ಹುಣಸೂರು (ಮೈಸೂರು ಜಿಲ್ಲೆ): ವಿಧಾನಸಭೆ ಚುನಾವಣೆ ಘೋಷಣೆಗೂ ಮುನ್ನವೇ ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ ಅಖಾಡ ರಂಗೇರಿದೆ. ಈ ಚುನಾವಣೆಯಲ್ಲಿ ಜೆಡಿಎಸ್ ಗೆಲ್ಲಿಸಲೇಬೇಕು ಎಂಬ ಹಟಕ್ಕೆ ಬಿದ್ದಿರುವ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಘೋಷಿತ ಅಭ್ಯರ್ಥಿ ಶಾಸಕ ಜಿ.ಟಿ.ದೇವೇಗೌಡ ಪುತ್ರ ಜಿ.ಡಿ.ಹರೀಶ್ಗೌಡಗೆ ಭರಪೂರ ದೇಣಿಗೆ ನೀಡುತ್ತಿದ್ದಾರೆ.