<p><strong>ಧಾರವಾಡ:</strong> ‘ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಕನ್ನಡ ವಿಷಯದಲ್ಲಿ ಅನುತ್ತೀರ್ಣರಾಗುವ ಕಾರಣ ತಿಳಿಯಲು ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಜುಲೈ 23ರಂದು ಸಭೆ ನಡೆಸಿ, ಉಪಸಮಿತಿ ರಚಿಸಲಿದೆ’ ಎಂದು ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ ಬಿಳಿಮಲೆ ತಿಳಿಸಿದರು.</p>.<p>‘ಸಮಿತಿಯಲ್ಲಿ ಶಿಕ್ಷಣ ತಜ್ಞರು, ಶಿಕ್ಷಕರು ಸೇರಿ ಐವರು ಸದಸ್ಯರು ಇರುತ್ತಾರೆ. ವರದಿ ಸಲ್ಲಿಸಲು ಮೂರು ತಿಂಗಳ ಗಡುವು ವಿಧಿಸಲಾಗುವುದು. ಕನ್ನಡದಲ್ಲಿ ಅನುತ್ತೀರ್ಣರಾದವರ ತಾಲ್ಲೂಕುವಾರು ವಿವರ ನೀಡಲು ಶಾಲಾ ಶಿಕ್ಷಣ ಇಲಾಖೆಗೆ ಕೋರಲಾಗಿದೆ’ ಎಂದು ಅವರು ಬುಧವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಕನ್ನಡ ಶಿಕ್ಷಕರಿಗೆ ಅಗತ್ಯ ತರಬೇತಿ ಹಾಗೂ ಪಠ್ಯಕ್ರಮ, ಕಲಿಕೆಯನ್ನು ಸರಳಗೊಳಿಸಿದರೆ ಕನ್ನಡ ಪ್ರಥಮಭಾಷೆ ಅಂಕವನ್ನು 100ಕ್ಕೆ ಇಳಿಸಿದ್ದನ್ನು ಒಪ್ಪಬಹುದು’ ಎಂದರು.</p>.<p>‘ರಾಜ್ಯ ಶಿಕ್ಷಣ ನೀತಿ (ಎಸ್ಇಪಿ) ಸಮಿತಿ ಜುಲೈ ಅಂತ್ಯದ ವೇಳೆಗೆ ಸರ್ಕಾರಕ್ಕೆ ವರದಿ ಸಲ್ಲಿಸುವ ನಿರೀಕ್ಷೆಯಿದೆ. ದ್ವಿಭಾಷಾ ಸೂತ್ರ ಕುರಿತ ಶಿಫಾರಸು ಕುರಿತು ಚರ್ಚಿಸಿ ಪ್ರಾಧಿಕಾರದ ತನ್ನ ನಿರ್ಧಾರ ತಿಳಿಸಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ‘ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಕನ್ನಡ ವಿಷಯದಲ್ಲಿ ಅನುತ್ತೀರ್ಣರಾಗುವ ಕಾರಣ ತಿಳಿಯಲು ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಜುಲೈ 23ರಂದು ಸಭೆ ನಡೆಸಿ, ಉಪಸಮಿತಿ ರಚಿಸಲಿದೆ’ ಎಂದು ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ ಬಿಳಿಮಲೆ ತಿಳಿಸಿದರು.</p>.<p>‘ಸಮಿತಿಯಲ್ಲಿ ಶಿಕ್ಷಣ ತಜ್ಞರು, ಶಿಕ್ಷಕರು ಸೇರಿ ಐವರು ಸದಸ್ಯರು ಇರುತ್ತಾರೆ. ವರದಿ ಸಲ್ಲಿಸಲು ಮೂರು ತಿಂಗಳ ಗಡುವು ವಿಧಿಸಲಾಗುವುದು. ಕನ್ನಡದಲ್ಲಿ ಅನುತ್ತೀರ್ಣರಾದವರ ತಾಲ್ಲೂಕುವಾರು ವಿವರ ನೀಡಲು ಶಾಲಾ ಶಿಕ್ಷಣ ಇಲಾಖೆಗೆ ಕೋರಲಾಗಿದೆ’ ಎಂದು ಅವರು ಬುಧವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಕನ್ನಡ ಶಿಕ್ಷಕರಿಗೆ ಅಗತ್ಯ ತರಬೇತಿ ಹಾಗೂ ಪಠ್ಯಕ್ರಮ, ಕಲಿಕೆಯನ್ನು ಸರಳಗೊಳಿಸಿದರೆ ಕನ್ನಡ ಪ್ರಥಮಭಾಷೆ ಅಂಕವನ್ನು 100ಕ್ಕೆ ಇಳಿಸಿದ್ದನ್ನು ಒಪ್ಪಬಹುದು’ ಎಂದರು.</p>.<p>‘ರಾಜ್ಯ ಶಿಕ್ಷಣ ನೀತಿ (ಎಸ್ಇಪಿ) ಸಮಿತಿ ಜುಲೈ ಅಂತ್ಯದ ವೇಳೆಗೆ ಸರ್ಕಾರಕ್ಕೆ ವರದಿ ಸಲ್ಲಿಸುವ ನಿರೀಕ್ಷೆಯಿದೆ. ದ್ವಿಭಾಷಾ ಸೂತ್ರ ಕುರಿತ ಶಿಫಾರಸು ಕುರಿತು ಚರ್ಚಿಸಿ ಪ್ರಾಧಿಕಾರದ ತನ್ನ ನಿರ್ಧಾರ ತಿಳಿಸಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>