ಸಿಲಿಂಡರ್ ಬೆಲೆ ಏರಿಕೆ ವಿಚಾರ ಪ್ರಸ್ತಾಪಿಸಿ ಟ್ವೀಟ್ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ‘ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಕೆಲವು ದಿನಗಳೇ ಬಾಕಿ ಉಳಿದಿವೆ. ಈ ಬಾರಿ ಮತದಾನ ಮಾಡುವ ಮುನ್ನ ನಿಮ್ಮ ಮನೆಯ ಎಲ್ಪಿಜಿ ಸಿಲಿಂಡರ್ಗೆ ನಮಸ್ಕರಿಸಿ ಯಾರಿಗೆ ಮತ ನೀಡಬೇಕೆಂದು ನಿರ್ಧರಿಸಿ. ಇದು ರಾಜ್ಯದ ಜನತೆಗೆ ನನ್ನ ವಿನಮ್ರ ಮನವಿ’ ಬರೆದುಕೊಂಡಿದ್ದಾರೆ.