<p><strong>ಬೆಂಗಳೂರು</strong>: ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಮತ್ತು ಗೌರವ ಸಲ್ಲಿಸುವ ಉದ್ದೇಶದಿಂದ ನಿರ್ಮಿಸಲಾಗಿರುವ ಬೃಹತ್ ವೀರಗಲ್ಲನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಅನಾವರಣ ಮಾಡಿದರು.</p>.<p>ನಗರದ ಕೇಂದ್ರ ಭಾಗದಲ್ಲಿರುವ ‘ರಾಷ್ಟ್ರೀಯ ಸೈನಿಕ ಸ್ಮಾರಕ’ದಲ್ಲಿ ಏಕಶಿಲಾ ವೀರಗಲ್ಲನ್ನು ನಿರ್ಮಿಸಲಾಗಿದೆ. ‘ಕಾರ್ಗಿಲ್ ವಿಜಯ ದಿವಸ’ದ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಈ ವೀರಗಲ್ಲನ್ನು ಸಿದ್ದರಾಮಯ್ಯ ಅವರು ಅನಾವರಣ ಮಾಡಿದರು. </p>.<p>ಸೈನಿಕ ಮತ್ತು ಪುನರ್ವಸತಿ ಇಲಾಖೆ, ರಾಷ್ಟ್ರೀಯ ಸೈನಿಕ ಸ್ಮಾರಕ ನಿರ್ವಹಣಾ ಟ್ರಸ್ಟ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ಸಿದ್ದರಾಮಯ್ಯ ಅವರು ನಿವೃತ್ತ ಸೈನಿಕರಿಗೆ ಅಭಿನಂದನೆ ಸಲ್ಲಿಸಿದರು. ವೀರಗಲ್ಲನ್ನು ರೂಪಿಸಿದ ಶಿಲ್ಪಿ ಅಶೋಕ್ ಗುಡಿಗಾರ್ ಅವರನ್ನು ಸನ್ಮಾನಿಸಿದರು.</p>.<p>ಗೃಹ ಸಚಿವ ಜಿ.ಪರಮೇಶ್ವರ, ವಸತಿ ಸಚಿವ ಬಿ.ಝೆಡ್. ಜಮೀರ್ ಅಹಮದ್ ಖಾನ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಎಂ.ಎಂ.ಸಲೀಂ ಅವರು ಭಾಗಿಯಾಗಿದ್ದರು.</p>.<p>75 ಅಡಿವೀರಗಲ್ಲಿನ ಎತ್ತರ 400 ಟನ್ವೀರಗಲ್ಲಿನ ತೂಕ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಮತ್ತು ಗೌರವ ಸಲ್ಲಿಸುವ ಉದ್ದೇಶದಿಂದ ನಿರ್ಮಿಸಲಾಗಿರುವ ಬೃಹತ್ ವೀರಗಲ್ಲನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಅನಾವರಣ ಮಾಡಿದರು.</p>.<p>ನಗರದ ಕೇಂದ್ರ ಭಾಗದಲ್ಲಿರುವ ‘ರಾಷ್ಟ್ರೀಯ ಸೈನಿಕ ಸ್ಮಾರಕ’ದಲ್ಲಿ ಏಕಶಿಲಾ ವೀರಗಲ್ಲನ್ನು ನಿರ್ಮಿಸಲಾಗಿದೆ. ‘ಕಾರ್ಗಿಲ್ ವಿಜಯ ದಿವಸ’ದ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಈ ವೀರಗಲ್ಲನ್ನು ಸಿದ್ದರಾಮಯ್ಯ ಅವರು ಅನಾವರಣ ಮಾಡಿದರು. </p>.<p>ಸೈನಿಕ ಮತ್ತು ಪುನರ್ವಸತಿ ಇಲಾಖೆ, ರಾಷ್ಟ್ರೀಯ ಸೈನಿಕ ಸ್ಮಾರಕ ನಿರ್ವಹಣಾ ಟ್ರಸ್ಟ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ಸಿದ್ದರಾಮಯ್ಯ ಅವರು ನಿವೃತ್ತ ಸೈನಿಕರಿಗೆ ಅಭಿನಂದನೆ ಸಲ್ಲಿಸಿದರು. ವೀರಗಲ್ಲನ್ನು ರೂಪಿಸಿದ ಶಿಲ್ಪಿ ಅಶೋಕ್ ಗುಡಿಗಾರ್ ಅವರನ್ನು ಸನ್ಮಾನಿಸಿದರು.</p>.<p>ಗೃಹ ಸಚಿವ ಜಿ.ಪರಮೇಶ್ವರ, ವಸತಿ ಸಚಿವ ಬಿ.ಝೆಡ್. ಜಮೀರ್ ಅಹಮದ್ ಖಾನ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಎಂ.ಎಂ.ಸಲೀಂ ಅವರು ಭಾಗಿಯಾಗಿದ್ದರು.</p>.<p>75 ಅಡಿವೀರಗಲ್ಲಿನ ಎತ್ತರ 400 ಟನ್ವೀರಗಲ್ಲಿನ ತೂಕ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>