ಬೆಂಗಳೂರು: ‘ಇತ್ತೀಚೆಗೆ ನಿಧನರಾದ ನಿಘಂಟು ತಜ್ಞ ಜಿ.ವೆಂಕಟಸುಬ್ಬಯ್ಯ ಅವರು ವಿದ್ವತ್ ಪರಂಪರೆಯ ಕೊನೆಯ ಕೊಂಡಿಯಾಗಿದ್ದರು. ಅವರು ಹಸ್ತಪ್ರತಿಗಳನ್ನು ತಿದ್ದಿ, ತೀಡಿ ಶ್ರದ್ಧೆಯಿಂದ ಮುದ್ರಣಪ್ರತಿ ಸಿದ್ಧಪಡಿಸುತ್ತಿದ್ದರು. ಅವರ ವ್ಯಕ್ತಿತ್ವ ಮತ್ತು ವಿದ್ವತ್, ಆಳ ಮತ್ತು ವಿಸ್ತಾರದಿಂದ ಕೂಡಿತ್ತು’ ಎಂದು ಹಿರಿಯ ಸಂಶೋಧಕ ಹಾಗೂ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಮಲ್ಲೇಪುರಂ ಜಿ.ವೆಂಕಟೇಶ್ ತಿಳಿಸಿದರು.