<p><strong>ಬೆಂಗಳೂರು</strong>: ಕಾರ್ಪೊರೇಟ್ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ (ಸಿಎಸ್ಆರ್) ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಕೇಂದ್ರ ಕಚೇರಿಯನ್ನು ನವೀಕರಣ ಮಾಡಲಾಗಿದೆ.</p>.<p>ಈ ಕಾರ್ಯಕ್ಕೆ ಕರ್ಣಾಟಕ ಬ್ಯಾಂಕ್ ಸಿಎಸ್ಆರ್ ಅಡಿ ₹ 20 ಲಕ್ಷವನ್ನು ನೀಡಿದೆ. ಈ ಹಣದಲ್ಲಿ ಕಚೇರಿಗೆ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಕಂಪ್ಯೂಟರ್ಗಳು ಹಾಗೂ ಪೀಠೋಪಕರಣಗಳನ್ನು ಅಳವಡಿಸಲಾಗಿದೆ. ಬ್ಯಾಂಕ್ ಮೊದಲ ಹಂತದಲ್ಲಿ ₹ 17.48 ಲಕ್ಷ ನೀಡಿತ್ತು. ಒಟ್ಟು ₹ 37.48 ಲಕ್ಷವನ್ನು ನೀಡಿದೆ. ಈ ಹಣದಲ್ಲಿ ಪರಿಷತ್ತಿನ ಎರಡನೇ ಮಹಡಿಯನ್ನು ನವೀಕರಣ ಮಾಡಲಾಗಿದೆ. </p>.<p>‘ಕರ್ಣಾಟಕ ಬ್ಯಾಂಕ್ ಪರಿಷತ್ತಿನೊಂದಿಗೆ ಕೈ ಜೋಡಿಸುವ ಮೂಲಕ ಕಟ್ಟಡದ ನವೀಕರಣಕ್ಕೆ ನೆರವಾಗಿದೆ. ಇದರಿಂದಾಗಿ ನಾವು ಬ್ಯಾಂಕ್ಗೆ ಆಭಾರಿಯಾಗಿದ್ದೇವೆ’ ಎಂದು ಕಸಾಪ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದ್ದಾರೆ. </p>.<p>ಬ್ಯಾಂಕಿನ ಉಪ ಪ್ರಧಾನ ವ್ಯವಸ್ಥಾಪಕ ನಾಗರಾಜ್ ಉಪಾಧ್ಯಾಯ, ‘ನಮ್ಮ ಬ್ಯಾಂಕ್ ಪರಿಷತ್ತಿನೊಂದಿಗೆ ನಿರಂತರ ಒಡನಾಟದಲ್ಲಿದ್ದು, ಕನ್ನಡ ಭಾಷೆ, ನಾಡು-ನುಡಿ ಹಾಗೂ ಸಂಸ್ಕೃತಿಯ ಅಭ್ಯುದಯಕ್ಕೆ ಕೈ ಜೋಡಿಸುತ್ತ ಬಂದಿದೆ. ಪರಿಷತ್ತಿನ ಕಾರ್ಯಚಟುವಟಿಕೆಗಳನ್ನು ಗಮನಿಸಿ, ನವೀಕರಣಕ್ಕೆ ನೆರವು ನೀಡಿದ್ದೇವೆ’ ಎಂದು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕಾರ್ಪೊರೇಟ್ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ (ಸಿಎಸ್ಆರ್) ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಕೇಂದ್ರ ಕಚೇರಿಯನ್ನು ನವೀಕರಣ ಮಾಡಲಾಗಿದೆ.</p>.<p>ಈ ಕಾರ್ಯಕ್ಕೆ ಕರ್ಣಾಟಕ ಬ್ಯಾಂಕ್ ಸಿಎಸ್ಆರ್ ಅಡಿ ₹ 20 ಲಕ್ಷವನ್ನು ನೀಡಿದೆ. ಈ ಹಣದಲ್ಲಿ ಕಚೇರಿಗೆ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಕಂಪ್ಯೂಟರ್ಗಳು ಹಾಗೂ ಪೀಠೋಪಕರಣಗಳನ್ನು ಅಳವಡಿಸಲಾಗಿದೆ. ಬ್ಯಾಂಕ್ ಮೊದಲ ಹಂತದಲ್ಲಿ ₹ 17.48 ಲಕ್ಷ ನೀಡಿತ್ತು. ಒಟ್ಟು ₹ 37.48 ಲಕ್ಷವನ್ನು ನೀಡಿದೆ. ಈ ಹಣದಲ್ಲಿ ಪರಿಷತ್ತಿನ ಎರಡನೇ ಮಹಡಿಯನ್ನು ನವೀಕರಣ ಮಾಡಲಾಗಿದೆ. </p>.<p>‘ಕರ್ಣಾಟಕ ಬ್ಯಾಂಕ್ ಪರಿಷತ್ತಿನೊಂದಿಗೆ ಕೈ ಜೋಡಿಸುವ ಮೂಲಕ ಕಟ್ಟಡದ ನವೀಕರಣಕ್ಕೆ ನೆರವಾಗಿದೆ. ಇದರಿಂದಾಗಿ ನಾವು ಬ್ಯಾಂಕ್ಗೆ ಆಭಾರಿಯಾಗಿದ್ದೇವೆ’ ಎಂದು ಕಸಾಪ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದ್ದಾರೆ. </p>.<p>ಬ್ಯಾಂಕಿನ ಉಪ ಪ್ರಧಾನ ವ್ಯವಸ್ಥಾಪಕ ನಾಗರಾಜ್ ಉಪಾಧ್ಯಾಯ, ‘ನಮ್ಮ ಬ್ಯಾಂಕ್ ಪರಿಷತ್ತಿನೊಂದಿಗೆ ನಿರಂತರ ಒಡನಾಟದಲ್ಲಿದ್ದು, ಕನ್ನಡ ಭಾಷೆ, ನಾಡು-ನುಡಿ ಹಾಗೂ ಸಂಸ್ಕೃತಿಯ ಅಭ್ಯುದಯಕ್ಕೆ ಕೈ ಜೋಡಿಸುತ್ತ ಬಂದಿದೆ. ಪರಿಷತ್ತಿನ ಕಾರ್ಯಚಟುವಟಿಕೆಗಳನ್ನು ಗಮನಿಸಿ, ನವೀಕರಣಕ್ಕೆ ನೆರವು ನೀಡಿದ್ದೇವೆ’ ಎಂದು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>