<p><strong>ಬೆಂಗಳೂರು</strong>: ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ (ಕಸಾಪ) ಹಣ ಹಾಗೂ ಅಧಿಕಾರ ದುರ್ಬಳಕೆ ಸೇರಿ ವಿವಿಧ ಆರೋಪಗಳ ಹಿನ್ನೆಲೆಯಲ್ಲಿ ಕಸಾಪಗೆ ಆಡಳಿತಾಧಿಕಾರಿಯಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಕೆ.ಎಂ. ಗಾಯತ್ರಿ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.</p><p>ಆದೇಶದ ಬೆನ್ನಲ್ಲೇ ಕೆ.ಎಂ. ಗಾಯತ್ರಿ ಅವರು ಕಸಾಪ ಕೇಂದ್ರ ಕಚೇರಿಗೆ ತೆರಳಿ ಅಧಿಕಾರ ಸ್ವೀಕರಿಸಿದ್ದಾರೆ.</p><p>ಕಸಾಪದಲ್ಲಿ ಹಣಕಾಸಿನ ಅವ್ಯವಹಾರ ಹಾಗೂ ಅಧಿಕಾರ ದುರ್ಬಳಕೆಯ ಆರೋಪಗಳ ವಿಚಾರಣೆಗೆ ಸಂಬಂಧಿಸಿದಂತೆ ಸಹಕಾರ ಇಲಾಖೆ ಕಳೆದ ಜುಲೈನಲ್ಲಿ ಆದೇಶ ಹೊರಡಿಸಿ ವಿಚಾರಣಾಧಿಕಾರಿಯನ್ನು ನೇಮಕ ಮಾಡಿತ್ತು.</p><p>ವಿಚಾರಣೆಗೆ ಸಂಬಂಧಿಸಿದಂತೆ ಕಸಾಪದವರು ನಿಗದಿತ ಕಾಲಾವಧಿಯಲ್ಲಿ ಹಾಜರಾಗದಿರುವುದು, ಅಗತ್ಯ ದಾಖಲಾತಿಗಳನ್ನು ಒದಗಿಸದಿರುವ ಕಾರಣ ನೀಡಿ ಆಡಳಿತಾಧಿಕಾರಿ ನೇಮಿಸುವಂತೆ ಸಹಕಾರ ಇಲಾಖೆ ಸರ್ಕಾರಕ್ಕೆ ಶಿಫಾರಸು ಮಾಡಿತ್ತು.</p><p>ಶಿಫಾರಸು ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಇದರಿಂದ ಪ್ರಸ್ತುತ ಅಧ್ಯಕ್ಷರಾಗಿದ್ದ ಮಹೇಶ್ ಜೋಶಿ ಅವರಿಗೆ ತೀವ್ರ ಹಿನ್ನಡೆಯಾದಂತಾಗಿದೆ.</p><p>ಮುಂದಿನ ಮೂರು ತಿಂಗಳವರೆಗೆ ಅಥವಾ ಕಸಾಪದ ಹಣಕಾಸಿನ ಅವ್ಯವಹಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ಮುಗಿಯುವವರೆಗೆ ಆಡಳಿತಾಧಿಕಾರಿಯಾಗಿ ಗಾಯತ್ರಿ ಅವರು ಕಾರ್ಯನಿರ್ವಹಿಸಲಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.</p>.ಕಸಾಪ ಅಧ್ಯಕ್ಷರ ವಿರುದ್ಧ ಅಧಿಕಾರ ದುರ್ಬಳಕೆ ಆರೋಪ: ಆಡಳಿತಾಧಿಕಾರಿ ನೇಮಕ ಸಾಧ್ಯತೆ.ಬೆಂಗಳೂರು: ’ಸಿಎಜಿ’ಯಿಂದ ಲೆಕ್ಕ ಪರಿಶೋಧನೆ ನಡೆಸಲು ಕಸಾಪ ನಿರ್ಧಾರ.ರಂಗಣ್ಣ, ಕೆಲಸ ಮಾಡಿ, ಇಲ್ಲ ರಾಜೀನಾಮೆ ಕೊಡಿ: ಕಸಾಪ ಜಿಲ್ಲಾಧ್ಯಕ್ಷರಿಗೆ ಎಚ್ಚರಿಕೆ.ಮಂಡ್ಯಸಾಹಿತ್ಯ ಸಮ್ಮೇಳನದ ವೆಚ್ಚ: ಲೋಕಾಯುಕ್ತ ತನಿಖೆಗೆ ಕಸಾಪ ಒತ್ತಾಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ (ಕಸಾಪ) ಹಣ ಹಾಗೂ ಅಧಿಕಾರ ದುರ್ಬಳಕೆ ಸೇರಿ ವಿವಿಧ ಆರೋಪಗಳ ಹಿನ್ನೆಲೆಯಲ್ಲಿ ಕಸಾಪಗೆ ಆಡಳಿತಾಧಿಕಾರಿಯಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಕೆ.ಎಂ. ಗಾಯತ್ರಿ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.</p><p>ಆದೇಶದ ಬೆನ್ನಲ್ಲೇ ಕೆ.ಎಂ. ಗಾಯತ್ರಿ ಅವರು ಕಸಾಪ ಕೇಂದ್ರ ಕಚೇರಿಗೆ ತೆರಳಿ ಅಧಿಕಾರ ಸ್ವೀಕರಿಸಿದ್ದಾರೆ.</p><p>ಕಸಾಪದಲ್ಲಿ ಹಣಕಾಸಿನ ಅವ್ಯವಹಾರ ಹಾಗೂ ಅಧಿಕಾರ ದುರ್ಬಳಕೆಯ ಆರೋಪಗಳ ವಿಚಾರಣೆಗೆ ಸಂಬಂಧಿಸಿದಂತೆ ಸಹಕಾರ ಇಲಾಖೆ ಕಳೆದ ಜುಲೈನಲ್ಲಿ ಆದೇಶ ಹೊರಡಿಸಿ ವಿಚಾರಣಾಧಿಕಾರಿಯನ್ನು ನೇಮಕ ಮಾಡಿತ್ತು.</p><p>ವಿಚಾರಣೆಗೆ ಸಂಬಂಧಿಸಿದಂತೆ ಕಸಾಪದವರು ನಿಗದಿತ ಕಾಲಾವಧಿಯಲ್ಲಿ ಹಾಜರಾಗದಿರುವುದು, ಅಗತ್ಯ ದಾಖಲಾತಿಗಳನ್ನು ಒದಗಿಸದಿರುವ ಕಾರಣ ನೀಡಿ ಆಡಳಿತಾಧಿಕಾರಿ ನೇಮಿಸುವಂತೆ ಸಹಕಾರ ಇಲಾಖೆ ಸರ್ಕಾರಕ್ಕೆ ಶಿಫಾರಸು ಮಾಡಿತ್ತು.</p><p>ಶಿಫಾರಸು ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಇದರಿಂದ ಪ್ರಸ್ತುತ ಅಧ್ಯಕ್ಷರಾಗಿದ್ದ ಮಹೇಶ್ ಜೋಶಿ ಅವರಿಗೆ ತೀವ್ರ ಹಿನ್ನಡೆಯಾದಂತಾಗಿದೆ.</p><p>ಮುಂದಿನ ಮೂರು ತಿಂಗಳವರೆಗೆ ಅಥವಾ ಕಸಾಪದ ಹಣಕಾಸಿನ ಅವ್ಯವಹಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ಮುಗಿಯುವವರೆಗೆ ಆಡಳಿತಾಧಿಕಾರಿಯಾಗಿ ಗಾಯತ್ರಿ ಅವರು ಕಾರ್ಯನಿರ್ವಹಿಸಲಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.</p>.ಕಸಾಪ ಅಧ್ಯಕ್ಷರ ವಿರುದ್ಧ ಅಧಿಕಾರ ದುರ್ಬಳಕೆ ಆರೋಪ: ಆಡಳಿತಾಧಿಕಾರಿ ನೇಮಕ ಸಾಧ್ಯತೆ.ಬೆಂಗಳೂರು: ’ಸಿಎಜಿ’ಯಿಂದ ಲೆಕ್ಕ ಪರಿಶೋಧನೆ ನಡೆಸಲು ಕಸಾಪ ನಿರ್ಧಾರ.ರಂಗಣ್ಣ, ಕೆಲಸ ಮಾಡಿ, ಇಲ್ಲ ರಾಜೀನಾಮೆ ಕೊಡಿ: ಕಸಾಪ ಜಿಲ್ಲಾಧ್ಯಕ್ಷರಿಗೆ ಎಚ್ಚರಿಕೆ.ಮಂಡ್ಯಸಾಹಿತ್ಯ ಸಮ್ಮೇಳನದ ವೆಚ್ಚ: ಲೋಕಾಯುಕ್ತ ತನಿಖೆಗೆ ಕಸಾಪ ಒತ್ತಾಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>