<p><strong>ಕಕ್ಕೇರಾ (ಯಾದಗಿರಿ ಜಿಲ್ಲೆ):</strong> ಹುಣಸಿಹೊಳೆಯ ಕಣ್ವ ಮಠ ನೂತನ ಶ್ರೀಗಳ ಪಟ್ಟಾಭಿಷೇಕ ಮಹೋತ್ಸವ ಶುಕ್ರವಾರ ನಡೆಯಿತು. ನೂತನ ಶ್ರೀಗಳಾದ ರವೀಂದ್ರಾಚಾರ್ಯ ಜೋಶಿ ಅವರಿಗೆ ವಿದ್ಯಾ ಕಣ್ವ ವಿರಾಜ ತೀರ್ಥರು ಎಂದು ನಾಮಕರಣ ಮಾಡಲಾಯಿತು. ಶ್ರೀಗಳು ಗೃಹಸ್ಥಾಶ್ರಮ ತ್ಯಾಗ ಮಾಡಿ ಸನ್ಯಾಸ ದೀಕ್ಷೆ ಪಡೆದರು.</p>.<p>ಕಣ್ವ ಮಠದ ಸಭಾಂಗಣದಲ್ಲಿ ವಿದ್ಯಾವಾರಿಧಿ ಶ್ರೀಗಳು ಪುಷ್ಪಾರ್ಚನೆ ಮಾಡುವ ಮೂಲಕ ಪಟ್ಟಾಭಿಷೇಕ ನೆರವೇರಿಸಿದರು. ದಂಡೋಕ ಪ್ರದಾನ ಮಾಡಿದ ಬಳಿಕ ನೂತನ ಶ್ರೀಗಳಿಂದ ವಿವಿಧ ಧಾರ್ಮಿಕ ಕಾರ್ಯಗಳು ನಡೆದವು.</p>.<p>ಈ ಸಂದರ್ಭದಲ್ಲಿ ವಿದ್ಯಾ ಕಣ್ವ ವಿರಾಜ ತೀರ್ಥರು ಮಾತನಾಡಿ, ‘ಕಣ್ವಮಠವು ಮಾಧವತೀರ್ಥ ಶ್ರೀಪಾದಂಗಳವರಿಂದ ಸ್ಥಾಪಿತಗೊಂಡು ಅಪಾರ ಭಕ್ತರ ಮನ್ನಣೆ ಗಳಿಸಿದೆ. ಧರ್ಮ ಸಂಪನ್ನತೆ ಹೊಂದಿ ಭಕ್ತಿ–ಶ್ರದ್ಧೆಗಳೊಂದಿಗೆ ಸರ್ವಶಕ್ತಗೊಳ್ಳುವುದು ಮಾನವನ ಧ್ಯೇಯವಾಗಿದೆ.</p>.<p>ದೇಶದಾದ್ಯಂತ ಇರುವ ಕಣ್ವ ಭಕ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮಠದ ಬೆಳವಣಿಗೆಗೆ ಆದ್ಯತೆ ನೀಡಲಾಗುವುದು’ ಎಂದರು. ಯಲಹಂಕದ ಕಣ್ವಮಠ ಆಡಳಿತ ಮಂಡಳಿ ಟ್ರಸ್ಟ್, ಹುಣಸಿಹೊಳೆ ಕಣ್ವಮಠದ ಅಭಿವೃದ್ಧಿ ಮಂಡಳಿ ಟ್ರಸ್ಟ್ ಪದಾಧಿಕಾರಿಗಳು ಮತ್ತು ಭಕ್ತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಕ್ಕೇರಾ (ಯಾದಗಿರಿ ಜಿಲ್ಲೆ):</strong> ಹುಣಸಿಹೊಳೆಯ ಕಣ್ವ ಮಠ ನೂತನ ಶ್ರೀಗಳ ಪಟ್ಟಾಭಿಷೇಕ ಮಹೋತ್ಸವ ಶುಕ್ರವಾರ ನಡೆಯಿತು. ನೂತನ ಶ್ರೀಗಳಾದ ರವೀಂದ್ರಾಚಾರ್ಯ ಜೋಶಿ ಅವರಿಗೆ ವಿದ್ಯಾ ಕಣ್ವ ವಿರಾಜ ತೀರ್ಥರು ಎಂದು ನಾಮಕರಣ ಮಾಡಲಾಯಿತು. ಶ್ರೀಗಳು ಗೃಹಸ್ಥಾಶ್ರಮ ತ್ಯಾಗ ಮಾಡಿ ಸನ್ಯಾಸ ದೀಕ್ಷೆ ಪಡೆದರು.</p>.<p>ಕಣ್ವ ಮಠದ ಸಭಾಂಗಣದಲ್ಲಿ ವಿದ್ಯಾವಾರಿಧಿ ಶ್ರೀಗಳು ಪುಷ್ಪಾರ್ಚನೆ ಮಾಡುವ ಮೂಲಕ ಪಟ್ಟಾಭಿಷೇಕ ನೆರವೇರಿಸಿದರು. ದಂಡೋಕ ಪ್ರದಾನ ಮಾಡಿದ ಬಳಿಕ ನೂತನ ಶ್ರೀಗಳಿಂದ ವಿವಿಧ ಧಾರ್ಮಿಕ ಕಾರ್ಯಗಳು ನಡೆದವು.</p>.<p>ಈ ಸಂದರ್ಭದಲ್ಲಿ ವಿದ್ಯಾ ಕಣ್ವ ವಿರಾಜ ತೀರ್ಥರು ಮಾತನಾಡಿ, ‘ಕಣ್ವಮಠವು ಮಾಧವತೀರ್ಥ ಶ್ರೀಪಾದಂಗಳವರಿಂದ ಸ್ಥಾಪಿತಗೊಂಡು ಅಪಾರ ಭಕ್ತರ ಮನ್ನಣೆ ಗಳಿಸಿದೆ. ಧರ್ಮ ಸಂಪನ್ನತೆ ಹೊಂದಿ ಭಕ್ತಿ–ಶ್ರದ್ಧೆಗಳೊಂದಿಗೆ ಸರ್ವಶಕ್ತಗೊಳ್ಳುವುದು ಮಾನವನ ಧ್ಯೇಯವಾಗಿದೆ.</p>.<p>ದೇಶದಾದ್ಯಂತ ಇರುವ ಕಣ್ವ ಭಕ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮಠದ ಬೆಳವಣಿಗೆಗೆ ಆದ್ಯತೆ ನೀಡಲಾಗುವುದು’ ಎಂದರು. ಯಲಹಂಕದ ಕಣ್ವಮಠ ಆಡಳಿತ ಮಂಡಳಿ ಟ್ರಸ್ಟ್, ಹುಣಸಿಹೊಳೆ ಕಣ್ವಮಠದ ಅಭಿವೃದ್ಧಿ ಮಂಡಳಿ ಟ್ರಸ್ಟ್ ಪದಾಧಿಕಾರಿಗಳು ಮತ್ತು ಭಕ್ತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>