ಬೆಂಗಳೂರು: ಕರ್ನಾಟಕಕ್ಕೆ ಬರ ಪರಿಹಾರ ಅನುದಾನ ಬಿಡುಗಡೆ ವಿಳಂಬವಾಗಲು ಕೇಂದ್ರ ಸರ್ಕಾರ ಕಾರಣವಲ್ಲ ಎಂಬ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳುಗಳ ಮೇಲೆಯೇ ರಾಜಕಾರಣ ನಡೆಸುತ್ತಾ ಬಂದಿರುವ ಬಿಜೆಪಿಗೆ ಸತ್ಯ ಹೇಳಿ ಅಭ್ಯಾಸ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಸರಣಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ, ‘ಏಪ್ರಿಲ್ 2ರಂದು ಕರ್ನಾಟಕಕ್ಕೆ ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಒಂದಷ್ಟು ಸುಳ್ಳುಗಳನ್ನು ಹೇಳಿ ಹೋಗಿದ್ದರು. ಈಗ ನಿರ್ಮಲಾ ಅವರು ಬಂದು ಹಳೆಯ ಸುಳ್ಳುಗಳನ್ನು ಪುನರಾವರ್ತಿಸಿದ್ದಾರೆ. ಆದರೆ, ಕರ್ನಾಟಕ ಜನತೆಗೆ ಸತ್ಯ ತಿಳಿದಿದೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯಗಳು ಮನದಟ್ಟಾಗಿದೆ’ ಎಂದು ಕಿಡಿಕಾರಿದ್ದಾರೆ.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಬರ ಪರಿಹಾರಕ್ಕಾಗಿ ರಾಜ್ಯ ಸರ್ಕಾರಕ್ಕೆ ₹697 ಕೋಟಿ ನೀಡಿದೆ ಎಂದು ನಿರ್ಮಲಾ ಅವರು ಹೇಳಿದ್ದಾರೆ. ಆದರೆ, ಇದನ್ನು ಹೇಳುವಾಗ ನಿಜವಾದ ಸತ್ಯವನ್ನು ಅವರು ಮುಚ್ಚಿಟ್ಟಿದ್ದಾರೆ. ಪ್ರಕೃತಿ ವಿಕೋಪದ ಪರಿಹಾರ ನೀಡಲು ಕೇಂದ್ರ ಸರ್ಕಾರದ ಅಡಿಯಲ್ಲಿ ಎರಡು ನಿಧಿಗಳಿವೆ. ಮೊದಲನೆಯದು ಎಸ್ಡಿಆರ್ಎಫ್ ಹಾಗೂ ಎರಡನೆಯದು ಎನ್ಡಿಆರ್ಎಫ್. ಸಾಮಾನ್ಯ ಸ್ವರೂಪದ ಪ್ರಕೃತಿ ವಿಕೋಪಕ್ಕೆ ಎಸ್ಡಿಆರ್ಎಫ್ನಿಂದ ಪರಿಹಾರ ನೀಡಲಾಗುವುದು. ಈ ನಿಧಿಯಡಿಯಲ್ಲಿ ನೀಡುವ ಪರಿಹಾರದಲ್ಲಿ ಶೇ.75 ರಷ್ಟು ಪಾಲನ್ನು ಕೇಂದ್ರ ನೀಡಿದರೆ ಉಳಿದ ಶೇ.25 ರಷ್ಟು ಪಾಲನ್ನು ರಾಜ್ಯ ಸರ್ಕಾರ ನೀಡುತ್ತದೆ. ಇದರಡಿಯಲ್ಲಿ ನೀಡುವ ಪರಿಹಾರದ ಮೊತ್ತವನ್ನು ಕೇಂದ್ರ ಹಣಕಾಸು ಆಯೋಗ ನಿರ್ಧಾರ ಮಾಡುತ್ತದೆ ಎಂದು ಸಿಎಂ ತಿಳಿಸಿದ್ದಾರೆ.
ಸುಳ್ಳುಗಳ ಮೇಲೆಯೇ ರಾಜಕಾರಣ ನಡೆಸುತ್ತಾ ಬಂದಿರುವ @BJP4India ಪಕ್ಷಕ್ಕೆ ಸತ್ಯ ಹೇಳಿ ಅಭ್ಯಾಸವೇ ಇಲ್ಲ. ಮೊನ್ನೆ ಕೇಂದ್ರ ಗೃಹ ಸಚಿವರಾದ @AmitShah ಬಂದು ಸುಳ್ಳುಗಳನ್ನು ಉದುರಿಸಿ ಹೋಗಿದ್ದರು. ಈಗ ಕೇಂದ್ರ ಹಣಕಾಸು ಸಚಿವೆ @nsitharaman ಅವರು ಬಂದು ಹಳೆಯ ಸುಳ್ಳುಗಳನ್ನು ಪುನರಾವರ್ತಿಸಿದ್ದಾರೆ. ಆದರೆ ಕರ್ನಾಟಕದ ಪ್ರಜ್ಞಾವಂತ ಜನತೆಗೆ…
— Siddaramaiah (@siddaramaiah) April 6, 2024
ಈ ಬಾರಿ ಬರಗಾಲದಿಂದಾಗಿ ರಾಜ್ಯ ಬಹಳ ನಷ್ಟವನ್ನು ಅನುಭವಿಸುತ್ತಿದೆ. ರಾಜ್ಯದ 236 ತಾಲ್ಲೂಕುಗಳ ಪೈಕಿ 223 ತಾಲ್ಲೂಕುಗಳು ಬರಗಾಲಕ್ಕೀಡಾಗಿವೆ. ರಾಜ್ಯದ 48 ಲಕ್ಷ ಹೆಕ್ಟೇರ್ ಪ್ರದೇಶದ 34 ಲಕ್ಷ ರೈತರು ಬೆಳೆ ನಷ್ಟ ಅನುಭವಿಸಿದ್ದಾರೆ. ನಮ್ಮ ರೈತರಿಗೆ ₹37 ಸಾವಿರ ಕೋಟಿಗೂ ಹೆಚ್ಚಿನ ನಷ್ಟ ಉಂಟಾಗಿದೆ. ಆದರೆ, ನಾವು ಕೇವಲ ₹18 ಸಾವಿರ ಕೋಟಿ ಪರಿಹಾರವನ್ನು ಮಾತ್ರ ಕೇಂದ್ರ ಸರ್ಕಾರದಿಂದ ಕೇಳುತ್ತಿದ್ದೇವೆ. ಈ ಪರಿಹಾರವನ್ನು ಎನ್ಡಿಆರ್ಎಫ್ನಿಂದಲೇ ಕೊಡಬೇಕಾಗುತ್ತದೆ. ಈ ಸತ್ಯವನ್ನು ನಿರ್ಮಲಾ ಅವರು ಮರೆಮಾಚುತ್ತಿದ್ದಾರೆ ಎಂದು ಸಿಎಂ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈಗಲೂ ಕಾಲ ಮಿಂಚಿಲ್ಲ, ಸನ್ಮಾನ್ಯ @nsitharaman ಅವರೇ, ದಯವಿಟ್ಟು ಮಾಡಿರುವ ತಪ್ಪನ್ನು ಒಪ್ಪಿಕೊಂಡು ಕರ್ನಾಟಕಕ್ಕೆ ನ್ಯಾಯಯುತವಾಗಿ ನೀಡಬೇಕಾಗಿರುವ ಬರಪರಿಹಾರ ಮತ್ತು ತೆರಿಗೆ ಪಾಲನ್ನು ಕೊಟ್ಟುಬಿಡಿ. ಮತ್ತೆ ಮತ್ತೆ ಸುಳ್ಳುಗಳ ಮೂಲಕ ನಿಮ್ಮ ವೈಫಲ್ಯವನ್ನು ಸಮರ್ಥಿಸಿಕೊಳ್ಳಲು ಹೋಗಬೇಡಿ.
— Siddaramaiah (@siddaramaiah) April 6, 2024
ಕೇಂದ್ರ @BJP4India ಸರ್ಕಾರ ಬರಪರಿಹಾರಕ್ಕಾಗಿ ರಾಜ್ಯ…
ಕಳೆದ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ಬರ ಪರಿಹಾರಕ್ಕಾಗಿ ಎನ್ಡಿಆರ್ಎಫ್ನಿಂದ ₹18,171 ಕೋಟಿ ನೀಡಬೇಕೆಂದು ಕೇಂದ್ರ ಬಿಜೆಪಿ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ಕೇಂದ್ರ ತಜ್ಞರ ತಂಡ ಭೇಟಿ ನೀಡಿ ಅಧ್ಯಯನ ನಡೆಸಿ ವರದಿಯನ್ನೂ ಕೊಟ್ಟಿದ್ದಾರೆ. ಇದಾದ ಬಳಿಕ ನಾನು (ಸಿದ್ದರಾಮಯ್ಯ) ಮತ್ತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದೆವು. ನಮ್ಮ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಕೂಡ ನಿಮ್ಮನ್ನೂ ಭೇಟಿ ಮಾಡಿದ್ದರು. ಹೀಗಿದ್ದರೂ, ಬರ ಪರಿಹಾರದ ಕುರಿತು ತೀರ್ಮಾನ ಕೈಗೊಳ್ಳಬೇಕಾಗಿರುವ ಗೃಹ ಸಚಿವರ ನೇತೃತ್ವದ ಉನ್ನತಾಧಿಕಾರ ಸಮಿತಿ ಸಭೆಯನ್ನು ಇಲ್ಲಿಯವರೆಗೂ ನಡೆಸದೆ ಇರುವುದು ಕೇಂದ್ರ ಸರ್ಕಾರದ ಉದ್ದೇಶಪೂರ್ವಕ ಅನ್ಯಾಯ ಅಲ್ಲವೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಕರ್ನಾಟಕ ಈ ಬಾರಿ ಎಂದೂ ಕಂಡರಿಯದ ನಷ್ಟವನ್ನು ಬರಗಾಲದಿಂದಾಗಿ ಅನುಭವಿಸುತ್ತಿದೆ. ನಮ್ಮ 236 ತಾಲೂಕುಗಳ ಪೈಕಿ 223 ತಾಲೂಕುಗಳು ಬರಗಾಲಕ್ಕೀಡಾಗಿವೆ. ರಾಜ್ಯದ 48 ಲಕ್ಷ ಹೆಕ್ಟೇರ್ ಪ್ರದೇಶದ 34 ಲಕ್ಷ ರೈತರು ಬೆಳೆ ನಷ್ಟ ಅನುಭವಿಸಿದ್ದಾರೆ. ನಮ್ಮ ರೈತರಿಗೆ ಆಗಿರುವ ನಷ್ಟ ರೂ.37,000 ಕೋಟಿಗೂ ಹೆಚ್ಚಿನದ್ದಾಗಿದೆ. ಕೇಂದ್ರ @BJP4India ಸರ್ಕಾರದಿಂದ…
— Siddaramaiah (@siddaramaiah) April 6, 2024
ತೆರಿಗೆ ಹಂಚಿಕೆ ಮತ್ತು ಜಿಎಸ್ಟಿ ಪರಿಹಾರದಲ್ಲಿ ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ಪರಿಗಣಿಸಿ ಕೇಂದ್ರ ಹಣಕಾಸು ಆಯೋಗ ₹5,494 ಕೋಟಿ ವಿಶೇಷ ಅನುದಾನ ನೀಡಬೇಕೆಂದು ಶಿಫಾರಸು ಮಾಡಿತ್ತು. ಇದಲ್ಲದೆ, ಬೆಂಗಳೂರಿನ ಫೆರಿಫೆರಲ್ ರಿಂಗ್ ರಸ್ತೆಗೆ ₹3 ಸಾವಿರ ಕೋಟಿ ಮತ್ತು ಕೆರೆಗಳು ಸೇರಿದಂತೆ ಬೆಂಗಳೂರು ಜಲಮೂಲ ಅಭಿವೃದ್ಧಿಗೆ ₹3 ಸಾವಿರ ಕೋಟಿ ನೀಡಲು ಶಿಫಾರಸು ಮಾಡಿತ್ತು. ಆದರೆ, ಈ ಶಿಫಾರಸುಗಳನ್ನು ತಿರಸ್ಕರಿಸಿರುವ ಹಣಕಾಸು ಸಚಿವೆ ನಿರ್ಮಲಾ ಅವರು ರಾಜ್ಯಕ್ಕೆ ಸುಮಾರು ₹11,494 ಕೋಟಿ ನೀಡದೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಕಳೆದ ವರ್ಷದ ಸೆಪ್ಟೆಂಬರ್ ತಿಂಗಳಲ್ಲಿ ಬರಪರಿಹಾರಕ್ಕಾಗಿ ಎನ್ ಡಿಆರ್ ಎಫ್ ನಿಂದ ರೂ.18,171 ಕೋಟಿ ನೀಡಬೇಕೆಂದು ಕೇಂದ್ರ @BJP4India ಸರ್ಕಾರಕ್ಕೆ ಪತ್ರ ಬರೆದಿದ್ದೆ. ಕೇಂದ್ರ ತಜ್ಞರ ತಂಡ ಬಂದು ಅಧ್ಯಯನ ನಡೆಸಿ ವರದಿಯನ್ನೂ ಕೊಟ್ಟಿದ್ದಾರೆ. ಅದರ ನಂತರ ನಾನು ಕಂದಾಯ ಸಚಿವರೊಂದಿಗೆ ಬಂದು ಪ್ರಧಾನಿ @narendramodi ಮತ್ತು ಗೃಹಸಚಿವರನ್ನು ಭೇಟಿ…
— Siddaramaiah (@siddaramaiah) April 6, 2024
ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ನಿರ್ಮಲಾ ಸುಳ್ಳು ಹೇಳುತ್ತಿದ್ದಾರೆ. 15ನೇ ಹಣಕಾಸು ಆಯೋಗ ತನ್ನ ಮೊದಲ ವರದಿಯಲ್ಲಿ ಶಿಫಾರಸು ಮಾಡಿದ್ದ ₹5,495 ಕೋಟಿ ಪರಿಹಾರದ ಉಲ್ಲೇಖ ಅಂತಿಮ ವರದಿಯಲ್ಲಿ ಇಲ್ಲ ಎಂದು ಅವರು ಹೇಳಿರುವುದು ಸತ್ಯಕ್ಕೆ ದೂರವಾದ ಮಾತು. 15ನೇ ಹಣಕಾಸು ಆಯೋಗ ಪ್ರಾಥಮಿಕ ಮತ್ತು ಅಂತಿಮ ವರದಿ ನೀಡಿಲ್ಲ. 2020–21ರಲ್ಲಿ ಒಂದು ವರ್ಷಕ್ಕೆ ಸೀಮಿತವಾದ ವರದಿಯನ್ನು ನೀಡಿದ್ದ ಹಣಕಾಸು ಆಯೋಗ, 2021–26ರ ಅವಧಿಗೆ ಎರಡನೇ ವರದಿಯನ್ನು ನೀಡಿತ್ತು. ಮೊದಲ ವರದಿಯ ಯಾವ ಅಂಶಗಳನ್ನೂ ಎರಡನೇ ವರದಿಯಲ್ಲಿ ಸೇರಿಸಿಲ್ಲ. ಈ ಸತ್ಯವನ್ನು ನಿರ್ಮಲಾ ಅವರು ಮುಚ್ಚಿಟ್ಟು ಸುಳ್ಳು ಮಾಹಿತಿ ನೀಡುತ್ತಿದ್ದಾರೆ ಎಂದು ಸಿಎಂ ವಾಗ್ದಾಳಿ ನಡೆಸಿದ್ದಾರೆ.
ತೆರಿಗೆ ಹಂಚಿಕೆ ಮತ್ತು ಜಿಎಸ್ ಟಿ ಪರಿಹಾರದಲ್ಲಿ ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ಪರಿಗಣಿಸಿ ಕೇಂದ್ರ ಹಣಕಾಸು ಆಯೋಗ ₹5,495 ಕೋಟಿ ವಿಶೇಷ ಅನುದಾನ ನೀಡಬೇಕೆಂದು ಶಿಫಾರಸು ಮಾಡಿತ್ತು. ಇದಲ್ಲದೆ ಬೆಂಗಳೂರಿನ ಫೆರಿಫೆರಲ್ ರಿಂಗ್ ರಸ್ತೆಗೆ ರೂ.3,000 ಕೋಟಿ ಮತ್ತು ಕೆರೆಗಳು ಸೇರಿದಂತೆ ಬೆಂಗಳೂರು ಜಲಮೂಲ ಅಭಿವೃದ್ಧಿಗೆ ರೂ. 3000 ನೀಡಲು…
— Siddaramaiah (@siddaramaiah) April 6, 2024
ನಿರ್ಮಲಾ ಸೀತಾರಾಮನ್ ಅವರೇ ರಾಜ್ಯಕ್ಕೆ ಮತ್ತೆ ಮತ್ತೆ ಬಂದು ಸುಳ್ಳು ಹೇಳುವ ಶ್ರಮ ತೆಗೆದುಕೊಳ್ಳಬೇಡಿ. ಒಂದೇ ಒಂದು ಬಾರಿ ಮುಖಾಮುಖಿ ಚರ್ಚೆಗೆ ಬನ್ನಿ. ರಾಜ್ಯದ ಜನತೆಯ ಸಮಕ್ಷಮದಲ್ಲಿ ಬಹಿರಂಗ ಚರ್ಚೆಯಲ್ಲಿ ಪಾಲ್ಗೊಳ್ಳುವ ಕೆಲಸ ಮಾಡಿ. ಯಾರದ್ದು ಸತ್ಯ, ಯಾರದ್ದು ಸುಳ್ಳು ಎನ್ನುವುದನ್ನು ಜನರೇ ತೀರ್ಮಾನಿಸಲಿ ಎಂದು ಸಿಎಂ ಸಿದ್ದರಾಮಯ್ಯ ಚರ್ಚೆಗೆ ಆಹ್ವಾನಿಸಿದ್ದಾರೆ.
ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಸಚಿವೆ @nsitharaman ಅವರು ಸುಳ್ಳು ಹೇಳುತ್ತಿದ್ದಾರೆ. 15ನೇ ಹಣಕಾಸು ಆಯೋಗ ತನ್ನ ಮೊದಲ ವರದಿಯಲ್ಲಿ ಶಿಫಾರಸು ಮಾಡಿದ್ದ ರೂ.5,495 ಕೋಟಿ ಪರಿಹಾರದ ಉಲ್ಲೇಖ ಅಂತಿಮ ವರದಿಯಲ್ಲಿ ಇಲ್ಲ ಎಂದು ಸಚಿವರು ಹೇಳಿರುವುದು ಸತ್ಯಕ್ಕೆ ದೂರವಾದದ್ದು. 15ನೇ ಹಣಕಾಸು ಆಯೋಗ ಪ್ರಾಥಮಿಕ ಮತ್ತು ಅಂತಿಮ ವರದಿ ನೀಡಿಲ್ಲ.…
— Siddaramaiah (@siddaramaiah) April 6, 2024
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.