ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸ್ವರೂಪ್, ‘ರೇವಣ್ಣ ಸಾಹೇಬರನ್ನು ಭೇಟಿಯಾಗಿ ಹತ್ತು ದಿನ ಆಗಿತ್ತು. ಸಾಹೇಬ್ರು ನಮ್ಮ ಪಕ್ಷದ ನಾಯಕರು. ಪಂಚರತ್ನ ಯಾತ್ರೆ ಬಗ್ಗೆ ಕುಳಿತು ಮಾತನಾಡೋಣ ಅಂತ ಹೇಳಿದ್ದಾರಷ್ಟೇ. ಟಿಕೆಟ್ ವಿಚಾರದ ಬಗ್ಗೆ ದೊಡ್ಡವರೆಲ್ಲ ಕುಳಿತುಕೊಂಡು ತೀರ್ಮಾನಿಸೋಣ ಎಂದಿದ್ದಾರೆ’ ಎಂದು ತಿಳಿಸಿದರು.