ಹಾವೇರಿಯಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಹೊರಟಿರುವ ಕನ್ನಡ ಜ್ಯೋತಿಯಾತ್ರೆ ದಾವಣಗೆರೆ ತಲುಪಿದೆ. ದಾವಣಗೆರೆಯಲ್ಲಿ ಭುವನೇಶ್ವರಿ ದೇವಿ ಮೆರವಣಿಗೆಗೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಚಾಲನೆ ನೀಡಿದರು. ಈ ಸಂದರ್ಭ ನಡೆದ ಮೆರವಣಿಗೆಯಲ್ಲಿ ನೂರಾರು ಮಹಿಳೆಯರು, ವಿದ್ಯಾರ್ಥಿಗಳು, ಕನ್ನಡಾಭಿಮಾನಿಗಳು ಪಾಲ್ಗೊಂಡರು.