<p><strong>ಬೆಂಗಳೂರು:</strong> ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ಕೊನೆಯ ದಿನ ಸುವರ್ಣ ವಿಧಾನಸೌಧದ ಒಳಗೆ ಪ್ರತಿಭಟನೆ ನಡೆಸಿದ ಬಿಜೆಪಿ ಸದಸ್ಯರ ಮೇಲೆ ದೌರ್ಜನ್ಯ ಎಸಗಿದ ಪೊಲೀಸರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು’ ಎಂದು ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಆಗ್ರಹಿಸಿದರು.</p>.<p>ಸಚಿವೆ ಲಕ್ಷ್ಮಿ ಹೆಬ್ಬಾಳಕರ ಮತ್ತು ಬಿಜೆಪಿಯ ಸಿ.ಟಿ. ರವಿ ನಡುವೆ ನಡೆದ ವಾಗ್ವಾದ, ನಂತರ ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸಿದಾಗ ಸುವರ್ಣವಿಧಾನಸೌಧ ಒಳಗೆ ಬಂದ ಪೊಲೀಸರು ಬಿಜೆಪಿ ಸದಸ್ಯರನ್ನು ವಶಕ್ಕೆ ಪಡೆದಿದ್ದರು. ಈ ಘಟನೆಯನ್ನು ಪ್ರಸ್ತಾಪಿಸಿದ ನಾರಾಯಣ ಸ್ವಾಮಿ, ‘ಪೊಲೀಸರು ಹೇಗೆ ಒಳಗಡೆ ಬಂದರು? ಹೀಗಾದರೆ, ಸದಸ್ಯರಿಗೆ ರಕ್ಷಣೆ ಕೊಡುವವರು ಯಾರು? ಇದು ಹಕ್ಕು ಚ್ಯುತಿ ಅಲ್ಲವೇ? ಪೊಲೀಸರ ಮೇಲೆ ಕ್ರಮ ಆಗಬೇಕು’ ಎಂದು ಒತ್ತಾಯಿಸಿದರು.</p>.<p>ಆಗ ಸಭಾ ನಾಯಕ ಎನ್.ಎಸ್. ಬೋಸರಾಜು, ಕಾಂಗ್ರೆಸ್ ಸದಸ್ಯರಾದ ಸಲೀಂ ಅಹಮದ್, ಐವಾನ್ ಡಿಸೋಜ, ‘ಯಾವ ನಿಯಮದ ಅಡಿ ಈ ವಿಷಯ ಪ್ರಸ್ತಾಪಿಸುತ್ತಿದ್ದೀರಿ’ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಆಡಳಿತ– ವಿರೋಧ ಪಕ್ಷದ ಸದಸ್ಯರ ನಡುವೆ ವಾಗ್ವಾದ ನಡೆಯಿತು.</p>.<p>ಮಧ್ಯಪ್ರವೇಶಿಸಿದ ಸಭಾಪತಿ ಬಸವರಾಜ ಹೊರಟ್ಟಿ, ‘ಈ ಪ್ರಕರಣವನ್ನು ಈಗಾಗಲೇ ಹಕ್ಕು ಚ್ಯುತಿ ಸಮಿತಿಗೆ ವಹಿಸಿದ್ದೇನೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ಕೊನೆಯ ದಿನ ಸುವರ್ಣ ವಿಧಾನಸೌಧದ ಒಳಗೆ ಪ್ರತಿಭಟನೆ ನಡೆಸಿದ ಬಿಜೆಪಿ ಸದಸ್ಯರ ಮೇಲೆ ದೌರ್ಜನ್ಯ ಎಸಗಿದ ಪೊಲೀಸರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು’ ಎಂದು ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಆಗ್ರಹಿಸಿದರು.</p>.<p>ಸಚಿವೆ ಲಕ್ಷ್ಮಿ ಹೆಬ್ಬಾಳಕರ ಮತ್ತು ಬಿಜೆಪಿಯ ಸಿ.ಟಿ. ರವಿ ನಡುವೆ ನಡೆದ ವಾಗ್ವಾದ, ನಂತರ ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸಿದಾಗ ಸುವರ್ಣವಿಧಾನಸೌಧ ಒಳಗೆ ಬಂದ ಪೊಲೀಸರು ಬಿಜೆಪಿ ಸದಸ್ಯರನ್ನು ವಶಕ್ಕೆ ಪಡೆದಿದ್ದರು. ಈ ಘಟನೆಯನ್ನು ಪ್ರಸ್ತಾಪಿಸಿದ ನಾರಾಯಣ ಸ್ವಾಮಿ, ‘ಪೊಲೀಸರು ಹೇಗೆ ಒಳಗಡೆ ಬಂದರು? ಹೀಗಾದರೆ, ಸದಸ್ಯರಿಗೆ ರಕ್ಷಣೆ ಕೊಡುವವರು ಯಾರು? ಇದು ಹಕ್ಕು ಚ್ಯುತಿ ಅಲ್ಲವೇ? ಪೊಲೀಸರ ಮೇಲೆ ಕ್ರಮ ಆಗಬೇಕು’ ಎಂದು ಒತ್ತಾಯಿಸಿದರು.</p>.<p>ಆಗ ಸಭಾ ನಾಯಕ ಎನ್.ಎಸ್. ಬೋಸರಾಜು, ಕಾಂಗ್ರೆಸ್ ಸದಸ್ಯರಾದ ಸಲೀಂ ಅಹಮದ್, ಐವಾನ್ ಡಿಸೋಜ, ‘ಯಾವ ನಿಯಮದ ಅಡಿ ಈ ವಿಷಯ ಪ್ರಸ್ತಾಪಿಸುತ್ತಿದ್ದೀರಿ’ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಆಡಳಿತ– ವಿರೋಧ ಪಕ್ಷದ ಸದಸ್ಯರ ನಡುವೆ ವಾಗ್ವಾದ ನಡೆಯಿತು.</p>.<p>ಮಧ್ಯಪ್ರವೇಶಿಸಿದ ಸಭಾಪತಿ ಬಸವರಾಜ ಹೊರಟ್ಟಿ, ‘ಈ ಪ್ರಕರಣವನ್ನು ಈಗಾಗಲೇ ಹಕ್ಕು ಚ್ಯುತಿ ಸಮಿತಿಗೆ ವಹಿಸಿದ್ದೇನೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>