ಬೆಂಗಳೂರು: ರಾಜ್ಯದಲ್ಲಿರುವ ಎಲ್ಲ ಸಿಬಿಎಸ್ಇ, ಐಸಿಎಸ್ಇ ಶಾಲೆಗಳು ಹಾಗೂ ಕೇಂದ್ರೀಯ ವಿದ್ಯಾಲಯಗಳು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕನ್ನಡವನ್ನು ಕಡ್ಡಾಯವಾಗಿ ಕಲಿಸುವ ಸಂಬಂಧ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಒಂದೆರಡು ದಿನಗಳಲ್ಲಿ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಿದ್ದಾರೆ.
ನಗರದಲ್ಲಿ ಈಚೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಜತೆಗೆ ನಡೆಸಿದ ಸಭೆಯಲ್ಲಿ ಸಚಿವರು ಈ ಬಗ್ಗೆ ಮೌಖಿಕ ಸೂಚನೆ ನೀಡಿದ್ದರು. ಸಚಿವರ ಈ ಹೇಳಿಕೆಗೆ ಖಾಸಗಿ ಶಾಲೆಗಳ ಒಕ್ಕೂಟದ (ಕ್ಯಾಮ್ಸ್) ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.