<p><strong>ಬೆಂಗಳೂರು: ‘</strong>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಮುಂಬರುವ ವಿಧಾನಸಭೆ ಚುನಾವಣೆಗೆ ಜನರ ಮುಂದೆ ಹಗರಣಗಳ ಸಾಧನೆ ಪಟ್ಟಿ ಹಿಡಿದು ಮತ ಕೇಳಲು ಹೋಗುವಿರಾ’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. </p>.<p>ರಾಜ್ಯದ ವಿವಿಧ ನೀರಾವರಿ ಯೋಜನೆಗಳಲ್ಲಿ ಅಕ್ರಮ ಕುರಿತು ‘ಪ್ರಜಾವಾಣಿ’ಯಲ್ಲಿ ಪ್ರಕಟಗೊಂಡಿರುವ ವರದಿಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ರಾಜ್ಯದ ವಿವಿಧ ನೀರಾವರಿ ಯೋಜನೆಗಳಲ್ಲಿ ಒಟ್ಟು ₹22,000 ಕೋಟಿ ಅಕ್ರಮ ನಡೆದಿದೆ ಎಂದು ಸ್ವತಃ ಬಿಜೆಪಿ ಶಾಸಕರೇ ದೂರಿದರೂ ಸಿಎಂ ಮಾತಾಡದಿರುವುದೇಕೆ’ ಎಂದು ಟೀಕಿಸಿದೆ. </p>.<p>‘ಬೊಮ್ಮಾಯಿ ಅವರೇ, ನಿಮ್ಮ ಆಡಳಿತದಲ್ಲಿ ಯಾವುದೇ ಒಂದು ಇಲಾಖೆಯೂ ಹಗರಣ ಮುಕ್ತವಾಗಿಲ್ಲವೇಕೆ?, ಚುನಾವಣೆಗೆ ಜನರ ಮುಂದೆ ಹಗರಣಗಳ ಸಾಧನೆ ಪಟ್ಟಿ ಹಿಡಿದು ಮತ ಕೇಳಲು ಹೋಗುವಿರಾ? ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.</p>.<p>ವಿವಿಧ ನೀರಾವರಿ ನಿಗಮಗಳಲ್ಲಿ ₹22,200 ಕೋಟಿ ಮೊತ್ತದ ಟೆಂಡರ್ ಅಕ್ರಮ ನಡೆದಿದ್ದು, ಟೆಂಡರ್ಗಳನ್ನು ಕೂಡಲೇ ರದ್ದುಪಡಿಸಬೇಕು ಎಂದು ಹೊಸದುರ್ಗ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೂಳಿಹಟ್ಟಿ ಶೇಖರ್ ಆಗ್ರಹಿಸಿದ್ದಾರೆ.</p>.<p>ಅಕ್ರಮದ ಕುರಿತು ಜಲಸಂಪನ್ಮೂಲ ಇಲಾಖೆ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿಗೆ ಫೆ.3ರಂದು ದೂರು ನೀಡಿರುವ ಅವರು, ಕಾಮ ಗಾರಿಗಳ ಕಾರ್ಯಾದೇಶ ರದ್ದುಪಡಿಸಿ ಮರು ಟೆಂಡರ್ ಕರೆಯಬೇಕು ಎಂದು ಅವರು ಒತ್ತಾಯಿಸಿದ್ದಾರೆ.</p>.<p><strong>ಓದಿ...</strong></p>.<p><a href="https://www.prajavani.net/karnataka-news/rs-22200-crore-tender-for-irrigation-illegal-alleges-bjp-mla-goolihatti-1012510.html" target="_blank">ನೀರಾವರಿ: ₹22,200 ಕೋಟಿ ಟೆಂಡರ್ ಅಕ್ರಮ -ಬಿಜೆಪಿ ಶಾಸಕ ಗೂಳಿಹಟ್ಟಿ ಆರೋಪ</a> </p>.<p><a href="https://www.prajavani.net/india-news/resign-and-contest-against-me-from-worli-aaditya-thackerays-dare-to-shinde-1012656.html" target="_blank">ಧೈರ್ಯವಿದ್ದರೆ ರಾಜೀನಾಮೆ ನೀಡಿ ನನ್ನ ವಿರುದ್ಧ ಸ್ಪರ್ಧಿಸಿ: ಶಿಂದೆಗೆ ಆದಿತ್ಯ ಸವಾಲು</a></p>.<p><a href="https://www.prajavani.net/sports/cricket/pcb-threatens-not-to-take-part-in-world-cup-2023-if-asia-cup-moves-out-of-pakistan-sources-1012652.html" target="_blank">ಏಷ್ಯಾ ಕಪ್ ಟೂರ್ನಿ ಆಯೋಜಿಸದಿದ್ದರೆ, ವಿಶ್ವಕಪ್ನಲ್ಲಿ ಭಾಗವಹಿಸುವುದಿಲ್ಲ: ಪಿಸಿಬಿ ಬೆದರಿಕೆ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: ‘</strong>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಮುಂಬರುವ ವಿಧಾನಸಭೆ ಚುನಾವಣೆಗೆ ಜನರ ಮುಂದೆ ಹಗರಣಗಳ ಸಾಧನೆ ಪಟ್ಟಿ ಹಿಡಿದು ಮತ ಕೇಳಲು ಹೋಗುವಿರಾ’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. </p>.<p>ರಾಜ್ಯದ ವಿವಿಧ ನೀರಾವರಿ ಯೋಜನೆಗಳಲ್ಲಿ ಅಕ್ರಮ ಕುರಿತು ‘ಪ್ರಜಾವಾಣಿ’ಯಲ್ಲಿ ಪ್ರಕಟಗೊಂಡಿರುವ ವರದಿಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ರಾಜ್ಯದ ವಿವಿಧ ನೀರಾವರಿ ಯೋಜನೆಗಳಲ್ಲಿ ಒಟ್ಟು ₹22,000 ಕೋಟಿ ಅಕ್ರಮ ನಡೆದಿದೆ ಎಂದು ಸ್ವತಃ ಬಿಜೆಪಿ ಶಾಸಕರೇ ದೂರಿದರೂ ಸಿಎಂ ಮಾತಾಡದಿರುವುದೇಕೆ’ ಎಂದು ಟೀಕಿಸಿದೆ. </p>.<p>‘ಬೊಮ್ಮಾಯಿ ಅವರೇ, ನಿಮ್ಮ ಆಡಳಿತದಲ್ಲಿ ಯಾವುದೇ ಒಂದು ಇಲಾಖೆಯೂ ಹಗರಣ ಮುಕ್ತವಾಗಿಲ್ಲವೇಕೆ?, ಚುನಾವಣೆಗೆ ಜನರ ಮುಂದೆ ಹಗರಣಗಳ ಸಾಧನೆ ಪಟ್ಟಿ ಹಿಡಿದು ಮತ ಕೇಳಲು ಹೋಗುವಿರಾ? ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.</p>.<p>ವಿವಿಧ ನೀರಾವರಿ ನಿಗಮಗಳಲ್ಲಿ ₹22,200 ಕೋಟಿ ಮೊತ್ತದ ಟೆಂಡರ್ ಅಕ್ರಮ ನಡೆದಿದ್ದು, ಟೆಂಡರ್ಗಳನ್ನು ಕೂಡಲೇ ರದ್ದುಪಡಿಸಬೇಕು ಎಂದು ಹೊಸದುರ್ಗ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೂಳಿಹಟ್ಟಿ ಶೇಖರ್ ಆಗ್ರಹಿಸಿದ್ದಾರೆ.</p>.<p>ಅಕ್ರಮದ ಕುರಿತು ಜಲಸಂಪನ್ಮೂಲ ಇಲಾಖೆ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿಗೆ ಫೆ.3ರಂದು ದೂರು ನೀಡಿರುವ ಅವರು, ಕಾಮ ಗಾರಿಗಳ ಕಾರ್ಯಾದೇಶ ರದ್ದುಪಡಿಸಿ ಮರು ಟೆಂಡರ್ ಕರೆಯಬೇಕು ಎಂದು ಅವರು ಒತ್ತಾಯಿಸಿದ್ದಾರೆ.</p>.<p><strong>ಓದಿ...</strong></p>.<p><a href="https://www.prajavani.net/karnataka-news/rs-22200-crore-tender-for-irrigation-illegal-alleges-bjp-mla-goolihatti-1012510.html" target="_blank">ನೀರಾವರಿ: ₹22,200 ಕೋಟಿ ಟೆಂಡರ್ ಅಕ್ರಮ -ಬಿಜೆಪಿ ಶಾಸಕ ಗೂಳಿಹಟ್ಟಿ ಆರೋಪ</a> </p>.<p><a href="https://www.prajavani.net/india-news/resign-and-contest-against-me-from-worli-aaditya-thackerays-dare-to-shinde-1012656.html" target="_blank">ಧೈರ್ಯವಿದ್ದರೆ ರಾಜೀನಾಮೆ ನೀಡಿ ನನ್ನ ವಿರುದ್ಧ ಸ್ಪರ್ಧಿಸಿ: ಶಿಂದೆಗೆ ಆದಿತ್ಯ ಸವಾಲು</a></p>.<p><a href="https://www.prajavani.net/sports/cricket/pcb-threatens-not-to-take-part-in-world-cup-2023-if-asia-cup-moves-out-of-pakistan-sources-1012652.html" target="_blank">ಏಷ್ಯಾ ಕಪ್ ಟೂರ್ನಿ ಆಯೋಜಿಸದಿದ್ದರೆ, ವಿಶ್ವಕಪ್ನಲ್ಲಿ ಭಾಗವಹಿಸುವುದಿಲ್ಲ: ಪಿಸಿಬಿ ಬೆದರಿಕೆ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>