<p><strong>ಮೈಸೂರು:</strong> ‘ದಲಿತ ಸಮುದಾಯ ಪಕ್ಷದ ಕಡೆ ಬರುತ್ತಿದೆ. ಹೀಗಾಗಿ ಮುಖ್ಯಮಂತ್ರಿ ಸ್ಥಾನ ಕೇಳುವ ದಿನಗಳು ದೂರವಿಲ್ಲ’ ಎಂದು ಬಿಜೆಪಿ ಪರಿಶಿಷ್ಟ ಜಾತಿ ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಅವರು ಹೇಳಿದರು.</p>.<p>ಇಲ್ಲಿ ಭಾನುವಾರ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸಮಾರೋಪದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿ 2ನೇ ಬಾರಿ ಅಧಿಕಾರಕ್ಕೆ ಬಂದಾಗ ಗೋವಿಂದ ಕಾರಜೋಳ ಅವರನ್ನು ಉಪ ಮುಖ್ಯಮಂತ್ರಿ ಮಾಡಿತ್ತು. ಮುಂದೆ ಸಮಾಜಕ್ಕೆ ಮುಖ್ಯಮಂತ್ರಿ ಅವಕಾಶ ಕೇಳುತ್ತೇವೆ. ಸಿಗುವ ಭರವಸೆಯೂ ಇದೆ’ ಎಂದರು.</p>.<p>‘ಈಗಿನ ರಾಜ್ಯ ಸರ್ಕಾರವು ಪರಿಶಿಷ್ಟರಿಗೆ ಮೀಸಲಾತಿ ಪ್ರಮಾಣ ಹೆಚ್ಚಿಸಿದೆ. 100 ಪರಿಶಿಷ್ಟ ವಿದ್ಯಾರ್ಥಿನಿಲಯಗಳನ್ನು ಸ್ಥಾಪಿಸುತ್ತಿದೆ. ರಾಜ್ಯದ 7 ಜಿಲ್ಲೆಗಳ 10 ಸ್ಥಳಗಳಲ್ಲಿ ಅಂಬೇಡ್ಕರ್ ಪಾದಸ್ಪರ್ಶಿ ಸ್ಮಾರಕವನ್ನು ಸ್ಥಾಪಿಸಲಾಗುತ್ತಿದೆ’ ಎಂದರು.</p>.<p><strong>ಪರಿಶಿಷ್ಟರ ಪರ:</strong> ಸಮಾರೋಪದಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ‘ಬಿಜೆಪಿಯಲ್ಲಿ ಪರಿವಾರವಾದದಿಂದ ರಾಜಕಾರಣಕ್ಕೆ ಯಾರೂ ಬಂದಿಲ್ಲ, ಪರಿಶ್ರಮದಿಂದ ಬಂದಿದ್ದಾರೆ. ಕಾಂಗ್ರೆಸ್ಗೆ ಡಾ.ಬಿ.ಆರ್.ಅಂಬೇಡ್ಕರ್ ಶಾಪವಿದೆ. ನರೇಂದ್ರ ಮೋದಿ ಸರ್ಕಾರ ಪಂಚತೀರ್ಥ ಯೋಜನೆ ಮೂಲಕ ಅಂಬೇಡ್ಕರ್ಗೆ ಗೌರವ ನೀಡಿದೆ’ ಎಂದು ಹೇಳಿದರು.</p>.<p>ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಲಾಲ್ ಸಿಂಗ್ ಆರ್ಯ ಮಾತನಾಡಿ, ‘ಭಾರತ್ ಜೋಡೊ ಯಾತ್ರೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಕನ್ಹಯ್ಯ ಕುಮಾರ್ ಅಂಥ ತುಕುಡೆ ತುಕುಡೆ ಗ್ಯಾಂಗ್ ಜೊತೆ ಸಾಗಿದೆ. ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ನ ಪವರ್ಲೆಸ್ ಅಧ್ಯಕ್ಷ’ ಎಂದು ಟೀಕಿಸಿದರು.</p>.<p>‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಉತ್ತರಪ್ರದೇಶ ಮಾದರಿಯಲ್ಲಿ ದಲಿತರ ಮತಗಳನ್ನು ಸೆಳೆಯಬೇಕು. ದಲಿತರ ಕೇರಿಗಳಿಗೆ ಹೋಗಿ ಸಮಸ್ಯೆ ಆಲಿಸಿ, ಭೋಜನ ಸ್ವೀಕರಿಸಬೇಕು’ ಎಂದು ಮೋರ್ಚಾ ಪದಾಧಿಕಾರಿಗಳಿಗೆ ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ದಲಿತ ಸಮುದಾಯ ಪಕ್ಷದ ಕಡೆ ಬರುತ್ತಿದೆ. ಹೀಗಾಗಿ ಮುಖ್ಯಮಂತ್ರಿ ಸ್ಥಾನ ಕೇಳುವ ದಿನಗಳು ದೂರವಿಲ್ಲ’ ಎಂದು ಬಿಜೆಪಿ ಪರಿಶಿಷ್ಟ ಜಾತಿ ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಅವರು ಹೇಳಿದರು.</p>.<p>ಇಲ್ಲಿ ಭಾನುವಾರ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸಮಾರೋಪದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿ 2ನೇ ಬಾರಿ ಅಧಿಕಾರಕ್ಕೆ ಬಂದಾಗ ಗೋವಿಂದ ಕಾರಜೋಳ ಅವರನ್ನು ಉಪ ಮುಖ್ಯಮಂತ್ರಿ ಮಾಡಿತ್ತು. ಮುಂದೆ ಸಮಾಜಕ್ಕೆ ಮುಖ್ಯಮಂತ್ರಿ ಅವಕಾಶ ಕೇಳುತ್ತೇವೆ. ಸಿಗುವ ಭರವಸೆಯೂ ಇದೆ’ ಎಂದರು.</p>.<p>‘ಈಗಿನ ರಾಜ್ಯ ಸರ್ಕಾರವು ಪರಿಶಿಷ್ಟರಿಗೆ ಮೀಸಲಾತಿ ಪ್ರಮಾಣ ಹೆಚ್ಚಿಸಿದೆ. 100 ಪರಿಶಿಷ್ಟ ವಿದ್ಯಾರ್ಥಿನಿಲಯಗಳನ್ನು ಸ್ಥಾಪಿಸುತ್ತಿದೆ. ರಾಜ್ಯದ 7 ಜಿಲ್ಲೆಗಳ 10 ಸ್ಥಳಗಳಲ್ಲಿ ಅಂಬೇಡ್ಕರ್ ಪಾದಸ್ಪರ್ಶಿ ಸ್ಮಾರಕವನ್ನು ಸ್ಥಾಪಿಸಲಾಗುತ್ತಿದೆ’ ಎಂದರು.</p>.<p><strong>ಪರಿಶಿಷ್ಟರ ಪರ:</strong> ಸಮಾರೋಪದಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ‘ಬಿಜೆಪಿಯಲ್ಲಿ ಪರಿವಾರವಾದದಿಂದ ರಾಜಕಾರಣಕ್ಕೆ ಯಾರೂ ಬಂದಿಲ್ಲ, ಪರಿಶ್ರಮದಿಂದ ಬಂದಿದ್ದಾರೆ. ಕಾಂಗ್ರೆಸ್ಗೆ ಡಾ.ಬಿ.ಆರ್.ಅಂಬೇಡ್ಕರ್ ಶಾಪವಿದೆ. ನರೇಂದ್ರ ಮೋದಿ ಸರ್ಕಾರ ಪಂಚತೀರ್ಥ ಯೋಜನೆ ಮೂಲಕ ಅಂಬೇಡ್ಕರ್ಗೆ ಗೌರವ ನೀಡಿದೆ’ ಎಂದು ಹೇಳಿದರು.</p>.<p>ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಲಾಲ್ ಸಿಂಗ್ ಆರ್ಯ ಮಾತನಾಡಿ, ‘ಭಾರತ್ ಜೋಡೊ ಯಾತ್ರೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಕನ್ಹಯ್ಯ ಕುಮಾರ್ ಅಂಥ ತುಕುಡೆ ತುಕುಡೆ ಗ್ಯಾಂಗ್ ಜೊತೆ ಸಾಗಿದೆ. ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ನ ಪವರ್ಲೆಸ್ ಅಧ್ಯಕ್ಷ’ ಎಂದು ಟೀಕಿಸಿದರು.</p>.<p>‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಉತ್ತರಪ್ರದೇಶ ಮಾದರಿಯಲ್ಲಿ ದಲಿತರ ಮತಗಳನ್ನು ಸೆಳೆಯಬೇಕು. ದಲಿತರ ಕೇರಿಗಳಿಗೆ ಹೋಗಿ ಸಮಸ್ಯೆ ಆಲಿಸಿ, ಭೋಜನ ಸ್ವೀಕರಿಸಬೇಕು’ ಎಂದು ಮೋರ್ಚಾ ಪದಾಧಿಕಾರಿಗಳಿಗೆ ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>