<p><strong>ಬೆಂಗಳೂರು</strong>: ಅನುದಾನ ಬಿಡುಗಡೆ ಮಾಡದ ಕಾರಣ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಕೆ.ಎಂ.ಗಾಯಿತ್ರಿ ಅವರ ವಿರುದ್ಧ ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಕಾರ್ಯಕಾರಿ ಸಮಿತಿಯು ಖಂಡನಾ ನಿರ್ಣಯ ಕೈಗೊಂಡಿದೆ. </p>.<p>ಪರಿಷತ್ತಿಗೆ ವಾರ್ಷಿಕ ಅನುದಾನ ಬಿಡುಗಡೆಯಾಗದಿರುವ ಬಗ್ಗೆ ನಗರದಲ್ಲಿ ಬುಧವಾರ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಯಿತು. ಇದಕ್ಕೆ ಕಾರಣರಾಗಿರುವ ಕೆ.ಎಂ.ಗಾಯಿತ್ರಿ ಅವರ ವಿರುದ್ಧ ಖಂಡನಾ ನಿರ್ಣಯವನ್ನು ತೆಗೆದುಕೊಳ್ಳಲಾಯಿತು. ಈ ನಿರ್ಣಯವನ್ನು ಪರಿಷತ್ತಿನ ಕಾರ್ಯಕಾರಿ ಸಮಿತಿಯ ಕಾರ್ಯದರ್ಶಿ ಬಿ.ಎಂ.ಪಟೇಲ್ಪಾಂಡು ಅವರು ಪತ್ರದ ಮೂಲಕ ಗಾಯಿತ್ರಿ ಅವರ ಗಮನಕ್ಕೆ ತಂದಿದ್ದಾರೆ ಎಂದು ಕಸಾಪ ಮೂಲಗಳು ತಿಳಿಸಿವೆ. </p>.<p>ಖಂಡನಾ ನಿರ್ಣಯ ತಲುಪಿದ ಒಂದು ವಾರದೊಳಗೆ ಗಾಯಿತ್ರಿ ಅವರು ಅನುದಾನ ಬಿಡುಗಡೆ ಮಾಡದಿದ್ದರೆ, ಕಸಾಪ ಅಧ್ಯಕ್ಷ ಮಹೇಶ ಜೋಶಿ ಅವರ ನೇತೃತ್ವದಲ್ಲಿ ಕನ್ನಡ ಭವನದ ಎದುರು ಪ್ರತಿಭಟನೆ ನಡೆಸಲು ಸಭೆಯಲ್ಲಿ ನಿರ್ಧರಿಸಲಾಯಿತು ಎಂದು ನಿರ್ಣಯದಲ್ಲಿ ಹೇಳಲಾಗಿದೆ.</p>.<p>ಪ್ರಸಕ್ತ ಸಾಲಿನ ವಾರ್ಷಿಕ ಆಯವ್ಯಯದಲ್ಲಿ ಕಸಾಪಗೆ ಮಂಜೂರಾಗಿರುವ ವಾರ್ಷಿಕ ಅನುದಾನದ ಮೊದಲ ಕಂತು ₹ 1.25 ಕೋಟಿ, ಇನ್ನೂ ಬಿಡುಗಡೆ ಆಗದಿರುವ ಬಗ್ಗೆ ಇದಕ್ಕೂ ಮೊದಲು ಚರ್ಚಿಸಲಾಯಿತು. ಇದರಿಂದ ಪರಿಷತ್ತಿನ ಸಿಬ್ಬಂದಿಗೆ ವೇತನ, ನಿತ್ಯ ಚಟುವಟಿಕೆಗಳು, ಕನ್ನಡ ಪರ ಕಾರ್ಯಗಳು ಸಂಪೂರ್ಣ ಸ್ಥಗಿತಗೊಂಡಿರುವ ಬಗ್ಗೆ ಕಳವಳ ವ್ಯಕ್ತವಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಅನುದಾನ ಬಿಡುಗಡೆ ಮಾಡದ ಕಾರಣ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಕೆ.ಎಂ.ಗಾಯಿತ್ರಿ ಅವರ ವಿರುದ್ಧ ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಕಾರ್ಯಕಾರಿ ಸಮಿತಿಯು ಖಂಡನಾ ನಿರ್ಣಯ ಕೈಗೊಂಡಿದೆ. </p>.<p>ಪರಿಷತ್ತಿಗೆ ವಾರ್ಷಿಕ ಅನುದಾನ ಬಿಡುಗಡೆಯಾಗದಿರುವ ಬಗ್ಗೆ ನಗರದಲ್ಲಿ ಬುಧವಾರ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಯಿತು. ಇದಕ್ಕೆ ಕಾರಣರಾಗಿರುವ ಕೆ.ಎಂ.ಗಾಯಿತ್ರಿ ಅವರ ವಿರುದ್ಧ ಖಂಡನಾ ನಿರ್ಣಯವನ್ನು ತೆಗೆದುಕೊಳ್ಳಲಾಯಿತು. ಈ ನಿರ್ಣಯವನ್ನು ಪರಿಷತ್ತಿನ ಕಾರ್ಯಕಾರಿ ಸಮಿತಿಯ ಕಾರ್ಯದರ್ಶಿ ಬಿ.ಎಂ.ಪಟೇಲ್ಪಾಂಡು ಅವರು ಪತ್ರದ ಮೂಲಕ ಗಾಯಿತ್ರಿ ಅವರ ಗಮನಕ್ಕೆ ತಂದಿದ್ದಾರೆ ಎಂದು ಕಸಾಪ ಮೂಲಗಳು ತಿಳಿಸಿವೆ. </p>.<p>ಖಂಡನಾ ನಿರ್ಣಯ ತಲುಪಿದ ಒಂದು ವಾರದೊಳಗೆ ಗಾಯಿತ್ರಿ ಅವರು ಅನುದಾನ ಬಿಡುಗಡೆ ಮಾಡದಿದ್ದರೆ, ಕಸಾಪ ಅಧ್ಯಕ್ಷ ಮಹೇಶ ಜೋಶಿ ಅವರ ನೇತೃತ್ವದಲ್ಲಿ ಕನ್ನಡ ಭವನದ ಎದುರು ಪ್ರತಿಭಟನೆ ನಡೆಸಲು ಸಭೆಯಲ್ಲಿ ನಿರ್ಧರಿಸಲಾಯಿತು ಎಂದು ನಿರ್ಣಯದಲ್ಲಿ ಹೇಳಲಾಗಿದೆ.</p>.<p>ಪ್ರಸಕ್ತ ಸಾಲಿನ ವಾರ್ಷಿಕ ಆಯವ್ಯಯದಲ್ಲಿ ಕಸಾಪಗೆ ಮಂಜೂರಾಗಿರುವ ವಾರ್ಷಿಕ ಅನುದಾನದ ಮೊದಲ ಕಂತು ₹ 1.25 ಕೋಟಿ, ಇನ್ನೂ ಬಿಡುಗಡೆ ಆಗದಿರುವ ಬಗ್ಗೆ ಇದಕ್ಕೂ ಮೊದಲು ಚರ್ಚಿಸಲಾಯಿತು. ಇದರಿಂದ ಪರಿಷತ್ತಿನ ಸಿಬ್ಬಂದಿಗೆ ವೇತನ, ನಿತ್ಯ ಚಟುವಟಿಕೆಗಳು, ಕನ್ನಡ ಪರ ಕಾರ್ಯಗಳು ಸಂಪೂರ್ಣ ಸ್ಥಗಿತಗೊಂಡಿರುವ ಬಗ್ಗೆ ಕಳವಳ ವ್ಯಕ್ತವಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>