ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಆದೇಶದಲ್ಲಿ ತಪ್ಪಾಗಿ ಕನ್ನಡ ಬಳಕೆ: ಕ್ರಮಕ್ಕೆ ಆಗ್ರಹ

Last Updated 17 ಜುಲೈ 2022, 3:28 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಿ ಆದೇಶದಲ್ಲಿ ಕನ್ನಡವನ್ನು ತಪ್ಪಾಗಿ ಬಳಸಿದ ಅಧಿಕಾರಿಯ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಆಗ್ರಹಿಸಿದೆ.

ಈ ಬಗ್ಗೆ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಪತ್ರ ಬರೆದಿದ್ದಾರೆ. ‘ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಉಪಕಾರ್ಯದರ್ಶಿ ಕನ್ನಡವನ್ನು ತಪ್ಪಾಗಿ ಬಳಸಿ, ಭಾಷೆಯನ್ನು ಅಗೌರವಿಸಿದ್ದರ ಬಗ್ಗೆ ದೂರುಗಳು ಬಂದಿವೆ. ಸಾಮಾಜಿಕ ಜಾಲತಾಣದಲ್ಲಿಯೂ ಪ್ರಾಧಿಕಾರವನ್ನು ಗುರುತು ಮಾಡಿ, ದೂರು ಸಲ್ಲಿಸಲಾಗುತ್ತಿದೆ. ಸರ್ಕಾರದಲ್ಲಿ ಜವಾಬ್ದಾರಿಯುತ ಹುದ್ದೆ ಅಲಂಕರಿಸಿರುವವರು ಕನ್ನಡವನ್ನು ತಪ್ಪಾಗಿ ಬರೆದು, ಆದೇಶ ಹೊರಡಿಸುವುದು ಭಾಷೆಯ ಬಗೆಗಿನ ನಿರ್ಲಕ್ಷ್ಯ ತೋರಿಸಯತ್ತದೆ’ ಎಂದು ತಿಳಿಸಲಾಗಿದೆ.

‘ಆದೇಶದಲ್ಲಿ ತಪ್ಪಾಗಿ ಕನ್ನಡ ಬರದವರ ವಿರುದ್ಧ ಅಧಿಕಾರಿಯ ವಿರುದ್ಧ ಕ್ರಮ ಕೈಗೊಂಡು, ಮುಂದೆ ಇಂತಹ ತಪ್ಪುಗಳು ಆಗದಂತೆ ನೋಡಿಕೊಳ್ಳಬೇಕು’ ಎಂದು ಪತ್ರದಲ್ಲಿ ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT