ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಷಾರ್ ಮೆಹ್ತಾಗೆ ಕಾನೂನು ವಿವಿ ಗೌರವ ಡಾಕ್ಟರೇಟ್

ಕಾನೂನು ವಿವಿ ಘಟಿಕೋತ್ಸವ ಮಾರ್ಚ್ 14ರಂದು
Last Updated 12 ಮಾರ್ಚ್ 2020, 20:44 IST
ಅಕ್ಷರ ಗಾತ್ರ

ಧಾರವಾಡ:ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ 4ನೇ ವಾರ್ಷಿಕ ಘಟಿಕೋತ್ಸವ ಸಮಾರಂಭ ಮಾರ್ಚ್ 14ರಂದು ಬೆಳಿಗ್ಗೆ ಕರ್ನಾಟಕ ವಿಶ್ವ ವಿದ್ಯಾಲಯದ ಗಾಂಧಿ ಭವದಲ್ಲಿ ಜರುಗಲಿದ್ದು, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತಿದೆ.

ರಾಜ್ಯಪಾಲ ವಜುಭಾಯಿ ವಾಲಾ, ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ವಿಶ್ವವಿದ್ಯಾಲಯದ ಸಮಕುಲಾಧಿಪತಿಯೂ ಆಗಿರುವ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಮೋಹನ ಎಂ. ಶಾಂತನಗೌಡರ ಪಾಲ್ಗೊಳ್ಳಲಿದ್ದಾರೆ.

ಘಟಿಕೋತ್ಸವದಲ್ಲಿ ಪಾಲ್ಗೊಳ್ಳುವವರು ಕೆಮ್ಮು, ಜ್ವರ ಮತ್ತು ಉಸಿರಾಟದ ತೊಂದರೆ ಇದ್ದಲ್ಲಿ ಭಾಗವಹಿಸದಂತೆ ಸೂಚಿಸಲಾಗಿದೆ ಎಂದು ಕುಲಸಚಿವ ಸಿದ್ಧಲಿಂಗಯ್ಯ ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT