<p><strong>ಬೆಂಗಳೂರು:</strong> ಮುಂದಿನ ವರ್ಷದ ಫೆಬ್ರುವರಿಯಲ್ಲಿ ಕಾರ್ಕಳದಲ್ಲಿ ನಡೆಯುವ ಮಹಾಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ₹77 ಕೋಟಿ ಅನುದಾನ ಬೇಕಾಗಬಹುದು. ಈ ಕಾರ್ಯಕ್ರಮದ ಸಂಪೂರ್ಣ ವ್ಯವಸ್ಥೆಗೆ ಸಮಿತಿಯೊಂದನ್ನು ರಚಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.</p>.<p>ವಿಧಾನಸಭೆಯಲ್ಲಿ ಬಿಜೆಪಿಯ ವಿ. ಸುನಿಲ್ಕುಮಾರ್ ಅವರ ಗಮನ ಸೆಳೆಯುವ ಸೂಚನೆಗೆ ಮುಖ್ಯಮಂತ್ರಿಯವರ ಪರವಾಗಿ ಪ್ರಿಯಾಂಕ್ ಮಾಹಿತಿ ನೀಡಿದರು.</p>.<p>‘12 ವರ್ಷಗಳಿಗೊಮ್ಮೆ ನಡೆಯುವ ಈ ಕಾರ್ಯಕ್ರಮಕ್ಕೆ ಈಗಿನಿಂದಲೇ ಸಿದ್ಧತೆ ನಡೆಸಲಾಗುವುದು. ಎಲ್ಲವನ್ನೂ ಅಚ್ಚುಕಟ್ಟಾಗಿ ನಡೆಸಲು ಬೇಕಾಗುವ ವ್ಯವಸ್ಥೆಯನ್ನು ಸರ್ಕಾರ ಮಾಡಿಕೊಳ್ಳಲಿದೆ. ಈ ಎಲ್ಲ ವಿಷಯವನ್ನು ಮುಖ್ಯಮಂತ್ರಿಯವರ ಗಮನಕ್ಕೆ ತರುತ್ತೇನೆ’ ಎಂದು ಹೇಳಿದರು.</p>.<p>ವಿಷಯ ಪ್ರಸ್ತಾಪಿಸಿದ ಸುನಿಲ್ ಕುಮಾರ್, ‘ಮಹಾಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ದೇಶ–ವಿದೇಶಗಳಿಂದ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಇದಕ್ಕಾಗಿ ಮೂಲಸೌಕರ್ಯಗಳು ಸೇರಿ ಎಲ್ಲ ವ್ಯವಸ್ಥೆ ಮಾಡಿಕೊಳ್ಳಬೇಕು. ಆದ್ದರಿಂದ ಉಪವಿಭಾಗಾಧಿಕಾರಿಯನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಬೇಕು’ ಎಂದು ಅವರು ಸಲಹೆ ನೀಡಿದರು.</p>.<p><strong>ಕೋಳಿ ಸಾಕಣೆ; ದರ ಪರಿಷ್ಕರಣೆಗೆ ಸಮಿತಿ:</strong></p>.<p>‘ಕೋಳಿ ಸಾಕಣಿಕೆದಾರರಿಂದ ಸಗಟು ಖರೀದಿ ಮಾಡುವ ಕಂಪನಿಗಳು ರೈತರಿಗೆ ನೀಡುತ್ತಿರುವ ದರವನ್ನು ಪ್ರತಿ ಕೆಜಿಗೆ ₹20 ನಿಗದಿ ಮಾಡುವುದೂ ಸೇರಿ ಸಹಾಯಧನವನ್ನು ನೀಡುವ ವಿಚಾರವಾಗಿ ಪರಿಶೀಲನೆ ನಡೆಸಲು ಸಮಿತಿಯನ್ನು ರಚಿಸಲಾಗಿದೆ’ ಎಂದು ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ತಿಳಿಸಿದರು.</p>.<p>ಕಾಂಗ್ರೆಸ್ನ ಎಂ.ರೂಪಕಲಾ ಅವರ ಗಮನಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು, ‘ಸರ್ಕಾರ ಯುವ ಜನರು ಮತ್ತು ರೈತರ ಪರವಾಗಿದೆ. ಹೀಗಾಗಿ ಕಂಪನಿಗಳ ಜತೆ ಹಲವು ಬಾರಿ ಸಭೆ ನಡೆಸಲಾಗಿದೆ. ಅದಕ್ಕೆ ಕಂಪನಿಗಳು ಒಪ್ಪಿಕೊಂಡಿಲ್ಲ. ಈ ಕುರಿತು ಸ್ಪಷ್ಟ ತೀರ್ಮಾನ ತೆಗೆದುಕೊಳ್ಳುವ ಸಲುವಾಗಿ ವರದಿ ಪಡೆಯಲು ಸಮಿತಿ ರಚಿಸಲಾಗಿದೆ. ವರದಿ ಸಿಕ್ಕಿದ ತಕ್ಷಣ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮುಂದಿನ ವರ್ಷದ ಫೆಬ್ರುವರಿಯಲ್ಲಿ ಕಾರ್ಕಳದಲ್ಲಿ ನಡೆಯುವ ಮಹಾಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ₹77 ಕೋಟಿ ಅನುದಾನ ಬೇಕಾಗಬಹುದು. ಈ ಕಾರ್ಯಕ್ರಮದ ಸಂಪೂರ್ಣ ವ್ಯವಸ್ಥೆಗೆ ಸಮಿತಿಯೊಂದನ್ನು ರಚಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.</p>.<p>ವಿಧಾನಸಭೆಯಲ್ಲಿ ಬಿಜೆಪಿಯ ವಿ. ಸುನಿಲ್ಕುಮಾರ್ ಅವರ ಗಮನ ಸೆಳೆಯುವ ಸೂಚನೆಗೆ ಮುಖ್ಯಮಂತ್ರಿಯವರ ಪರವಾಗಿ ಪ್ರಿಯಾಂಕ್ ಮಾಹಿತಿ ನೀಡಿದರು.</p>.<p>‘12 ವರ್ಷಗಳಿಗೊಮ್ಮೆ ನಡೆಯುವ ಈ ಕಾರ್ಯಕ್ರಮಕ್ಕೆ ಈಗಿನಿಂದಲೇ ಸಿದ್ಧತೆ ನಡೆಸಲಾಗುವುದು. ಎಲ್ಲವನ್ನೂ ಅಚ್ಚುಕಟ್ಟಾಗಿ ನಡೆಸಲು ಬೇಕಾಗುವ ವ್ಯವಸ್ಥೆಯನ್ನು ಸರ್ಕಾರ ಮಾಡಿಕೊಳ್ಳಲಿದೆ. ಈ ಎಲ್ಲ ವಿಷಯವನ್ನು ಮುಖ್ಯಮಂತ್ರಿಯವರ ಗಮನಕ್ಕೆ ತರುತ್ತೇನೆ’ ಎಂದು ಹೇಳಿದರು.</p>.<p>ವಿಷಯ ಪ್ರಸ್ತಾಪಿಸಿದ ಸುನಿಲ್ ಕುಮಾರ್, ‘ಮಹಾಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ದೇಶ–ವಿದೇಶಗಳಿಂದ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಇದಕ್ಕಾಗಿ ಮೂಲಸೌಕರ್ಯಗಳು ಸೇರಿ ಎಲ್ಲ ವ್ಯವಸ್ಥೆ ಮಾಡಿಕೊಳ್ಳಬೇಕು. ಆದ್ದರಿಂದ ಉಪವಿಭಾಗಾಧಿಕಾರಿಯನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಬೇಕು’ ಎಂದು ಅವರು ಸಲಹೆ ನೀಡಿದರು.</p>.<p><strong>ಕೋಳಿ ಸಾಕಣೆ; ದರ ಪರಿಷ್ಕರಣೆಗೆ ಸಮಿತಿ:</strong></p>.<p>‘ಕೋಳಿ ಸಾಕಣಿಕೆದಾರರಿಂದ ಸಗಟು ಖರೀದಿ ಮಾಡುವ ಕಂಪನಿಗಳು ರೈತರಿಗೆ ನೀಡುತ್ತಿರುವ ದರವನ್ನು ಪ್ರತಿ ಕೆಜಿಗೆ ₹20 ನಿಗದಿ ಮಾಡುವುದೂ ಸೇರಿ ಸಹಾಯಧನವನ್ನು ನೀಡುವ ವಿಚಾರವಾಗಿ ಪರಿಶೀಲನೆ ನಡೆಸಲು ಸಮಿತಿಯನ್ನು ರಚಿಸಲಾಗಿದೆ’ ಎಂದು ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ತಿಳಿಸಿದರು.</p>.<p>ಕಾಂಗ್ರೆಸ್ನ ಎಂ.ರೂಪಕಲಾ ಅವರ ಗಮನಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು, ‘ಸರ್ಕಾರ ಯುವ ಜನರು ಮತ್ತು ರೈತರ ಪರವಾಗಿದೆ. ಹೀಗಾಗಿ ಕಂಪನಿಗಳ ಜತೆ ಹಲವು ಬಾರಿ ಸಭೆ ನಡೆಸಲಾಗಿದೆ. ಅದಕ್ಕೆ ಕಂಪನಿಗಳು ಒಪ್ಪಿಕೊಂಡಿಲ್ಲ. ಈ ಕುರಿತು ಸ್ಪಷ್ಟ ತೀರ್ಮಾನ ತೆಗೆದುಕೊಳ್ಳುವ ಸಲುವಾಗಿ ವರದಿ ಪಡೆಯಲು ಸಮಿತಿ ರಚಿಸಲಾಗಿದೆ. ವರದಿ ಸಿಕ್ಕಿದ ತಕ್ಷಣ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>