ಗದಗ: ಅಪರೂಪದ ಜೀವವೈವಿಧ್ಯ ತಾಣ ಕಪ್ಪತಗುಡ್ಡಕ್ಕೆ ನೀಡಿರುವ ‘ವನ್ಯ ಜೀವಿ ಧಾಮ’ ಸ್ಥಾನಮಾನವನ್ನು ವಾಪಸ್ ಪಡೆಯಬಾರದು ಎಂದು ಆಗ್ರಹಿಸಿ ಬುಧವಾರ ಗದಗ ಮತ್ತು ಮುಂಡರಗಿಯಲ್ಲಿ ವಿವಿಧ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು, ಪರಿಸರ ಪ್ರೇಮಿಗಳು, ಮಠಾಧೀಶರು ಪ್ರತಿಭಟನೆ ನಡೆಸಿ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.