<p><strong>ದೇವದುರ್ಗ (ರಾಯಚೂರು ಜಿಲ್ಲೆ):</strong> ಜೆಡಿಎಸ್ ಪಂಚರತ್ನ ಪ್ರಚಾರ ವಾಹನದ ಮೇಲೆ ತಾಲ್ಲೂಕಿನ ದೇವತ್ಕಲ್ ಗ್ರಾಮದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಬೆಂಬಲಿಗರು ಭಾನುವಾರ ಕಲ್ಲು ತೂರಾಟ ಮಾಡಿದ್ದರಿಂದ ಮೂವರು ಗಾಯ ಗೊಂಡಿದ್ದರು.</p>.<p>ಈ ದಾಳಿಗೆ ಪ್ರಚೋದನೆ ನೀಡಿದವರ ವಿರುದ್ಧ ದೂರು ದಾಖಲಿಸುವಂತೆ ಜಾಲಹಳ್ಳಿ ಪೊಲೀಸ್ ಠಾಣೆ ಎದುರು ಜೆಡಿಎಸ್ ಅಭ್ಯರ್ಥಿ ಕರೆಮ್ಮ ನಾಯಕ ನೇತೃತ್ವದಲ್ಲಿ ಅಹೋರಾತ್ರಿವರೆಗೂ ಪ್ರತಿಭಟನೆ ನಡೆಯಿತು.</p>.<p>ಪೊಲೀಸರು ದೂರು ದಾಖಲಿಸಿಕೊಳ್ಳದಿರುವುದಕ್ಕೆ ಸೋಮವಾರ ಪ್ರತಿಕ್ರಿಯೆ ನೀಡಿದ ಕರೆಮ್ಮ, ‘ಬಿಜೆಪಿ ಶಾಸಕ ಶಿವನಗೌಡ ನಾಯಕ ಹಾಗೂ ಕಾಂಗ್ರೆಸ್ ಕಡೆಯವರ ಕುಮ್ಮಕ್ಕಿನಿಂದ ಜೆಡಿಎಸ್ನವರ ಮೇಲೆ ಹಲ್ಲೆ ಕೃತ್ಯ ಮರುಕಳಿಸುತ್ತಿವೆ. ದೇವದುರ್ಗದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ ನಡೆಯುತ್ತಿದೆ’ ಎಂದರು.</p>.<p><strong>‘ಗೂಂಡಾಗಿರಿಗೆ ತಲೆ ಬಾಗುವುದಿಲ್ಲ’<br />ಬೆಂಗಳೂರು: </strong>ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ನಡೆಸುವ ಗೂಂಡಾಗಿರಿಗೆ ತಮ್ಮ ಕಾರ್ಯಕರ್ತರು ತಲೆ ಬಾಗುವುದಿಲ್ಲ ಎಂದು ಜೆಡಿಎಸ್ ಹೇಳಿದೆ.</p>.<p>ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನಲ್ಲಿ ಜೆಡಿಎಸ್ ಪ್ರಚಾರ ವಾಹನದ ಮೇಲೆ ಭಾನುವಾರ ರಾತ್ರಿ ಕಲ್ಲು ತೂರಾಟ ನಡೆದ ಪ್ರಕರಣ ಕುರಿತು ಪಕ್ಷದ ಅಧಿಕೃತ ಟ್ವಿಟರ್ ಖಾತೆಯಿಂದ ಸೋಮವಾರ ಪ್ರತಿಕ್ರಿಯಿಸಿದ್ದು, ‘ಸಿದ್ಧಾಂತದ ಮೂಲಕ ಜೆಡಿಎಸ್ ಅನ್ನು ಎದುರಿಸಲಾಗದೆ ದಾಳಿ ನಡೆಸಿದ್ದಾರೆ’ ಎಂದು ಹೇಳಿದೆ.</p>.<p>ತೋಳ್ಬಲದಿಂದ ಜೆಡಿಎಸ್ ಪಕ್ಷವನ್ನು ಹೆದರಿಸಬಹುದು ಎಂದು ತಿಳಿದಿದ್ದರೆ ಅದು ಭ್ರಮೆ. ಇಂತಹ ಪ್ರವೃತ್ತಿಯನ್ನು ಕಾರ್ಯಕರ್ತರಿಗೆ ಹೇಳಿಕೊಟ್ಟಿರುವ ಎರಡೂ ಪಕ್ಷಗಳ ನಾಯಕರಿಗೆ ಅಧಿಕಾರದ ಮದ ಏರಿದೆ. ದಾಳಿ ನಡೆಸಿದ ಆರೋಪಿಗಳನ್ನು ಪೊಲೀಸರು ತಕ್ಷಣ ಬಂಧಿಸಬೇಕು ಎಂದು ಅವರು ಆಗ್ರಹಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವದುರ್ಗ (ರಾಯಚೂರು ಜಿಲ್ಲೆ):</strong> ಜೆಡಿಎಸ್ ಪಂಚರತ್ನ ಪ್ರಚಾರ ವಾಹನದ ಮೇಲೆ ತಾಲ್ಲೂಕಿನ ದೇವತ್ಕಲ್ ಗ್ರಾಮದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಬೆಂಬಲಿಗರು ಭಾನುವಾರ ಕಲ್ಲು ತೂರಾಟ ಮಾಡಿದ್ದರಿಂದ ಮೂವರು ಗಾಯ ಗೊಂಡಿದ್ದರು.</p>.<p>ಈ ದಾಳಿಗೆ ಪ್ರಚೋದನೆ ನೀಡಿದವರ ವಿರುದ್ಧ ದೂರು ದಾಖಲಿಸುವಂತೆ ಜಾಲಹಳ್ಳಿ ಪೊಲೀಸ್ ಠಾಣೆ ಎದುರು ಜೆಡಿಎಸ್ ಅಭ್ಯರ್ಥಿ ಕರೆಮ್ಮ ನಾಯಕ ನೇತೃತ್ವದಲ್ಲಿ ಅಹೋರಾತ್ರಿವರೆಗೂ ಪ್ರತಿಭಟನೆ ನಡೆಯಿತು.</p>.<p>ಪೊಲೀಸರು ದೂರು ದಾಖಲಿಸಿಕೊಳ್ಳದಿರುವುದಕ್ಕೆ ಸೋಮವಾರ ಪ್ರತಿಕ್ರಿಯೆ ನೀಡಿದ ಕರೆಮ್ಮ, ‘ಬಿಜೆಪಿ ಶಾಸಕ ಶಿವನಗೌಡ ನಾಯಕ ಹಾಗೂ ಕಾಂಗ್ರೆಸ್ ಕಡೆಯವರ ಕುಮ್ಮಕ್ಕಿನಿಂದ ಜೆಡಿಎಸ್ನವರ ಮೇಲೆ ಹಲ್ಲೆ ಕೃತ್ಯ ಮರುಕಳಿಸುತ್ತಿವೆ. ದೇವದುರ್ಗದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ ನಡೆಯುತ್ತಿದೆ’ ಎಂದರು.</p>.<p><strong>‘ಗೂಂಡಾಗಿರಿಗೆ ತಲೆ ಬಾಗುವುದಿಲ್ಲ’<br />ಬೆಂಗಳೂರು: </strong>ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ನಡೆಸುವ ಗೂಂಡಾಗಿರಿಗೆ ತಮ್ಮ ಕಾರ್ಯಕರ್ತರು ತಲೆ ಬಾಗುವುದಿಲ್ಲ ಎಂದು ಜೆಡಿಎಸ್ ಹೇಳಿದೆ.</p>.<p>ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನಲ್ಲಿ ಜೆಡಿಎಸ್ ಪ್ರಚಾರ ವಾಹನದ ಮೇಲೆ ಭಾನುವಾರ ರಾತ್ರಿ ಕಲ್ಲು ತೂರಾಟ ನಡೆದ ಪ್ರಕರಣ ಕುರಿತು ಪಕ್ಷದ ಅಧಿಕೃತ ಟ್ವಿಟರ್ ಖಾತೆಯಿಂದ ಸೋಮವಾರ ಪ್ರತಿಕ್ರಿಯಿಸಿದ್ದು, ‘ಸಿದ್ಧಾಂತದ ಮೂಲಕ ಜೆಡಿಎಸ್ ಅನ್ನು ಎದುರಿಸಲಾಗದೆ ದಾಳಿ ನಡೆಸಿದ್ದಾರೆ’ ಎಂದು ಹೇಳಿದೆ.</p>.<p>ತೋಳ್ಬಲದಿಂದ ಜೆಡಿಎಸ್ ಪಕ್ಷವನ್ನು ಹೆದರಿಸಬಹುದು ಎಂದು ತಿಳಿದಿದ್ದರೆ ಅದು ಭ್ರಮೆ. ಇಂತಹ ಪ್ರವೃತ್ತಿಯನ್ನು ಕಾರ್ಯಕರ್ತರಿಗೆ ಹೇಳಿಕೊಟ್ಟಿರುವ ಎರಡೂ ಪಕ್ಷಗಳ ನಾಯಕರಿಗೆ ಅಧಿಕಾರದ ಮದ ಏರಿದೆ. ದಾಳಿ ನಡೆಸಿದ ಆರೋಪಿಗಳನ್ನು ಪೊಲೀಸರು ತಕ್ಷಣ ಬಂಧಿಸಬೇಕು ಎಂದು ಅವರು ಆಗ್ರಹಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>