<p><strong>ಶಿವಮೊಗ್ಗ</strong>: ಹೊಸನಗರ ತಾಲ್ಲೂಕಿನ ಮಾಣಿ ಜಲಾಶಯದಲ್ಲಿ ಕಾಂತಾರ ಚಾಪ್ಟರ್-1 ಸಿನಿಮಾದ ಚಿತ್ರೀಕರಣ ನಡೆಯುತ್ತಿದ್ದು, ಜಲಾಶಯದ ನೀರಿನ ಮೇಲೆ ಹಾಕಿದ್ದ ಪ್ಲಾಸ್ಟಿಕ್ ನ ತೇಲುವ ಅಟ್ಟಣಿಗೆ ಶನಿವಾರ ಸಂಜೆ ಮಳೆ-ಗಾಳಿಗೆ ಮಗುಚಿದೆ. ಈ ವೇಳೆ ಅಲ್ಲಿ ಚಿತ್ರದ ನಾಯಕ ನಟ ರಿಷಬ್ ಶೆಟ್ಟಿ ಸೇರಿದಂತೆ 10ಕ್ಕೂ ಹೆಚ್ಚು ಮಂದಿ ಇದ್ದರು. ಯಾರಿಗೂ ತೊಂದರೆ ಆಗಿಲ್ಲ. ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.</p><p>ಆದರೆ ಚಿತ್ರೀಕರಣ ಸ್ಥಳದಲ್ಲಿ ಭಾರೀ ದುರಂತ ಸಂಭವಿಸಿದೆ. ದೋಣಿ ಮುಳುಗಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಕೆಲವು ಮಾಧ್ಯಮಗಳಲ್ಲೂ ವರದಿಯಾಗಿತ್ತು.</p><p>ಈ ಬಗ್ಗೆ ಪ್ರಜಾವಾಣಿಗೆ ಪ್ರತಿಕ್ರಿಯಿಸಿದ ಶಿವಮೊಗ್ಗ ಜಿಲ್ಲಾ ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಸ್ಥಳಕ್ಕೆ ಹೊಸನಗರ ಠಾಣೆ ಸಿಪಿಐ ಅವರನ್ನು ಕಳಿಸಿದ್ದೇನೆ. ಜಲಾಶಯದ ನೀರಿನ ಮೇಲೆ ಹಾಕಿದ್ದ ತೇಲುವ ಅಟ್ಟಣಿಗೆ ಮಗುಚಿದೆ. ಯಾವುದೇ ಜೀವ ಹಾನಿ ಸಂಭವಿಸಿಲ್ಲ. ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದರು.</p><p>ಮಾಣಿ ಜಲಾಶಯದಲ್ಲಿ ಚಿತ್ರೀಕರಣಕ್ಕೆ ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿ) ಹಾಗೂ ಸ್ಥಳೀಯವಾಗಿ ಸಂಬಂಧಿಸಿದ ಇಲಾಖೆಗಳಿಂದ ಅನುಮತಿ ಪಡೆಯಲಾಗಿದೆಯೇ ಎಂಬುದನ್ನು ಪರಿಶೀಲಿಸಲು ಹೊಸನಗರ ಪೊಲೀಸರಿಗೆ ಸೂಚಿಸಿದ್ದೇನೆ ಎಂದು ಎಸ್ಪಿ ತಿಳಿಸಿದರು.</p><p>ಚಿತ್ರೀಕರಣಕ್ಕೆ ಜಿಲ್ಲಾಡಳಿತದಿಂದ ಅನುಮತಿ ಪಡೆದಿಲ್ಲ. ಬೆಂಗಳೂರಿನಿಂದಲೇ ಅನುಮತಿ ಪಡೆದಿರುವುದಾಗಿ ಚಿತ್ರ ತಂಡದವರು ಹೇಳಿದ್ದಾರೆ. ದಾಖಲೆಗಳ ಪರಿಶೀಲನೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.</p><p>ಆಗುಂಬೆಯಲ್ಲಿ ಕಳೆದ ವಾರ ಕಾಂತಾರ ಚಾಪ್ಟರ್-1 ಸಿನಿಮಾದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದ ಕೇರಳದ ಕಲಾವಿದರೊಬ್ಬರು ತಾವು ಉಳಿದುಕೊಂಡಿದ್ದ ಹೋಂ ಸ್ಟೇನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ಹೊಸನಗರ ತಾಲ್ಲೂಕಿನ ಮಾಣಿ ಜಲಾಶಯದಲ್ಲಿ ಕಾಂತಾರ ಚಾಪ್ಟರ್-1 ಸಿನಿಮಾದ ಚಿತ್ರೀಕರಣ ನಡೆಯುತ್ತಿದ್ದು, ಜಲಾಶಯದ ನೀರಿನ ಮೇಲೆ ಹಾಕಿದ್ದ ಪ್ಲಾಸ್ಟಿಕ್ ನ ತೇಲುವ ಅಟ್ಟಣಿಗೆ ಶನಿವಾರ ಸಂಜೆ ಮಳೆ-ಗಾಳಿಗೆ ಮಗುಚಿದೆ. ಈ ವೇಳೆ ಅಲ್ಲಿ ಚಿತ್ರದ ನಾಯಕ ನಟ ರಿಷಬ್ ಶೆಟ್ಟಿ ಸೇರಿದಂತೆ 10ಕ್ಕೂ ಹೆಚ್ಚು ಮಂದಿ ಇದ್ದರು. ಯಾರಿಗೂ ತೊಂದರೆ ಆಗಿಲ್ಲ. ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.</p><p>ಆದರೆ ಚಿತ್ರೀಕರಣ ಸ್ಥಳದಲ್ಲಿ ಭಾರೀ ದುರಂತ ಸಂಭವಿಸಿದೆ. ದೋಣಿ ಮುಳುಗಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಕೆಲವು ಮಾಧ್ಯಮಗಳಲ್ಲೂ ವರದಿಯಾಗಿತ್ತು.</p><p>ಈ ಬಗ್ಗೆ ಪ್ರಜಾವಾಣಿಗೆ ಪ್ರತಿಕ್ರಿಯಿಸಿದ ಶಿವಮೊಗ್ಗ ಜಿಲ್ಲಾ ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಸ್ಥಳಕ್ಕೆ ಹೊಸನಗರ ಠಾಣೆ ಸಿಪಿಐ ಅವರನ್ನು ಕಳಿಸಿದ್ದೇನೆ. ಜಲಾಶಯದ ನೀರಿನ ಮೇಲೆ ಹಾಕಿದ್ದ ತೇಲುವ ಅಟ್ಟಣಿಗೆ ಮಗುಚಿದೆ. ಯಾವುದೇ ಜೀವ ಹಾನಿ ಸಂಭವಿಸಿಲ್ಲ. ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದರು.</p><p>ಮಾಣಿ ಜಲಾಶಯದಲ್ಲಿ ಚಿತ್ರೀಕರಣಕ್ಕೆ ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿ) ಹಾಗೂ ಸ್ಥಳೀಯವಾಗಿ ಸಂಬಂಧಿಸಿದ ಇಲಾಖೆಗಳಿಂದ ಅನುಮತಿ ಪಡೆಯಲಾಗಿದೆಯೇ ಎಂಬುದನ್ನು ಪರಿಶೀಲಿಸಲು ಹೊಸನಗರ ಪೊಲೀಸರಿಗೆ ಸೂಚಿಸಿದ್ದೇನೆ ಎಂದು ಎಸ್ಪಿ ತಿಳಿಸಿದರು.</p><p>ಚಿತ್ರೀಕರಣಕ್ಕೆ ಜಿಲ್ಲಾಡಳಿತದಿಂದ ಅನುಮತಿ ಪಡೆದಿಲ್ಲ. ಬೆಂಗಳೂರಿನಿಂದಲೇ ಅನುಮತಿ ಪಡೆದಿರುವುದಾಗಿ ಚಿತ್ರ ತಂಡದವರು ಹೇಳಿದ್ದಾರೆ. ದಾಖಲೆಗಳ ಪರಿಶೀಲನೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.</p><p>ಆಗುಂಬೆಯಲ್ಲಿ ಕಳೆದ ವಾರ ಕಾಂತಾರ ಚಾಪ್ಟರ್-1 ಸಿನಿಮಾದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದ ಕೇರಳದ ಕಲಾವಿದರೊಬ್ಬರು ತಾವು ಉಳಿದುಕೊಂಡಿದ್ದ ಹೋಂ ಸ್ಟೇನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>