ಈ ಸಂಬಂಧ ಕೆ.ಸಿ.ಕಾರಿಯಪ್ಪ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತ್ತು. ವಿಚಾರಣೆ ವೇಳೆ ವಿದೇಶಾಂಗ ಸಚಿವಾಲಯದ ಪರ ಹಾಜರಾಗಿದ್ದ ಡೆಪ್ಯುಟಿ ಸಾಲಿಸಿಟರ್ ಜನರಲ್ ಎಚ್.ಶಾಂತಿಭೂಷಣ್, ‘ಪೊಲೀಸ್ ಕ್ಲಿಯರೆನ್ಸ್ ವಿತರಿಸಿದರೆ 60 ನಿಮಿಷಗಳಲ್ಲೇ ವೀಸಾ ಒದಗಿಸಲಾಗುವುದು’ ಎಂದು ನ್ಯಾಯಪೀಠಕ್ಕೆ ಭರವಸೆ ನೀಡಿದ್ದರು. ಇದರನ್ವಯ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಕ್ಲಿಯರೆನ್ಸ್ ನೀಡಿದ್ದರು.