<p><strong>ಬೆಂಗಳೂರು</strong>: ‘ಕಾಲೇಜುಪ್ರಾಧ್ಯಾಪಕರ 7ನೇ ವೇತನ ಆಯೋಗಕ್ಕೆ ಸಂಬಂಧಿಸಿದಂತೆ ಬಾಕಿ ಇರುವ ಏಳು ತಿಂಗಳ ವೇತನವನ್ನು ಶೀಘ್ರ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುವುದು’ ಎಂದುಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಭರವಸೆ ನೀಡಿದರು.</p>.<p>ಕರ್ನಾಟಕ ಸರ್ಕಾರಿ ಕಾಲೇಜು ಅಧ್ಯಾಪಕರ ಸಂಘವು ವಿವಿಧ ಐದು ಅಧ್ಯಾಪಕರ ಸಂಘಟನೆಗಳ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ‘ಶೈಕ್ಷಣಿಕ ಸಮಾವೇಶ, ಅಭಿನಂದನಾ ಸಮಾರಂಭ ಮತ್ತು ಗ್ರಂಥ ಲೋಕಾರ್ಪಣೆ’ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯ ರಾಜ್ಯದ ಎಲ್ಲಾ ಅಧ್ಯಾಪಕರು, ಸಿಬ್ಬಂದಿಗಳ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಬದ್ಧವಾಗಿದೆ’ ಎಂದು ತಿಳಿಸಿದರು.</p>.<p>‘ಅಧಿಕಾರಿಗಳು, ಅಧ್ಯಾಪಕರ ಸಹಕಾರದಿಂದ ದೇಶದಲ್ಲೇ ಕರ್ನಾಟಕದಲ್ಲಿ ಮೊದಲು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಯಶಸ್ವಿಯಾಗಿ ಜಾರಿಗೊಳಿಸಲು ಸಾಧ್ಯವಾಗಿದೆ. ಮುಂದಿನ ದಿನಗಳಲ್ಲೂ ಇದರ ಸಂಪೂರ್ಣ ಅನುಷ್ಠಾನಕ್ಕೆ ಎಲ್ಲರೂ ಶ್ರಮಿಸಬೇಕು’ ಎಂದು<br />ಸೂಚಿಸಿದರು.</p>.<p>ಕಾಲೇಜು ಶಿಕ್ಷಣ ಇಲಾಖೆಯ ಕೆ. ಕಿಶೋರ್ಕುಮಾರ್ ಅವರು ರಚಿಸಿರುವ ‘ನಸಾಬ್’ ಪುಸ್ತಕವನ್ನು ಸಚಿವರು ಬಿಡುಗಡೆ ಮಾಡಿದರು. ಇಲಾಖೆ ಆಯುಕ್ತ ಪಿ.ಪ್ರದೀಪ್, ಸಾಹಿತಿ ಡಾ.ರಾಜಶೇಖರ ಮಠಪತಿ, ಕರ್ನಾಟಕ ಸರ್ಕಾರಿ ಅಧ್ಯಾಪಕರ ಸಂಘದ ಅಧ್ಯಕ್ಷ ಡಾ.ಟಿ.ಎಂ.ಮಂಜುನಾಥ್, ಜಂಟಿ ಕಾರ್ಯದರ್ಶಿ ಡಾ.ಶೋಭಾ<br />ಇದ್ದರು.</p>.<p>ಕರ್ನಾಟಕ ಸರ್ಕಾರಿ ಕಾಲೇಜು ಅಧ್ಯಾಪಕರ ಸಂಘದ ವತಿಯಿಂದ ಬೇಡಿಕೆಗಳ ಮನವಿಯನ್ನು ಸಚಿವರಿಗೆ ಸಲ್ಲಿಸಲಾಯಿತು.</p>.<p><strong>ಅಧ್ಯಾಪಕರ ಸಂಘದ ಬೇಡಿಕೆಗಳು</strong></p>.<p>* ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿರುವ ಪ್ರಾಧ್ಯಾಪಕರ ಅಂತಿಮ ಪಟ್ಟಿಯನ್ನು ಕೂಡಲೇ ಪ್ರಕಟಿಸಬೇಕು.</p>.<p>* ಖಾಲಿ ಇರುವ ಪ್ರಾಂಶುಪಾಲರ ಹುದ್ದೆಗಳನ್ನು ಭರ್ತಿ ಮಾಡಬೇಕು.</p>.<p>* ಬಾಕಿ ಇರುವ ಏಳು ತಿಂಗಳ ಯುಜಿಸಿ ವೇತನ ಬಾಕಿಯನ್ನು ಕೂಡಲೇ ಪಾವತಿಸಬೇಕು.</p>.<p>* ಸಂದರ್ಶನ ಪೂರೈಸಿರುವ ಸಹ ಪ್ರಾಧ್ಯಾಪಕರ ಪಟ್ಟಿ ಪ್ರಕಟಿಸಬೇಕು</p>.<p>* ಸಹ ಪ್ರಾಧ್ಯಾಪಕರ ಪದೋನ್ನತಿಗೆ ಪಿಎಚ್ಡಿ ಕಡ್ಡಾಯಗೊಳಿಸಿರುವುದರಿಂದ ಕಾಲಮಿತಿ ವಿನಾಯಿತಿ ನೀಡಬೇಕು.</p>.<p>* ದೈಹಿಕ ಶಿಕ್ಷಣ ಬೋಧಕರು ಮತ್ತು ಗ್ರಂಥಪಾಲಕರ ಪದನಾಮ ಬದಲಾವಣೆಗೆ ಕ್ರಮಕೈಗೊಳ್ಳಬೇಕು.</p>.<p>* 2016ರ ನಂತರ ಪಿ.ಎಚ್ಡಿ ಪಡೆದ ಅಧ್ಯಾಪಕರಿಗೆ ವೇತನ ಬಡ್ತಿ ನೀಡಬೇಕು</p>.<p>* ಸಹಾಯಕ ಪ್ರಾಧ್ಯಾಪಕರಾಗಿ ಆಯ್ಕೆಯಾಗಿರುವ 1242 ಅಧ್ಯಾಪಕರುಗಳಿಗೆ ನೇಮಕಾತಿ ಆದೇಶ ನೀಡಬೇಕು.</p>.<p>* ವರ್ಗಾವಣೆ ಅದಾಲತ್ ನಡೆಸಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕಾಲೇಜುಪ್ರಾಧ್ಯಾಪಕರ 7ನೇ ವೇತನ ಆಯೋಗಕ್ಕೆ ಸಂಬಂಧಿಸಿದಂತೆ ಬಾಕಿ ಇರುವ ಏಳು ತಿಂಗಳ ವೇತನವನ್ನು ಶೀಘ್ರ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುವುದು’ ಎಂದುಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಭರವಸೆ ನೀಡಿದರು.</p>.<p>ಕರ್ನಾಟಕ ಸರ್ಕಾರಿ ಕಾಲೇಜು ಅಧ್ಯಾಪಕರ ಸಂಘವು ವಿವಿಧ ಐದು ಅಧ್ಯಾಪಕರ ಸಂಘಟನೆಗಳ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ‘ಶೈಕ್ಷಣಿಕ ಸಮಾವೇಶ, ಅಭಿನಂದನಾ ಸಮಾರಂಭ ಮತ್ತು ಗ್ರಂಥ ಲೋಕಾರ್ಪಣೆ’ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯ ರಾಜ್ಯದ ಎಲ್ಲಾ ಅಧ್ಯಾಪಕರು, ಸಿಬ್ಬಂದಿಗಳ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಬದ್ಧವಾಗಿದೆ’ ಎಂದು ತಿಳಿಸಿದರು.</p>.<p>‘ಅಧಿಕಾರಿಗಳು, ಅಧ್ಯಾಪಕರ ಸಹಕಾರದಿಂದ ದೇಶದಲ್ಲೇ ಕರ್ನಾಟಕದಲ್ಲಿ ಮೊದಲು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಯಶಸ್ವಿಯಾಗಿ ಜಾರಿಗೊಳಿಸಲು ಸಾಧ್ಯವಾಗಿದೆ. ಮುಂದಿನ ದಿನಗಳಲ್ಲೂ ಇದರ ಸಂಪೂರ್ಣ ಅನುಷ್ಠಾನಕ್ಕೆ ಎಲ್ಲರೂ ಶ್ರಮಿಸಬೇಕು’ ಎಂದು<br />ಸೂಚಿಸಿದರು.</p>.<p>ಕಾಲೇಜು ಶಿಕ್ಷಣ ಇಲಾಖೆಯ ಕೆ. ಕಿಶೋರ್ಕುಮಾರ್ ಅವರು ರಚಿಸಿರುವ ‘ನಸಾಬ್’ ಪುಸ್ತಕವನ್ನು ಸಚಿವರು ಬಿಡುಗಡೆ ಮಾಡಿದರು. ಇಲಾಖೆ ಆಯುಕ್ತ ಪಿ.ಪ್ರದೀಪ್, ಸಾಹಿತಿ ಡಾ.ರಾಜಶೇಖರ ಮಠಪತಿ, ಕರ್ನಾಟಕ ಸರ್ಕಾರಿ ಅಧ್ಯಾಪಕರ ಸಂಘದ ಅಧ್ಯಕ್ಷ ಡಾ.ಟಿ.ಎಂ.ಮಂಜುನಾಥ್, ಜಂಟಿ ಕಾರ್ಯದರ್ಶಿ ಡಾ.ಶೋಭಾ<br />ಇದ್ದರು.</p>.<p>ಕರ್ನಾಟಕ ಸರ್ಕಾರಿ ಕಾಲೇಜು ಅಧ್ಯಾಪಕರ ಸಂಘದ ವತಿಯಿಂದ ಬೇಡಿಕೆಗಳ ಮನವಿಯನ್ನು ಸಚಿವರಿಗೆ ಸಲ್ಲಿಸಲಾಯಿತು.</p>.<p><strong>ಅಧ್ಯಾಪಕರ ಸಂಘದ ಬೇಡಿಕೆಗಳು</strong></p>.<p>* ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿರುವ ಪ್ರಾಧ್ಯಾಪಕರ ಅಂತಿಮ ಪಟ್ಟಿಯನ್ನು ಕೂಡಲೇ ಪ್ರಕಟಿಸಬೇಕು.</p>.<p>* ಖಾಲಿ ಇರುವ ಪ್ರಾಂಶುಪಾಲರ ಹುದ್ದೆಗಳನ್ನು ಭರ್ತಿ ಮಾಡಬೇಕು.</p>.<p>* ಬಾಕಿ ಇರುವ ಏಳು ತಿಂಗಳ ಯುಜಿಸಿ ವೇತನ ಬಾಕಿಯನ್ನು ಕೂಡಲೇ ಪಾವತಿಸಬೇಕು.</p>.<p>* ಸಂದರ್ಶನ ಪೂರೈಸಿರುವ ಸಹ ಪ್ರಾಧ್ಯಾಪಕರ ಪಟ್ಟಿ ಪ್ರಕಟಿಸಬೇಕು</p>.<p>* ಸಹ ಪ್ರಾಧ್ಯಾಪಕರ ಪದೋನ್ನತಿಗೆ ಪಿಎಚ್ಡಿ ಕಡ್ಡಾಯಗೊಳಿಸಿರುವುದರಿಂದ ಕಾಲಮಿತಿ ವಿನಾಯಿತಿ ನೀಡಬೇಕು.</p>.<p>* ದೈಹಿಕ ಶಿಕ್ಷಣ ಬೋಧಕರು ಮತ್ತು ಗ್ರಂಥಪಾಲಕರ ಪದನಾಮ ಬದಲಾವಣೆಗೆ ಕ್ರಮಕೈಗೊಳ್ಳಬೇಕು.</p>.<p>* 2016ರ ನಂತರ ಪಿ.ಎಚ್ಡಿ ಪಡೆದ ಅಧ್ಯಾಪಕರಿಗೆ ವೇತನ ಬಡ್ತಿ ನೀಡಬೇಕು</p>.<p>* ಸಹಾಯಕ ಪ್ರಾಧ್ಯಾಪಕರಾಗಿ ಆಯ್ಕೆಯಾಗಿರುವ 1242 ಅಧ್ಯಾಪಕರುಗಳಿಗೆ ನೇಮಕಾತಿ ಆದೇಶ ನೀಡಬೇಕು.</p>.<p>* ವರ್ಗಾವಣೆ ಅದಾಲತ್ ನಡೆಸಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>