ವೈ.ಎಸ್.ವಿ. ದತ್ತ ಮಾತನಾಡಿ, ‘ಸರ್ವಾಧಿಕಾರಿ ಶಕ್ತಿಗಳಿಗೆ ಸೋಲಾಗಲಿ ಎಂದು ಯಾವುದೇ ಷರತ್ತು ಇಲ್ಲದೆ ಕಾಂಗ್ರೆಸ್ ಸೇರಿದ್ದೇನೆ. ಮೊದಲಿನಿಂದಲೂ ನಾನು ಎಡಪಂಥಿಯ. ಹೀಗಾಗಿ, ನನಗೆ ಅತ್ಯಂತ ಹತ್ತಿರವಾದ ಕಾಂಗ್ರೆಸ್ ಪಕ್ಷ ಸೇರಿದ್ದೇನೆ’ ಎಂದರು. ‘ಅನಿವಾರ್ಯ ಕಾರಣಗಳಿಂದ ಬಿಜೆಪಿ ಸೇರಿದ್ದೆ. ಪರಿಶಿಷ್ಟ ಜಾತಿ, ಜನಾಂಗಗಳ ರಕ್ಷಣೆ ಕಾಂಗ್ರೆಸ್ನಿಂದ ಮಾತ್ರ ಸಾಧ್ಯ ಎಂದು ತಿಳಿದು ಈ ಪಕ್ಷಕ್ಕೆ ಸೇರುತ್ತಿದ್ದೇನೆ’ ಎಂದು ನಾಗೇಶ್ ಹೇಳಿದರು.