<p><strong>ಬೆಂಗಳೂರು:</strong> ಮಂಗಳೂರು ಸಮೀಪದ ಪರಂಗೀಪೇಟೆಯಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿ ದಿಗಂತ್ ನಾಪತ್ತೆಯಾಗಿ 9 ದಿನ ಕಳೆದರೂ ಪತ್ತೆ ಮಾಡಲು ಸಾಧ್ಯವಾಗಿಲ್ಲ. ಆದಷ್ಟು ಬೇಗ ಹುಡುಕಿಸಿಕೊಡಬೇಕು ಎಂದು ಬಿಜೆಪಿಯ ವಿ.ಸುನಿಲ್ಕುಮಾರ್ ಆಗ್ರಹಿಸಿದರು.</p>.<p>ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಸುನಿಲ್ ಕುಮಾರ್, ಪರೀಕ್ಷೆಯ ಹಾಲ್ಟಿಕೆಟ್ ಪಡೆಯಲು ಹೋಗಿ ವಾಪಸ್ ಬರುವಾಗ ನಾಪತ್ತೆ ಆಗಿದ್ದಾನೆ. ಈ ವಿಚಾರ ಎಲ್ಲರಲ್ಲೂ ಆತಂಕ ಹುಟ್ಟಿಸಿದೆ. ಬೇಗನೆ ಪತ್ತೆ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆಯೂ ನಡೆದಿದೆ. ಇದೊಂದು ಅತ್ಯಂತ ಸೂಕ್ಷ ವಿಷಯ ಊಹಾಪೋಹಗಳಿಗೂ ಕಾರಣವಾಗಬಹುದು. ವಿಶೇಷ ತಂಡ ರಚನೆ ಮಾಡಿ ಪತ್ತೆ ಮಾಡಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಸಭಾಧ್ಯಕ್ಷ ಯು.ಟಿ.ಖಾದರ್ ಧ್ವನಿಗೂಡಿಸಿದರು.</p>.<p>ಗೃಹ ಸಚಿವರ ಪರವಾಗಿ ಉತ್ತರ ನೀಡಿದ ಶಿಕ್ಷಣ ಸಚಿವ ಮಧುಬಂಗಾರಪ್ಪ, ಈಗಾಗಲೇ 7 ತಂಡಗಳನ್ನು ರಚನೆ ಮಾಡಿ ಪತ್ತೆ ಕಾರ್ಯ ಆರಂಭಿಸಲಾಗಿದೆ. ಒಂದು ಸ್ಥಳದಲ್ಲಿ ವಿದ್ಯಾರ್ಥಿ ಮೊಬೈಲ್ ಫೋನ್ ಮತ್ತು ಚಪ್ಪಲಿ ಸಿಕ್ಕಿದೆ. ಡ್ರೋನ್ ಮೂಲಕವೂ ಹುಡುಕುವ ಪ್ರಯತ್ನ ನಡೆದಿದೆ. ಯಾವುದೇ ರೀತಿಯ ಸುಳಿವು ಸಿಕ್ಕಿಲ್ಲ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಂಗಳೂರು ಸಮೀಪದ ಪರಂಗೀಪೇಟೆಯಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿ ದಿಗಂತ್ ನಾಪತ್ತೆಯಾಗಿ 9 ದಿನ ಕಳೆದರೂ ಪತ್ತೆ ಮಾಡಲು ಸಾಧ್ಯವಾಗಿಲ್ಲ. ಆದಷ್ಟು ಬೇಗ ಹುಡುಕಿಸಿಕೊಡಬೇಕು ಎಂದು ಬಿಜೆಪಿಯ ವಿ.ಸುನಿಲ್ಕುಮಾರ್ ಆಗ್ರಹಿಸಿದರು.</p>.<p>ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಸುನಿಲ್ ಕುಮಾರ್, ಪರೀಕ್ಷೆಯ ಹಾಲ್ಟಿಕೆಟ್ ಪಡೆಯಲು ಹೋಗಿ ವಾಪಸ್ ಬರುವಾಗ ನಾಪತ್ತೆ ಆಗಿದ್ದಾನೆ. ಈ ವಿಚಾರ ಎಲ್ಲರಲ್ಲೂ ಆತಂಕ ಹುಟ್ಟಿಸಿದೆ. ಬೇಗನೆ ಪತ್ತೆ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆಯೂ ನಡೆದಿದೆ. ಇದೊಂದು ಅತ್ಯಂತ ಸೂಕ್ಷ ವಿಷಯ ಊಹಾಪೋಹಗಳಿಗೂ ಕಾರಣವಾಗಬಹುದು. ವಿಶೇಷ ತಂಡ ರಚನೆ ಮಾಡಿ ಪತ್ತೆ ಮಾಡಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಸಭಾಧ್ಯಕ್ಷ ಯು.ಟಿ.ಖಾದರ್ ಧ್ವನಿಗೂಡಿಸಿದರು.</p>.<p>ಗೃಹ ಸಚಿವರ ಪರವಾಗಿ ಉತ್ತರ ನೀಡಿದ ಶಿಕ್ಷಣ ಸಚಿವ ಮಧುಬಂಗಾರಪ್ಪ, ಈಗಾಗಲೇ 7 ತಂಡಗಳನ್ನು ರಚನೆ ಮಾಡಿ ಪತ್ತೆ ಕಾರ್ಯ ಆರಂಭಿಸಲಾಗಿದೆ. ಒಂದು ಸ್ಥಳದಲ್ಲಿ ವಿದ್ಯಾರ್ಥಿ ಮೊಬೈಲ್ ಫೋನ್ ಮತ್ತು ಚಪ್ಪಲಿ ಸಿಕ್ಕಿದೆ. ಡ್ರೋನ್ ಮೂಲಕವೂ ಹುಡುಕುವ ಪ್ರಯತ್ನ ನಡೆದಿದೆ. ಯಾವುದೇ ರೀತಿಯ ಸುಳಿವು ಸಿಕ್ಕಿಲ್ಲ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>