<p><strong>ಬೆಂಗಳೂರು: </strong>ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ ಎಂಬ ಕಾರಣಕ್ಕೆ ಸಾಹಿತಿ ಹಂ.ಪ. ನಾಗರಾಜಯ್ಯ (ಹಂಪನಾ) ವಿರುದ್ಧ ದೂರು ದಾಖಲಿಸಿಕೊಂಡು, ವಿಚಾರಣೆ ನಡೆಸಿದ ಪೊಲೀಸರ ನಡೆಯನ್ನು ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಖಂಡಿಸಿದೆ.</p>.<p>‘ಹಿರಿಯ ವಿದ್ವಾಂಸರಾದ ಹಂಪನಾ ಅವರನ್ನು ಮಂಡ್ಯದ ಪೊಲೀಸರು ಠಾಣೆಗೆ ಕರೆಸಿಕೊಂಡು ವಿಚಾರಣೆ ನಡೆಸಿರುವುದು ಖಂಡನೀಯ. ಇದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ನಡೆದ ಹಲ್ಲೆ ಎಂಬುದರಲ್ಲಿ ಯಾವ ಅನುಮಾನವೂ ಇಲ್ಲ. ಈ ವಿಚಾರವಾಗಿ ಪರಿಷತ್ತು ಯಾವಾಗಲೂ ಸಾಹಿತಿಗಳ ಪರವಾಗಿಯೇ ನಿಲ್ಲುತ್ತದೆ. ಅವರು ಉತ್ತರ ಭಾರತದಲ್ಲಿ ನಡೆಯುತ್ತಿರುವ ರೈತರ ಚಳವಳಿಯನ್ನು ಪ್ರಸ್ತಾಪಿಸಿ, ಕೇಂದ್ರದ ವಿರುದ್ಧ ಟೀಕೆ ಮಾಡಿ ದ್ದರು. ಯಾರನ್ನೇ ಆಗಲಿ ಟೀಕಿಸುವ ಮತ್ತು ವಿಮರ್ಶಿಸುವ ಅಧಿಕಾರವನ್ನು ಸಂವಿ<br />ಧಾನವು ನೀಡಿದೆ’ ಎಂದು ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ತಿಳಿಸಿದ್ದಾರೆ.</p>.<p>‘ಮೇಲಾಧಿಕಾರಿಗೆ ತಿಳಿಸದೇ ಹಿರಿಯ ಸಾಹಿತಿಯೊಬ್ಬರನ್ನು ಠಾಣೆಗೆ ಕರೆಸಿದ್ದು ಕೂಡ ಆಶ್ಚರ್ಯಕರ. ಇಂತಹ ಅಚಾತುರ್ಯಗಳು ಮರುಕಳಿಸದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ರಾಜ್ಯ ಸರ್ಕಾರ ನಿಗಾ ವಹಿಸಬೇಕು’ ಎಂದು ಪ್ರಕಟಣೆಯಲ್ಲಿ ವಿವರಿಸಿದ್ದಾರೆ.</p>.<p>ಕರ್ನಾಟಕ ಸುಗಮ ಸಂಗೀತ ಪರಿ ಷತ್ತಿನ ಗೌರವಾಧ್ಯಕ್ಷ ವೈ.ಕೆ. ಮುದ್ದುಕೃಷ್ಣ, ‘ಮಂಡ್ಯ ಪೊಲೀಸರು ಹಂಪನಾ ಅವರನ್ನು ನಡೆಸಿಕೊಂಡ ರೀತಿ ಖಂಡ ನೀಯ. ವಯೋವೃದ್ಧರಾಗಿರುವ ಕಾರಣ ಅವರ ಮನೆಗೆ ಬಂದು ಭೇಟಿ ಮಾಡುವ ಕನಿಷ್ಠ ಸೌಜನ್ಯವೂ ಪೊಲೀಸರಿಗೆ ಇಲ್ಲವೇ’ ಎಂದು ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ ಎಂಬ ಕಾರಣಕ್ಕೆ ಸಾಹಿತಿ ಹಂ.ಪ. ನಾಗರಾಜಯ್ಯ (ಹಂಪನಾ) ವಿರುದ್ಧ ದೂರು ದಾಖಲಿಸಿಕೊಂಡು, ವಿಚಾರಣೆ ನಡೆಸಿದ ಪೊಲೀಸರ ನಡೆಯನ್ನು ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಖಂಡಿಸಿದೆ.</p>.<p>‘ಹಿರಿಯ ವಿದ್ವಾಂಸರಾದ ಹಂಪನಾ ಅವರನ್ನು ಮಂಡ್ಯದ ಪೊಲೀಸರು ಠಾಣೆಗೆ ಕರೆಸಿಕೊಂಡು ವಿಚಾರಣೆ ನಡೆಸಿರುವುದು ಖಂಡನೀಯ. ಇದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ನಡೆದ ಹಲ್ಲೆ ಎಂಬುದರಲ್ಲಿ ಯಾವ ಅನುಮಾನವೂ ಇಲ್ಲ. ಈ ವಿಚಾರವಾಗಿ ಪರಿಷತ್ತು ಯಾವಾಗಲೂ ಸಾಹಿತಿಗಳ ಪರವಾಗಿಯೇ ನಿಲ್ಲುತ್ತದೆ. ಅವರು ಉತ್ತರ ಭಾರತದಲ್ಲಿ ನಡೆಯುತ್ತಿರುವ ರೈತರ ಚಳವಳಿಯನ್ನು ಪ್ರಸ್ತಾಪಿಸಿ, ಕೇಂದ್ರದ ವಿರುದ್ಧ ಟೀಕೆ ಮಾಡಿ ದ್ದರು. ಯಾರನ್ನೇ ಆಗಲಿ ಟೀಕಿಸುವ ಮತ್ತು ವಿಮರ್ಶಿಸುವ ಅಧಿಕಾರವನ್ನು ಸಂವಿ<br />ಧಾನವು ನೀಡಿದೆ’ ಎಂದು ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ತಿಳಿಸಿದ್ದಾರೆ.</p>.<p>‘ಮೇಲಾಧಿಕಾರಿಗೆ ತಿಳಿಸದೇ ಹಿರಿಯ ಸಾಹಿತಿಯೊಬ್ಬರನ್ನು ಠಾಣೆಗೆ ಕರೆಸಿದ್ದು ಕೂಡ ಆಶ್ಚರ್ಯಕರ. ಇಂತಹ ಅಚಾತುರ್ಯಗಳು ಮರುಕಳಿಸದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ರಾಜ್ಯ ಸರ್ಕಾರ ನಿಗಾ ವಹಿಸಬೇಕು’ ಎಂದು ಪ್ರಕಟಣೆಯಲ್ಲಿ ವಿವರಿಸಿದ್ದಾರೆ.</p>.<p>ಕರ್ನಾಟಕ ಸುಗಮ ಸಂಗೀತ ಪರಿ ಷತ್ತಿನ ಗೌರವಾಧ್ಯಕ್ಷ ವೈ.ಕೆ. ಮುದ್ದುಕೃಷ್ಣ, ‘ಮಂಡ್ಯ ಪೊಲೀಸರು ಹಂಪನಾ ಅವರನ್ನು ನಡೆಸಿಕೊಂಡ ರೀತಿ ಖಂಡ ನೀಯ. ವಯೋವೃದ್ಧರಾಗಿರುವ ಕಾರಣ ಅವರ ಮನೆಗೆ ಬಂದು ಭೇಟಿ ಮಾಡುವ ಕನಿಷ್ಠ ಸೌಜನ್ಯವೂ ಪೊಲೀಸರಿಗೆ ಇಲ್ಲವೇ’ ಎಂದು ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>