ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಣಿಗಲ್‌ ವಿಧಾನಸಭಾ ಕ್ಷೇತ್ರ: ಬಾಗಿನದ ಜೊತೆಗೆ ಬಾಡೂಟ

Last Updated 10 ಮಾರ್ಚ್ 2023, 19:45 IST
ಅಕ್ಷರ ಗಾತ್ರ

ತುಮಕೂರು: ಕುಣಿಗಲ್‌ ವಿಧಾನಸಭಾ ಕ್ಷೇತ್ರದಲ್ಲಿ ‘ಬಾಗಿನ ಮತ್ತು ಬಾಡೂಟ’ ಕಾರ್ಯಕ್ರಮಗಳು ಜೋರಾಗಿಯೇ ನಡೆಯುತ್ತಿವೆ.

ಬಿಜೆಪಿ ಟಿಕೆಟ್‌ ಆಕಾಂಕ್ಷಿ ರಾಜೇಶ್‌ಗೌಡ ಅವರು ಶುಕ್ರವಾರ ತಾಲ್ಲೂಕಿನ ಮಾರ್ಕೋನಹಳ್ಳಿ ಕ್ರಾಸ್‌ನ ಸಂಕ್ರಾಂತಿ ಗುಡ್ಡದ ಬಳಿ ಸ್ತ್ರೀಶಕ್ತಿ ಸಮಾವೇಶ ನಡೆಸಿ ಐದು ಸಾವಿರ ಮಹಿಳೆಯರಿಗೆ ಬಾಗಿನ ಮತ್ತು ಬಾಡೂಟದ ವ್ಯವಸ್ಥೆ ಮಾಡಿದ್ದರು. ಕಳೆದ ಶುಕ್ರವಾರವೂ ಸಂತೇಪೇಟೆಯಲ್ಲಿ ಇದೇ ರೀತಿ ಕಾರ್ಯಕ್ರಮ ಮಾಡಿದ್ದರು.

ಈ ಕ್ಷೇತ್ರದಲ್ಲಿ ರಾಜೇಶ್‌ಗೌಡ, ಡಿ. ಕೃಷ್ಣಕುಮಾರ್, ಮಾಜಿ ಸಂಸದ ಎಸ್‌.ಪಿ. ಮುದ್ದಹನುಮೇಗೌಡ ಅವರು ಬಿಜೆಪಿಯ ಟಿಕೆಟ್‌ ಆಕಾಂಕ್ಷಿಗಳಾಗಿದ್ದಾರೆ. ಈ ಮೂವರು ವಿವಿಧ ರೀತಿಯಲ್ಲಿ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ.

ಪಿಎಲ್‌ಡಿ ಬ್ಯಾಂಕ್‌ ರಾಜ್ಯ ಘಟಕದ ಅಧ್ಯಕ್ಷ, ಮೂರು ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಸೋಲು ಕಂಡಿರುವ ಮುಖಂಡ ಡಿ. ಕೃಷ್ಣಕುಮಾರ್‌ ಪಂಚಾಯಿತಿವಾರು ಜನ ಸಂಕಲ್ಪ ಯಾತ್ರೆ ನಡೆಸುತ್ತಿದ್ದಾರೆ. ಪಟ್ಟಣದಲ್ಲಿ ಮೂರು ಸಾವಿರ ಹಾಲು ಉತ್ಪಾದಕರಿಗೆ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT