಿ, ಜುಲೈ ತಿಂಗಳಲ್ಲಿ ಫ.ಗು. ಹಳಕಟ್ಟಿಯವರ ಜನ್ಮದಿನ ಪ್ರಯುಕ್ತ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ, ಹಡಪದ ಅಪ್ಪಣ್ಣ ಜಯಂತಿ ಆಚರಿಸಲಾಗುತ್ತದೆ.