‘ಕಪ್ಪತ್ತಗುಡ್ಡದ ಸಂರಕ್ಷಿತ ಅರಣ್ಯ ಪ್ರದೇಶ ಸ್ಥಾನಮಾನವನ್ನು ಹಿಂಪಡೆಯುವ ಹುನ್ನಾರ ಮತ್ತೊಮ್ಮೆ ನಡೆದಿದೆ. ಇದು ಕಳವಳಕಾರಿ. ಇಂಥ ಯಾವುದೇ ನಿರ್ಣಯ ಗದಗ ಜಿಲ್ಲೆ ಹಿತ ಹಾಗೂ ಉತ್ತರ ಕರ್ನಾಟಕದ ಜನರ ಭಾವನೆಯ ವಿರೋಧಿ ನಿರ್ಣಯವಾಗಿ ಹೋರಾಟಕ್ಕೆ ನಾಂದಿ ಮಾಡಿಕೊಡುವುದು. ಅಂಥ ನಿರ್ಣಯವಾಗದ ಹಾಗೆ ಮುತುವರ್ಜಿ ವಹಿಸಿ‘ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 3 ಪುಟಗಳ ಪತ್ರ ಬರೆದು ಒತ್ತಾಯಿಸಿದ್ದಾರೆ.