<p><strong>ಬೆಂಗಳೂರು</strong>: ‘ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರ ಆಯ್ಕೆಗೆ ಕನಿಷ್ಠ ವಯೋಮಿತಿ 60 ವರ್ಷ ಪೂರೈಸಬೇಕೆಂಬ ನಿಯಮವನ್ನು ಮುಂದಿನ ವರ್ಷದಿಂದ ಸಡಿಲಿಸುವ ಜೊತೆಗೆ, ಪ್ರಶಸ್ತಿ ಮೊತ್ತವನ್ನು ₹ 1 ಲಕ್ಷದಿಂದ ₹ 5 ಲಕ್ಷಕ್ಕೆ ಹೆಚ್ಚಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.</p>.<p>ರವೀಂದ್ರ ಕಲಾಕ್ಷೇತ್ರದಲ್ಲಿ ಸೋಮವಾರ ನಡೆದ 66ನೇ ಕರ್ನಾಟಕರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ‘ಇನ್ನು ಮುಂದೆ ಈ ಪ್ರಶಸ್ತಿಗೆ ಯಾರೂ ಅರ್ಜಿ ಸಲ್ಲಿಸುವ ಅಗತ್ಯ ಇಲ್ಲ. ಆಯ್ಕೆ ಸಮಿತಿಯೇ ಸಾಧಕರನ್ನು ಗುರುತಿಸಲಿದೆ’ ಎಂದೂ ಹೇಳಿದರು.</p>.<p>‘ಆಯ್ಕೆ ಎಂಬುದು ಶೋಧನೆಯಿಂದ ಆಗಬೇಕೇ ಹೊರತು ಅರ್ಜಿಯಿಂದಲ್ಲ. ವಯಸ್ಸಿನ ಆಧಾರದಲ್ಲಿ ಪ್ರಶಸ್ತಿ ನೀಡುವುದೂ ಸರಿಯಲ್ಲ ಎಂಬ ಭಾವನೆಯಿದೆ. ಹೀಗಾಗಿ, ಕನಿಷ್ಠ ವಯೋಮಿತಿ ವಿಧಿಸದೆ, ಪ್ರತಿಭೆ ಗುರುತಿಸಿ ಪ್ರಶಸ್ತಿ ನೀಡಲು ಅವಕಾಶ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಲಾಗುವುದು’ ಎಂದೂ ತಿಳಿಸಿದರು.</p>.<p>ವಿವಿಧ ಕ್ಷೇತ್ರಗಳ 66 ಸಾಧಕರು ಹಾಗೂ ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ 10 ಸಂಘ ಸಂಸ್ಥೆಗಳಿಗೆ ಮುಖ್ಯಮಂತ್ರಿ ಪ್ರಶಸ್ತಿ ಪ್ರದಾನ ಮಾಡಿದರು.</p>.<p>ಕೆಲವು ನಿರ್ದಿಷ್ಟ ಸಂದರ್ಭ ಬಿಟ್ಟು, ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡುವಾಗ ಕನಿಷ್ಠ ವಯೋಮಿತಿ 60 ವರ್ಷ ಪೂರೈಸಿರಬೇಕು ಎಂದುಹೈಕೋರ್ಟ್ ಆದೇಶದಂತೆ ಸರ್ಕಾರ ನಿಯಮ ರೂಪಿಸಿದೆ. ಈ ಬಗ್ಗೆ ನ್ಯಾಯಾಲಯಕ್ಕೆ ಮನವಿ ಮಾಡುವ ಕುರಿತು ಬೊಮ್ಮಾಯಿ ಪ್ರಸ್ತಾಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರ ಆಯ್ಕೆಗೆ ಕನಿಷ್ಠ ವಯೋಮಿತಿ 60 ವರ್ಷ ಪೂರೈಸಬೇಕೆಂಬ ನಿಯಮವನ್ನು ಮುಂದಿನ ವರ್ಷದಿಂದ ಸಡಿಲಿಸುವ ಜೊತೆಗೆ, ಪ್ರಶಸ್ತಿ ಮೊತ್ತವನ್ನು ₹ 1 ಲಕ್ಷದಿಂದ ₹ 5 ಲಕ್ಷಕ್ಕೆ ಹೆಚ್ಚಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.</p>.<p>ರವೀಂದ್ರ ಕಲಾಕ್ಷೇತ್ರದಲ್ಲಿ ಸೋಮವಾರ ನಡೆದ 66ನೇ ಕರ್ನಾಟಕರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ‘ಇನ್ನು ಮುಂದೆ ಈ ಪ್ರಶಸ್ತಿಗೆ ಯಾರೂ ಅರ್ಜಿ ಸಲ್ಲಿಸುವ ಅಗತ್ಯ ಇಲ್ಲ. ಆಯ್ಕೆ ಸಮಿತಿಯೇ ಸಾಧಕರನ್ನು ಗುರುತಿಸಲಿದೆ’ ಎಂದೂ ಹೇಳಿದರು.</p>.<p>‘ಆಯ್ಕೆ ಎಂಬುದು ಶೋಧನೆಯಿಂದ ಆಗಬೇಕೇ ಹೊರತು ಅರ್ಜಿಯಿಂದಲ್ಲ. ವಯಸ್ಸಿನ ಆಧಾರದಲ್ಲಿ ಪ್ರಶಸ್ತಿ ನೀಡುವುದೂ ಸರಿಯಲ್ಲ ಎಂಬ ಭಾವನೆಯಿದೆ. ಹೀಗಾಗಿ, ಕನಿಷ್ಠ ವಯೋಮಿತಿ ವಿಧಿಸದೆ, ಪ್ರತಿಭೆ ಗುರುತಿಸಿ ಪ್ರಶಸ್ತಿ ನೀಡಲು ಅವಕಾಶ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಲಾಗುವುದು’ ಎಂದೂ ತಿಳಿಸಿದರು.</p>.<p>ವಿವಿಧ ಕ್ಷೇತ್ರಗಳ 66 ಸಾಧಕರು ಹಾಗೂ ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ 10 ಸಂಘ ಸಂಸ್ಥೆಗಳಿಗೆ ಮುಖ್ಯಮಂತ್ರಿ ಪ್ರಶಸ್ತಿ ಪ್ರದಾನ ಮಾಡಿದರು.</p>.<p>ಕೆಲವು ನಿರ್ದಿಷ್ಟ ಸಂದರ್ಭ ಬಿಟ್ಟು, ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡುವಾಗ ಕನಿಷ್ಠ ವಯೋಮಿತಿ 60 ವರ್ಷ ಪೂರೈಸಿರಬೇಕು ಎಂದುಹೈಕೋರ್ಟ್ ಆದೇಶದಂತೆ ಸರ್ಕಾರ ನಿಯಮ ರೂಪಿಸಿದೆ. ಈ ಬಗ್ಗೆ ನ್ಯಾಯಾಲಯಕ್ಕೆ ಮನವಿ ಮಾಡುವ ಕುರಿತು ಬೊಮ್ಮಾಯಿ ಪ್ರಸ್ತಾಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>